4:36 PM Monday28 - July 2025
ಬ್ರೇಕಿಂಗ್ ನ್ಯೂಸ್
ಮಡಿಕೇರಿ -ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ತಡರಾತ್ರಿ ಒಂಟಿ ಸಲಗ ಪ್ರತ್ಯಕ್ಷ: ಪ್ರಯಾಣಿಕರಲ್ಲಿ ಭೀತಿ ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ…

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು