10:16 PM Saturday5 - July 2025
ಬ್ರೇಕಿಂಗ್ ನ್ಯೂಸ್
Madikeri | ಕೊಡಗು ಜಿಲ್ಲೆ: ಜು. 6ರಿಂದ ಆಗಸ್ಟ್ 5ರ ವರೆಗೆ ಭಾರೀ… ಕೊಡವ ಸಮುದಾಯದಿಂದ ಚಿತ್ರರಂಗಕ್ಕೆ ಬಂದಿದ್ದು ನಾನೊಬ್ಬಳೇ ಎಂದ ರಶ್ಮಿಕಾಳಿಗೆ ಟೀಕೆಗಳ ಸುರಿಮಳೆ! ಮೆಟ್ರೋ ಹಳದಿ ಮಾರ್ಗ ಆಗಸ್ಟ್‌ ನಲ್ಲಿ ಸಾರ್ವಜನಿಕ ಸೇವೆಗೆ ಮುಕ್ತವಾಗದಿದ್ದರೆ ಪ್ರತಿಭಟನೆ: ಸಂಸದ… ವಿದ್ಯುತ್ ಆಘಾತಕ್ಕೆ ಯುವಕ ಬಲಿ: ಆಸ್ಪತ್ರೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ… ಸಂಸದರು ಕೊಟ್ಟಿರುವ ಬ್ಯಾಗುಗಳು ಧೂಳು ತಿನ್ನುತ್ತಿವೆ!: ಬೆನ್ನು ಬಾಗಿದ ಮೇಲೆ ಕೊಡ್ತಾರಾ ಶಾಲಾ… ಕಾಂಗ್ರೆಸ್ ಗೆ ಅಧಿಕಾರ, ಆರೆಸ್ಸೆಸ್‌ ಬ್ಯಾನ್‌ ಹಗಲುಗನಸು: ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಚಿಕ್ಕಮಗಳೂರು: ಶಾಲೆಗೆ ರಜೆ; ಕೆರೆಯಲ್ಲಿ ಈಜಲು ಹೋದ ಬಾಲಕ ದಾರುಣ ಸಾವು ನಾಪತ್ತೆಯಾಗಿದ್ದ ಕೊಡಗಿನ ಫಾರೆಸ್ಟ್ ಗಾರ್ಡ್ ಶವವಾಗಿ ಪತ್ತೆ: ಸಾವಿನ ಸುತ್ತ ಅನುಮಾನದ ಹುತ್ತ ಭೂ ಸ್ವಾಧೀನ; ಕಾನೂನು ತೊಡಕು ನಿವಾರಿಸಿ ರೈತರ ಸಭೆ: ಮುಖ್ಯಮಂತ್ರಿ ಸಿದ್ದರಾಮಯ್ಯ Virajpete | ಎರಡು ಮಕ್ಕಳ ತಾಯಿಯೊಂದಿಗೆ ಲಿವಿಂಗ್ ರಿಲೇಶನ್ ಶಿಪ್: ಯುವಕ ಆತ್ಮಹತ್ಯೆಗೆ…

ಇತ್ತೀಚಿನ ಸುದ್ದಿ

ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ ವೃತ್ತಿ ಯಲ್ಲಿದ್ದರೆ ಯಶಸ್ಸು ಖಂಡಿತ: ಡಾ. ನಾಗರತ್ನ ಕೆ. ಎ.

20/06/2021, 23:41

ಮಂಗಳೂರು(reporterkarnataka news): ಮಂಗಳೂರು ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಕೋಶ ಮತ್ತು ಪಾದುವ ಕಾಲೇಜ್ ಆಫ್ ಕಾಮರ್ಸ್ ಆಂಡ್ ಮ್ಯಾನೇಜ್ಮೆಂಟ್ ನ  ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ IQAC ವಿಭಾಗದ ನೇತೃತ್ವದಲ್ಲಿ ವಿದ್ಯಾರ್ಥಿಗಳಿಗಾಗಿ ‘ಕ್ರಿಯಾಶೀಲತೆ ಮತ್ತು ಉತ್ಸಾಹದೊಂದಿಗೆ ಯಶಸ್ಸು’ ಎಂಬ ಆನ್ಲೈನ್ ಕಾರ್ಯಾಗಾರ ಜರುಗಿತು. 
ರಾಜ್ಯ ಯುವ ಅಧಿಕಾರಿ ವೈ. ಎನ್. ಉಪಿನ್ ಅವರು ಕಾರ್ಯಕ್ರಮ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಪ್ರಸ್ತುತ ಪರಿಸ್ಥಿತಿಯಲ್ಲಿ ಉತ್ಸಾಹ ಕಳೆಗುಂದದೆ ಯಶಸ್ಸಿನೆಡೆಗೆ ಮುನ್ನಡೆಯುವಂತೆ ಕರೆ ನೀಡಿದರು.

ಮುಖ್ಯ ಅತಿಥಿಯಾಗಿ  ಮಂಗಳೂರು ವಿಶ್ವವಿದ್ಯಾನಿಲಯದ ರಾಷ್ಟ್ರೀಯ ಸೇವಾ ಯೋಜನೆಯ  ಸಂಯೋಜಕರಾದ ಡಾ. ನಾಗರತ್ನ ಕೆ. ಎ. ಮಾತನಾಡಿ, ಈ ಸ್ಪರ್ಧಾತ್ಮಕ ಯುಗದಲ್ಲಿ ಸೃಜನಶೀಲತೆ  ವೃತ್ತಿಯಲ್ಲಿದ್ದರೆ ಯಶಸ್ಸು ಖಂಡಿತ ಎಂದರು.
ಸದಾ ಕ್ರಿಯಾಶೀಲರಾಗಿರುವುದರಿಂದ ಮನಸ್ಸು ಸಕಾರಾತ್ಮಕ ಚಿಂತನೆಗಳಿಂದ ಕೂಡಿರುತ್ತದೆ.  ಇತರರನ್ನು ಅಭಿವೃದ್ಧಿಯತ್ತ  ಪ್ರೇರೇಪಿಸಲು   ಸಹಕಾರಿಯಾಗುತ್ತದೆ. ಇದರಿಂದ ಸಮಾಜಕ್ಕೆ ಒಳ್ಳೆಯ ಕೊಡುಗೆ ನೀಡಲು ಸಹಕಾರಿಯಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು.


ಅಂತಾರಾಷ್ಟ್ರೀಯ ತರಬೇತುದಾರರಾದ ಡಾ.ಕಿಶೋರ್ ಶ್ರೀನಿವಾಸನ್ ಅವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ವಿದ್ಯಾರ್ಥಿಗಳಿಗೆ ಉತ್ಸಾಹದೊಂದಿಗೆ ಕ್ರಿಯಾಶೀಲತೆ ಇದ್ದರೆ ಯಶಸ್ಸನ್ನು ಗಳಿಸಲು ಸಾಧ್ಯ ಎಂಬುದಾಗಿ ತರಬೇತಿಯನ್ನು ನೀಡಿದರು. 


ಕಾಲೇಜಿನ ಪ್ರಾಂಶುಪಾಲರಾದ ರೆ. ಫಾ. ಆಲ್ವಿನ್ ಸೆರಾವೊ  ಶುಭಕೋರಿದರು. ರಾ. ಸೇ. ಯೋ. ಘಟಕದ ಯೋಜನಾಧಿಕಾರಿ ರೋಷನ್  ಸಾಂತುಮಯೋರ್ ಕಾರ್ಯಕ್ರಮ ರೂಪಿಸಿದರು.
ಪದುವ ಕಾಲೇಜಿನ  ಉಪನ್ಯಾಸಕಿ  ಝೀನಾ ಕಾರ್ಯಕ್ರಮ ನಿರೂಪಿಸಿದರು. IQAC ಅಧಿಕಾರಿ   ಮಿನೆಜಸ್ ವಂದಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು