7:39 AM Tuesday18 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

20 ಎಕರೆ ತೋಟದಲ್ಲಿ ಉದುರಿದ ಕಾಫಿ ಫಸಲು- ಎಲೆಗಳು:  ಸ್ಥಳಕ್ಕೆ ಅಧಿಕಾರಿಗಳು, ವಿಜ್ಞಾನಿಗಳ ಭೇಟಿ

08/07/2022, 21:21

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಜಾವಳಿ ಗ್ರಾಮದ ಕಾಫಿ ಬೆಳೆಗಾರರಾದ ಸುರೇಶ್ ಎಂಬುವವರಿಗೆ ಸೇರಿದ ಸುಮಾರು 20 ಎಕರೆ ಕಾಫಿ ತೋಟದಲ್ಲಿ ಬಾರಿ ಪ್ರಮಾಣದಲ್ಲಿ ಕಾಫಿ ಫಸಲು ಮತ್ತು ಎಲೆಗಳು ಉದುರಿದ್ದು ಸ್ಥಳಕ್ಕೆ ಅಧಿಕಾರಿಗಳು ಹಾಗೂ ವಿಜ್ಞಾನಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

ಕಳೆದ ಒಂದು ವಾರದ ಹಿಂದೆ ಕಾಫಿ ತೋಟಕ್ಕೆ ಔಷಧಿ ಸಿಂಪಡಣೆ ಮಾಡಲಾಗಿದ್ದು, ಆ ನಂತರ ಸತತವಾಗಿ ಸುರಿದ ಮಳೆಯಿಂದಾಗಿ ಕಾಫಿ ಫಸಲು ಹಾಗೂ ಎಲೆಗಳು ಉದುರಿರುವ ಸಾಧ್ಯತೆ ಇದ್ದು ಖಾಫಿ ಸಂಶೋಧನಾ ಕೇಂದ್ರದ ವಿಜ್ಞಾನಿಗಳು ಕಾಫಿ ಕಾಯಿ ಮತ್ತು ಎಲೆಯ ಮಾದರಿಗಳನ್ನು ಸಂಗ್ರಹಿಸಿದ್ದು ಸಂಶೋಧನೆಯ ನಂತರವಷ್ಟೆ ನೈಜ್ಯ ಕಾರಣ ತಿಳಿಯಲಿದೆ.


ಈ ಸಂದರ್ಭದಲ್ಲಿ ಕಾಫಿ ಸಂಶೋಧನಾ ಕೇಂದ್ರದ ಸಸ್ಯರೋಗ ವಿಭಾಗದ ಮುಖ್ಯಸ್ಥರಾದ ಡಾ.ಸುಧಾ, ಸಸ್ಯರೋಗ ವಿಜ್ಞಾನಿಗಳಾದ ಡಾ.ಸಂತೋಷ್ ರೆಡ್ಡಿ, ಡಾ.ಸೋಮಶೇಖರ್ ಪಾಟೀಲ್, ರಸಾಯನ ಶಾಸ್ತ್ರ ವಿಜ್ಞಾನಿಗಳಾದ ಡಾ.ಎನ್.ಚಂದ್ರಶೇಖರ್, ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು, ಕಾಫಿ ಬೆಳೆಗಾರರಾದ ಶಶಿ ಜಾವಳಿ, ಚನ್ನಕೇಶವಗೌಡ, ಪರೀಕ್ಷಿತ್ ಜಾವಳಿ, ಪ್ರದೀಪ್, ರಾಜೇಶ್, ಸತೀಶ್  ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆ ಸೇರಿಸಿ

ಹವಾಮಾನ ಆಧಾರಿತ ಬೆಳೆ ವಿಮಾ ಯೋಜನೆಗೆ ಕಾಫಿ ಬೆಳೆಯನ್ನು ಸೇರಿಸಬೇಕು ಎಂದು ಬೆಳೆಗಾರರ ಸಂಘದ ತಾಲ್ಲೂಕು ಅಧ್ಯಕ್ಷ ಬಾಲಕೃಷ್ಣ ಬಾಳೂರು ಒತ್ತಾಯಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಕಳೆದ ಹಲವಾರು ವರ್ಷಗಳಿಂದ ಅಕಾಲಿಕ ಮಳೆಯಿಂದ ಕಾಫಿ ಫಸಲು ನೆಲಕಚ್ಚುತ್ತಿದೆ. ಕಾಫಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಮಲೆನಾಡು ಭಾಗದಲ್ಲಿ ಹೆಚ್ಚು ಮಳೆಯಾಗುವುದರಿಂದ ಮಳೆಯಿಂದ ಕಾಫಿ ಬೆಳೆಯನ್ನು ರಕ್ಷಿಸುವುದು ಸವಾಲಿನ ಕೆಲಸವಾಗಿದೆ. ಆದ್ದರಿಂದ ಕಾಫಿ ಬೆಳೆಯನ್ನು ಹವಾಮಾನ ಆಧಾರಿತ ಬೆಳೆವಿಮಾ ವ್ಯಾಪ್ತಿಗೆ ಸೇರಿಸಬೇಕು ಎಂದು ತಿಳಿಸಿದ್ದಾರೆ.

ಇತರ ಬೆಳೆಗಳಿಗೆ ಈಗಾಗಲೇ ಹವಾಮಾನ ಆಧಾರಿತ ಬೆಳೆ ವಿಮೆ ಇದ್ದರೂ ಕೂಡ ವಿಮೆಯ ಮಾನದಂಡಗಳ ಬಗ್ಗೆ ಗೊಂದಲವಿದೆ. ವಿಮೆ ಕಂಪನಿಗಳು ಕೂಡ ಸರಿಯಾದ ಮಾಹಿತಿ ನೀಡುತ್ತಿಲ್ಲ. ಈ ಬಗ್ಗೆ ಜಿಲ್ಲಾಧಿಕಾರಿಗಳು ವಿಮಾ ಕಂಪನಿಗಳು, ರೈತರು ಹಾಗೂ ಅಧಿಕಾರಿಗಳ ಸಭೆ ನಡೆಸಿ ಮಾಹಿತಿಯನ್ನು ರೈತರಿಗೆ ನೀಡುವ ಕಾರ್ಯವನ್ನು ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು