10:05 PM Thursday5 - March 2026
ಬ್ರೇಕಿಂಗ್ ನ್ಯೂಸ್
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನವೀಕೃತ, ವಿಸ್ತೃತ, ಹವಾನಿಯಂತ್ರಿತ ಬಿ.ಸಿ. ರೋಡ್ ಶಾಖೆ… ವಿಜಯ್ ದೇವರಕೊಂಡ ಹಾಗೂ ರಶ್ಮಿಕಾ ಮಂದಣ್ಣ ಆರತಕ್ಷತೆ: ಶುಭ ಹಾರೈಸಿದ ಡಿಕೆಶಿ- ಪೊನ್ನಣ್ಣ ಬೇಡ್ತಿ ಸಮೀಪ ಕೆಎಸ್ಸಾರ್ಟಿಸಿ ಬಸ್ -ಕಾರು ಡಿಕ್ಕಿ,: ಮಂಗಳೂರಿನ ಉದ್ಯಮಿ ಸಾವು ದನದ ಅವಶೇಷ ಪತ್ತೆ: ಕೊಪ್ಪ-ತೀರ್ಥಹಳ್ಳಿ ರಾಷ್ಟಿಯ ಹೆದ್ದಾರಿ ತಡೆದು ಭಜರಂಗ ದಳ ಕಾರ್ಯಕರ್ತರ… ಡಿಕೆಶಿ ಮೇಲೆ ಕಣ್ಗಾವಲು | ಎಚ್ ಡಿಕೆ, ಆರ್. ಅಶೋಕ್ ಹೇಳಿಕೆ ‘’ತಾ… ಚೆನ್ನೈ ವಿಶೇಷ ಸಮಾವೇಶದಲ್ಲಿ ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್: ಸಾರ್ವಜನಿಕ ಆರೋಗ್ಯ ಮೂಲಸೌಕರ್ಯ ಕುರಿತು… ಚೆನ್ನಪಟ್ಟಣ | ಕೊಡಗಿನ ಸಾಕಾನೆಗಳ ಯಶಸ್ವಿ ಕಾರ್ಯಾಚರಣೆ: ನಿರಂತರ ಉಪಟಳ ನೀಡುತ್ತಿದ್ದ ಮಕ್ನಾ… ಬೆಂಗಳೂರಿನ ನೈಜೆಲ್ ಫೆರ್ನಾಂಡಿಸ್‌ಗೆ ಅಪರೂಪದ ‘ಪಾಪಲ್ ನೈಟ್‌ಹುಡ್’ ಗೌರವ ಪ್ರದಾನ ತಂತ್ರಜ್ಞಾನ ಕ್ಷೇತ್ರದಲ್ಲಿ ಭಾರತ ಜಾಗತಿಕ ಮುಂಚೂಣಿಯತ್ತ ಸಾಗಿದೆ: ಕೃಷಿ ವಿಜ್ಞಾನಿ ಡಾ. ತಿಮಕಾಪುರ ನಿರಂತರ ಕಾಡಾನೆ ದಾಳಿಗೆ ಕಂಗಾಲಾದ ಮಲೆನಾಡಿಗರು: ಕಳೆದೊಂದು ವರ್ಷದಲ್ಲಿ 9 ಜನ ಕಾಡಾನೆ…

ಇತ್ತೀಚಿನ ಸುದ್ದಿ

ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ಸರಕಾರ ಪದೇ ಪದೇ ನಕಾರಾತ್ಮಕ ನಿಲುವು ತಾಳುವುದು ಸರಿಯಲ್ಲ,: ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ 

08/07/2022, 22:54

ಉಡುಪಿ(reporterkarnataka.com):
ಸಾರ್ವಕಾಲಿಕ ಸತ್ಯನಿಷ್ಠವಾದ ಮಾನವೀಯ ಮೌಲ್ಯಗಳನ್ನು ಸಾಕಾರಗೊಳಿಸಿದ ಜಗದ್ಗುರು ಬ್ರಹ್ಮಶ್ರೀ ನಾರಾಯಣ ಗುರುಗಳ ಕುರಿತಂತೆ ಸರ್ಕಾರವು ಪದೇ ಪದೇ ನಕಾರಾತ್ಮಕ ನಿಲುವನ್ನು ಪ್ರಕಟಿಸುತ್ತಿರುವುದು ಸಮಂಜಸವಲ್ಲ ಎಂದು ಉಡುಪಿ ಜಿಲ್ಲಾ ಬಿಲ್ಲವ ಯುವ ವೇದಿಕೆ ಅಧ್ಯಕ್ಷರ ಪ್ರವೀಣ್ ಎಂ. ಪೂಜಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಗಣರಾಜ್ಯೋತ್ಸವ ಟ್ಯಾಬ್ಲೋ ತಿರಸ್ಕಾರದ ಬಳಿಕ ಹೈಸ್ಕೂಲ್ ಪಠ್ಯಪುಸ್ತಕದಲ್ಲಿ ಗುರುಗಳ ಚಿಂತನೆಯ ಪಾಠವನ್ನು ಕೈಬಿಟ್ಟಿರುವುದರ ಕುರಿತು ಈಗಾಗಲೇ ಸಚಿವರುಗಳಿಗೆ ಮನವಿ ಸಲ್ಲಿಸಿದಾಗ ಯಾವುದೇ ಸಮಸ್ಯೆಯಾಗದಂತೆ ಪರಿಹಾರ ಒದಗಿಸುವುದಾಗಿ ಭರವಸೆ ನೀಡಿದ್ದರು‌.ಆದರೆ ಇದು ಸುಳ್ಳಾಗಿದ್ದು ಗುರುಗಳನ್ನು ಕೇವಲ ಭಾಷಾ ಪಾಠದಲ್ಲಿ ತೋರಿಸಿ ಮೇಲ್ನೋಟಕ್ಕೆ ಎಲ್ಲವೂ ಸರಿಯಾಗಿದೆ ಎಂದು ನಂಬಿಸಿದ್ದಾರೆ. ಗುರುಗಳ ಅನುಯಾಯಿಗಳಾದ ನಮಗೆ ಸರ್ಕಾರದ ನಡೆಯ ಕುರಿತು ತೀವ್ರ ಅಸಮಾಧಾನವಿದ್ದು ಈಗಾಗಲೇ ನೀಡಿರುವ ಮನವಿಯನ್ನು ಕಡೆಗಣಿಸಿರುವ ಕುರಿತು ಸಂಘಟನಾ ಸ್ವರೂಪದ ಹೋರಾಟಕ್ಕೆ ಮುಂದಾಗಿದ್ದೇವೆ ಎಂದಿದ್ದಾರೆ.

ಬ್ರಹ್ಮಶ್ರೀ ನಾರಾಯಣ ಗುರುಗಳ ಜೀವಮಾನವೇ ಸಮಾಜ ಸುಧಾರಣೆಗೆ ಸೀಮಿತವಾಗಿರುವಾಗ ನಾವೂ ಕೂಡ ಪಕ್ಷಾತೀತವಾಗಿ ಸಮಾಜದ ಪರ ಸಮಾನಮನಸ್ಕ ನಿಲುವಿನಲ್ಲಿ ಗುರುಗಳ ಪಠ್ಯಕ್ರಮ ಈ ಹಿಂದಿನಂತೆ ಯಥಾಸ್ಥಿತಿಯಲ್ಲಿರಬೇಕೆಂದು ಬಯಸುತ್ತೇವೆ. ಸಮಾಜದ ಎಲ್ಲಾ ಸಂಘ-ಸಂಸ್ಥೆಗಳು ಪಕ್ಷಾತೀತವಾಗಿ ವಿರೋಧಿಸಬೇಕು, ಕೇವಲ ಅಧಿಕಾರಕ್ಕೋಸ್ಕರ ಗುರುಗಳನ್ನು ಜಪಿಸುವ ಬದಲು ಯಾವ ಪಕ್ಷದ ಯಾವ ಪ್ರತಿನಿಧಿಯೆ ಆಗಲಿ ಸದ್ರಿ ಹಾಗೂ ಮುಂದೆಯೂ ಗುರುಗಳಿಗೆ ಅವಮಾನವಾಗದಂತೆ ನಡೆಯುವುದು ಸಾಮಾಜಿಕ ಸೌಹಾರ್ದ ಸ್ಥಿತಿಗತಿಗೆ ಅತ್ಯಂತ ಅಗತ್ಯ ಎಂದು ಭಾವಿಸುತ್ತೇವೆ ಎಂದು ಪ್ರವೀಣ್ ಎಂ ಪೂಜಾರಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು