11:13 PM Monday14 - July 2025
ಬ್ರೇಕಿಂಗ್ ನ್ಯೂಸ್
ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ… Vijayapura | ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಅಭಿವೃದ್ಧಿ ಕಾಮಗಾರಿಗೆ ಶಂಕುಸ್ಥಾಪನೆ, ಉದ್ಘಾಟನೆ ಶಕ್ತಿ ಯೋಜನೆ: 500 ಕೋಟಿ ಮಹಿಳೆಯರಿಗೆ ತಲುಪಿದ ಸಾಂಕೇತಿಕವಾಗಿ ಟಿಕೆಟ್ ವಿತರಿಸಿದ ಮುಖ್ಯಮಂತ್ರಿ Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ…

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್

11/07/2022, 23:37

ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ.

ಆದಷ್ಟು ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಬೇಕು. ಅಧಿಕೃತ ಆದೇಶವಾದ ಕೂಡಲೇ ಈಗಾಗಲೇ ಕರೆ ನೀಡಲಾದ ಪ್ರತಿಭಟನಾ ಸಭೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಾಗುವುದು. ಗುರುಗಳ ಪಠ್ಯ ವಿಚಾರದಲ್ಲಿ ಸತ್ಯಾಂಶವನ್ನು ಸಮಾಜದ ಮುಂದಿಟ್ಟ ಮಾಧ್ಯಮಗಳಿಗೆ, ಸಮಾಜವಿಜ್ಞಾನದಲ್ಲಿ ಮರುಸೇರ್ಪಡೆಗೊಳಿಸಲು ಒತ್ತಾಯಿಸಿದ ಗುರುಗಳ ಅನುಯಾಯಿಗಳಿಗೆ, ಹೋರಾಟ ಬೆಂಬಲಿಸಿದ ಸಮಾಜದ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಹಾಗೂ ಗಾಳಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಮಸ್ತ ಸಮಾಜ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು.

ಇದೊಂದು ಸಂಘರ್ಷ ರಹಿತ ಹೋರಾಟಕ್ಕೆ ಸಂದ ಜಯ. ಮುಂದೆಯೂ ಗುರುಗಳ ತತ್ವದಂತೆ ಅನ್ಯಾಯದ ವಿರುದ್ಧ ಯಾವುದೇ ರಾಜಕೀಯ, ಸಂಘರ್ಷ ಇಲ್ಲದೆ ಹೋರಾಡೋಣ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು