6:02 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್

11/07/2022, 23:37

ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ.

ಆದಷ್ಟು ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಬೇಕು. ಅಧಿಕೃತ ಆದೇಶವಾದ ಕೂಡಲೇ ಈಗಾಗಲೇ ಕರೆ ನೀಡಲಾದ ಪ್ರತಿಭಟನಾ ಸಭೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಾಗುವುದು. ಗುರುಗಳ ಪಠ್ಯ ವಿಚಾರದಲ್ಲಿ ಸತ್ಯಾಂಶವನ್ನು ಸಮಾಜದ ಮುಂದಿಟ್ಟ ಮಾಧ್ಯಮಗಳಿಗೆ, ಸಮಾಜವಿಜ್ಞಾನದಲ್ಲಿ ಮರುಸೇರ್ಪಡೆಗೊಳಿಸಲು ಒತ್ತಾಯಿಸಿದ ಗುರುಗಳ ಅನುಯಾಯಿಗಳಿಗೆ, ಹೋರಾಟ ಬೆಂಬಲಿಸಿದ ಸಮಾಜದ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಹಾಗೂ ಗಾಳಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಮಸ್ತ ಸಮಾಜ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು.

ಇದೊಂದು ಸಂಘರ್ಷ ರಹಿತ ಹೋರಾಟಕ್ಕೆ ಸಂದ ಜಯ. ಮುಂದೆಯೂ ಗುರುಗಳ ತತ್ವದಂತೆ ಅನ್ಯಾಯದ ವಿರುದ್ಧ ಯಾವುದೇ ರಾಜಕೀಯ, ಸಂಘರ್ಷ ಇಲ್ಲದೆ ಹೋರಾಡೋಣ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು