10:49 AM Monday1 - December 2025
ಬ್ರೇಕಿಂಗ್ ನ್ಯೂಸ್
ನಶಾಮುಕ್ತ, ದ್ವೇಷಮುಕ್ತ ಸಮಾಜ ನಿರ್ಮಿಸೋಣ: ವಿಧಾನಸಭೆ ಸ್ಪೀಕರ್ ಯು.ಟಿ. ಖಾದರ್ ಕರೆ ಮಂಗಳೂರಿನ ಫುಡ್ ಡೆಲಿವರಿ ಬಾಯ್ ನಿಂದ ಸೋಮವಾರಪೇಟೆಯಲ್ಲಿ ಸರಗಳ್ಳತನ..! Kodagu | ನೇಣು ಬಿಗಿದು ಅಪ್ರಾಪ್ತ ವಯಸ್ಸಿನ ಕಾಲೇಜು ವಿದ್ಯಾರ್ಥಿನಿ ಆತ್ಮಹತ್ಯೆ Tarikere | ಚಿರತೆ ದಾಳಿಗೆ ಬಾಲಕಿ ಬಲಿಯಾದ ಘಟನೆ ಮಾಸುವ ಮುನ್ನವೇ ಮತ್ತೊಂದು… Kodagu | ಹುಣಸೂರು: ರೈತರ ಮೇಲೆ ದಾಳಿ ನಡೆಸುತ್ತಿದ್ದ ಹುಲಿ ಸೆರೆ; ನಿಟ್ಟುಸಿರು… Udupi | ನದಿ, ವೃಕ್ಷ ಸಂರಕ್ಷಣೆ ಸೇರಿದಂತೆ ನವ ಸಂಕಲ್ಪಗಳ ಪಾಲನೆಗೆ ಪ್ರಧಾನಿ… Udupi | ಕೃಷ್ಣನಗರಿಯಲ್ಲಿ ಪ್ರಧಾನಿ ಮೋದಿಗೆ ಬೆಳ್ಳಿ ಕಡೆಗೋಲು ಕೊಡುಗೆ Udupi | ‘ಜೈ ಶ್ರೀ ಕೃಷ್ಣ’ ಎಂದು ಕನ್ನಡದಲ್ಲೇ ಭಾಷಣ ಆರಂಭಿಸಿದ ಪ್ರಧಾನಿ… ಪ್ರಧಾನಿ ಮೋದಿ ಇಂದು ಉಡುಪಿಗೆ: ಶ್ರೀಕೃಷ್ಣ ಮಠದ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ… ಉಡುಪಿಗೆ ಪ್ರಧಾನಿ ಭೇಟಿ: ಎಸ್‌ಪಿಜಿ ಜತೆಗೆ ಖಾಕಿ ಸರ್ಪಗಾವಲು: ನಿಗದಿತ ಸಮಯಕ್ಕೆ ಮುಂಚಿತವಾಗಿಯೇ…

ಇತ್ತೀಚಿನ ಸುದ್ದಿ

ಚಾತುರ್ಮಾಸ ಪ್ರಯುಕ್ತ ಕಾಶೀ ಮಠಾಧೀಶರ ಪುರ ಪ್ರವೇಶ: ಮಂಗಳೂರಿನಲ್ಲಿ ಶ್ರೀಗಳಿಗೆ ಪೂರ್ಣಕುಂಭ ಸ್ವಾಗತ

09/07/2022, 22:54

ಚಿತ್ರ : ಮಂಜು ನೀರೇಶ್ವಾಲ್ಯ
ಮಂಗಳೂರು(reporterkarnataka.com):  ಶ್ರೀ ಕಾಶೀ ಮಠಾಧೀಶರಾದ ಶ್ರೀಮದ್ ಸಂಯಮಿಂದ್ರ ತೀರ್ಥ ಸ್ವಾಮೀಜಿಯವರ ಶುಭ ಕೃತ ನಾಮ ಸಂವತ್ಸರದ ಚಾತುರ್ಮಾಸ ವ್ರತಾಚರಣೆಯು ಜುಲೈ 18ರಿಂದ  ಈ ಬಾರಿ ನಗರದ ರಥಬೀದಿಯಲ್ಲಿರುವ ಶ್ರೀ ವೆಂಕಟರಮಣ ದೇವಸ್ಥಾನದಲ್ಲಿ ನಡೆಯಲಿದ್ದು, ಈ ಪ್ರಯುಕ್ತ ಶ್ರೀಗಳವರ ಪುರ ಪ್ರವೇಶ ಶನಿವಾರ ನಗರದ ರಥಬೀದಿಯಲ್ಲಿ ನಡೆಯಿತು. 

ಶ್ರೀಗಳವರು ಕೊಂಚಾಡಿ ಮೊಕ್ಕಾಂ ನಿಂದ ಆಗಮಿಸಿದ್ದು ಶ್ರೀಗಳವರಿಗೆ ಭವ್ಯ ಪೂರ್ಣಕುಂಭ ಸ್ವಾಗತ ನೀಡಲಾಯಿತು.  ಪುರ ಪ್ರವೇಶ ಕಾರ್ಯಕ್ರಮವು ಸ್ವದೇಶೀ ಸ್ಟೋರ್ಸ್ ಬಳಿಯಿಂದ ಪ್ರಾರಂಭಗೊಂಡು ಶ್ರೀ ದೇವಳದ ವರೆಗೆ ನಡೆಯಿತು. ಈ  ಸಂದರ್ಭದಲ್ಲಿ ವಿಶೇಷ ಚಂಡೆವಾದನ, ವಾರ್ಕರಿ ತಂಡದಿಂದ ಹಾಗೂ ವಿವಿಧ ಭಜನಾ ಮಂಡಳಿಗಳಿಂದ ಭಜನೆ ಬಳಿಕ ಶ್ರೀಗಳವರು ಶ್ರೀ ದೇವರ ದರ್ಶನ ಪಡೆದು , ದೇವಳದ ಆಡಳಿತ ಮಂಡಳಿ ಯ ಪದಾಧಿಕಾರಿಗಳು ಪಾದಪೂಜೆ ನೆರವೇರಿಸಿದರು .  

ಇತ್ತೀಚಿನ ಸುದ್ದಿ

ಜಾಹೀರಾತು