7:51 PM Tuesday26 - May 2026
ಬ್ರೇಕಿಂಗ್ ನ್ಯೂಸ್
ರಾಷ್ಟ್ರಪತಿ ಸಿ.ಪಿ. ರಾಧಾಕೃಷ್ಣನ್ 30ರಂದು ಮಂಗಳೂರಿಗೆ: ಧರ್ಮಸ್ಥಳದಲ್ಲಿ ವಾಸ್ತವ್ಯ ಗಂಡನ ಸಾವಿನ ನೋವಿನಲ್ಲೂ ಮಾನವೀಯತೆ ಮೆರೆದ ಗರ್ಭಿಣಿ ಪತ್ನಿ! ಕಿಡ್ನಿ, ಹಾರ್ಟ್ ಮತ್ತು… ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ?

ಇತ್ತೀಚಿನ ಸುದ್ದಿ

ಚಾತುರ್ಮಾಸ ಪ್ರಯುಕ್ತ ಕಾಶೀ ಮಠಾಧೀಶರ ಪುರ ಪ್ರವೇಶ: ಮಂಗಳೂರಿನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

09/07/2022, 22:54

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತಾಚರಣೆಯು ಜುಲೈ 18ರಿಂದ  ಈ ಬಾರಿ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀಗಳವರ ಪುರ ಪ್ರವೇಶ ಶನಿವಾರ ನಗರದ ರಥಬೀದಿಯಲ್ಲಿ ನಡೆಯಿತು. 

ಶ್ರೀಗಳವರು ಕೊಂಚಾಡಿ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಭವ್ಯ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಪುರ ಪ್ರವೇಶ ಕಾರ್ಯಕ್ರಮವು ಸ್ವದೇಶೀ ಸ್ಟೋರ್ಸ್ ಬಳಿಯಿಂದ ಪ್ರಾರಂಭಗೊಂಡು ಶ್ರೀ ದೇವಳದ ವರೆಗೆ ನಡೆಯಿತು. ಈ  ಸಂದರ್ಭದಲ್ಲಿ ವಿಶೇಷ ಚಂಡೆವಾದನ, ವಾರ್ಕರಿ ತಂಡದಿಂದ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಬಳಿಕ ಶ್ರೀಗಳವರು ಶ್ರೀ ದೇವರ ದರ್ಶನ ಪಡೆದು , ದೇವಳದ ಆಡಳಿತ ಮಂಡಳಿ ಯ ಪದಾಧಿಕಾರಿಗಳು ಪಾದಪೂಜೆ ನೆರವೇರಿಸಿದರು .  

ಇತ್ತೀಚಿನ ಸುದ್ದಿ

ಜಾಹೀರಾತು