11:12 AM Monday21 - April 2025
ಬ್ರೇಕಿಂಗ್ ನ್ಯೂಸ್
DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ…

ಇತ್ತೀಚಿನ ಸುದ್ದಿ

ಮೀಸಲಾತಿ ಹೋರಾಟ: ಜುಲೈ11ರ ಧರಣಿ ಯಶಸ್ವಿಗೊಳಿಸಿ:ವಾಲ್ಮೀಕಿ ಮಹಾಸಭಾ ಅಧ್ಯಕ್ಷ ಎಸ್. ಸುರೇಶ್ ಮನವಿ

09/07/2022, 22:46

ವಿ.ಜಿ.ವೃಷಭೇಂದ್ರ ಕೂಡ್ಲಿಗಿವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ವಾಲ್ಮೀಕಿ ಸಮಾಜಕ್ಕೆ 7.5 ಮೀಸಲಾತಿ ಹೋರಾಟದ ಮುಂದುವರಿದ ಭಾಗವಾಗಿ ವಿಜಯನಗರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಜುಲೈ 11ರಂದು ನಡೆಯಲಿರುವ ಧರಣಿ ಸತ್ಯಾಗ್ರಹ ಹಾಗೂ ಜಿಲ್ಲಾಧಿಕಾರಿಗಳ ಮುತ್ತಿಗೆ ಯಶಸ್ವಿಗೊಳಿಸಬೇಕೆಂದು ಕೂಡ್ಲಿಗಿ ವಾಲ್ಮೀಕಿ ಮಹಾಸಭಾದ ಅಧ್ಯಕ್ಷ ಎಸ್.ಸುರೇಶ ಮನವಿ ಮಾಡಿದ್ದಾರೆ.

ಮೀಸಲಾತಿ ಹೋರಾಟದ  ಹಿನ್ನಲೆಯಲ್ಲಿ ಮುಂದುವರಿದ ಭಾಗವಾಗಿ ಜರುಗುತ್ತಿದ್ದು. ವಾಲ್ಮೀಕಿ ಸ್ವಾಮೀಜಿಯವರು ಸರ್ಕಾರದ ನಿರ್ಲಕ್ಷ್ಯಧೋರಣೆಯ ವಿರುದ್ಧ, ಧರಣಿ ನಡೆಸುತ್ತಿರುವ ಹೋರಾಟ 150ನೇ ದಿನ ಪೂರೈಸುತ್ತಿರುವ ಹಿನ್ನಲೆಯಲ್ಲಿ ರಾಜ್ಯದ ಎಲ್ಲಾ ಜಿಲ್ಲಾ ಕಚೇರಿಗಳ ಆವರಣದಲ್ಲಿ ದಲಿತ ಸಮುದಾಯಗಳಿಂದ, ಧರಣಿ ನಡೆಸಲು ಸ್ವಾಮೀಜಿಗಳು ಕರೆ ನೀಡಿದ್ದಾರೆ. 

ಜುಲೈ11ರಂದು ವಿಜಯನಗರ ಜಿಲ್ಲಾದಿಕಾರಿಗಳ ಆವರಣದಲ್ಲಿ ನಡೆಯಲಿರುವ ಧರಣಿ ಮತ್ತು ಕಚೇರಿಗೆ ಮುತ್ತಿಗೆ ಹಾಕುವ ಕಾರ್ಯಕ್ರಮದಲ್ಲಿ ಕೂಡ್ಲಿಗಿ ತಾಲೂಕಿನ ಸರ್ವ ದಲಿತ ಮುಖಂಡರು ಭಾಗಿಯಾಗಬೇಕಿದೆ. ಎಲ್ಲಾ ದಲಿತ ಹೋರಾಟಗಾರರು ಪಕ್ಷಾತೀತವಾಗಿ ಭಾಗವಹಿಸಿ ಹೋರಾಟ ಯಶಸ್ವೀಗೊಳಿಸಬೇಕಿದೆ ಎಂದು ದಲಿತ ಮುಖಂಡ ಸುರೇಶ ಕೋರಿದ್ದಾರೆ. 

ದಲಿತ ಯುವ ಮುಖಂಡ ಸಾಲುಮನಿ,ವಾಲ್ಮೀಕಿ ಯುವ ಮುಖಂಡ ಚೌಡಪ್ಪ(ಸೋವೆ) ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು