2:24 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು