11:10 PM Sunday27 - July 2025
ಬ್ರೇಕಿಂಗ್ ನ್ಯೂಸ್
ಗದಗ -ಬಂಕಾಪುರ ರಾಷ್ಟ್ರೀಯ ಹೆದ್ದಾರಿಗೆ ಗಡ್ಕರಿ ಭರವಸೆ: ಮಾಜಿ ಸಿಎಂ ಬಸವರಾಜ ಬೊಮ್ಮಾಯಿ Koppa | ಬೃಹತ್ ಮರ ರಸ್ತೆಗೆ ಪತನ: ಜಯಪುರ- ಬಸರೀಕಟ್ಟೆ,- ಕಳಸ- ಹೊರನಾಡು… ಕೊಡಗಿನಲ್ಲಿ ಭಾರೀ ಮಳೆ: ತುಂಬಿ ತುಳುಕುತ್ತಿರುವ ಕಾವೇರಿ, ಕನ್ನಿಕೆ, ಸುಜ್ಜ್ಯತಿ ನದಿಗಳು; ತ್ರಿವೇಣಿ… ಕೊಡಗು: ಮಳೆ ಹಾನಿ ಪ್ರದೇಶಗಳಿಗೆ ಕಂದಾಯ ಸಚಿವ ಕೃಷ್ಣಬೈರೇ ಗೌಡ ಭೇಟಿ; ಪರಿಹಾರ… BJP Leader | ಚುನಾವಣಾ ಉದ್ದೇಶದಿಂದ ಬೆಂಗಳೂರು ಒಡೆದ ಕಾಂಗ್ರೆಸ್‌: ಪ್ರತಿಪಕ್ಷ ನಾಯಕ… ಗ್ಯಾರಂಟಿಗಳ ಕಾರಣದಿಂದ ಕರ್ನಾಟಕ ತಲಾ ಆದಾಯದಲ್ಲಿ ದೇಶದಲ್ಲೇ ನಂಬರ್ ಒನ್ : ಸಿಎಂ… Mangaluru | ಸಂಸದ ತೇಜಸ್ವೀ ಸೂರ್ಯ ರಿಂದ ಲಾಲ್‌ಬಾಗ್‌ನಲ್ಲಿ ವೀಲ್‌ಚೇರ್ ಸ್ನೇಹಿ ಶೌಚಾಲಯ… Chikkamagaluru | ಕಳಸ: ಭದ್ರಾ ನದಿಯಲ್ಲಿ ಸತತ 23 ತಾಸುಗಳ ಶೋಧ ಬಳಿಕ… ಸೋಮವಾರಪೇಟೆ ಪಟ್ಟಣ ಪಂಚಾಯಿತಿ ಕಡತ ಕಳವು ಪ್ರಕರಣ: ಗುತ್ತಿಗೆ ಸಿಬ್ಬಂದಿ ಕೈಚಳಕ ಸಿಸಿಟಿವಿ… Kodagu | ಕೊಡಗಿನಲ್ಲಿ ಮತ್ತಷ್ಟು ಬಿರುಸುಗೊಂಡ ಮಳೆ: ಹಲವೆಡೆ ರಸ್ತೆಗೆ ಉರುಳಿದ ಮರಗಳು;…

ಇತ್ತೀಚಿನ ಸುದ್ದಿ

ಬೆಳಗಾವಿಯ ಶಿರಹಟ್ಟಿ ಗ್ರಾಮದಲ್ಲಿ ಭೂಕಂಪನ:  ಭಯಭೀತರಾದ ಜನ; ಗ್ರಾಮಕ್ಕೆ ಅಧಿಕಾರಿಗಳು ಭೇಟಿ

10/07/2022, 14:15

ರಾಹುಲ್ ಅಥಣಿ ಬೆಳಗಾವಿ

info.reporterkarnataka@gmail.com

ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಶಿರಹಟ್ಟಿ ಗ್ರಾಮದಲ್ಲಿ ಮುಂಜಾನೆ 6.20ಕ್ಕೆ ಭೂಕಂಪನವಾ ಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ. ಕಂಪನಕ್ಕೊಳಗಾದ ಪ್ರದೇಶಗಳಿಗೆ ಅಥಣಿ ತಾಲೂಕು ಆಡಳಿತ ಅಧಿಕಾರಿಗಳು ಭೇಟಿ ನೀಡಿ ಗ್ರಾಮಸ್ಥರ ಜತೆ ಸಮಾಲೋಚನೆ ನಡೆಸಿದ್ದಾರೆ.

ಅಥಣಿ ತಹಶೀಲ್ದಾರ್ ಸುರೇಶ್ ಮುಂಜೇ ಹಾಗೂ ಅಥಣಿ ಡಿವೈಎಸ್ಪಿ ಎಸ್. ವಿ. ಗಿರೀಶ್ ಹಾಗೂ ಸಿಪಿಐ ಶಂಕರಗೌಡ ಬಸನಗೌಡರ ಭೇಟಿ ಗ್ರಾಮಸ್ಥರಿಗೆ ಧೈರ್ಯ ಹೇಳಿದರು. ಭೂಕಂಪದಿಂದ ಹಾನಿ ಸಂಭವಿಸಿದ ಮನೆಗಳನ್ನು ತಹಶೀಲ್ದಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಇದೇ ಸಂದರ್ಭದಲ್ಲಿ ಮಾಧ್ಯಮ ಜೊತೆ ಮಾತನಾಡಿದ ಅವರು, ಶಿರಹಟ್ಟಿ ಗ್ರಾಮದಲ್ಲಿ ಮುಂಜಾನೆ 6.20 ಆಸುಪಾಸಿನಲ್ಲಿ ಭೂಕಂಪ ಆಗಿದ್ದು. ರಿಕ್ಟರ್ ಮಾಪಕದಲ್ಲಿ 3.0 ತೀವ್ರತೆ ದಾಖಲಾಗಿದೆ.


ಯಾವುದೇ ಜೀವಹಾನಿ ಸಂಭವಿಸಿಲ್ಲ. ಕೆಲವು ಮನೆಗಳು ಬಿರುಕು ಬಿಟ್ಟಿದೆ ಎಂದು ಹೇಳುತ್ತಿದ್ದಾರೆ. ಆ ಬಿರುಕು ಬಿಟ್ಟ ಮನೆಗಳು ಹಳೆ ಬಿರುಕುಗಳು ಎಂದು ತಿಳಿದು ಬಂದಿದೆ. ಗ್ರಾಮಸ್ಥರು ಯಾರು ಆತಂಕಕ್ಕೆ ಒಳಗಾಗಬಾರದು ಎಂದು ಹೇಳಿದರು.

ಇತ್ತೀಚಿನ ಸುದ್ದಿ

ಜಾಹೀರಾತು