12:20 AM Wednesday11 - February 2026
ಬ್ರೇಕಿಂಗ್ ನ್ಯೂಸ್
ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:…

ಇತ್ತೀಚಿನ ಸುದ್ದಿ

ಶಿಕ್ಷಣ ಸಚಿವರ ನಿರ್ಧಾರ ಸ್ವಾಗತಾರ್ಹ ; ಅಧಿಕೃತ ಆದೇಶ ಬರುವವರೆಗೂ ಹೋರಾಟ ಮುಂದುವರಿಕೆ : ಪದ್ಮರಾಜ್. ಆರ್

11/07/2022, 23:37

ಮಂಗಳೂರು:Reporterkarnataka.com: ಬ್ರಹ್ಮಶ್ರೀ ನಾರಾಯಣಗುರುಗಳ ಕುರಿತಾದ ಪಠ್ಯಭಾಗವನ್ನು ಸಮಾಜ ವಿಜ್ಞಾನದಲ್ಲೇ ಮರು ಸೇರ್ಪಡೆಗೆ ಆದೇಶಿಸುವಂತೆ ಶಿಕ್ಷಣ ಸಚಿವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಸೂಚನೆ ನೀಡಿರುವುದು ಸ್ವಾಗತಾರ್ಹ. ಪಠ್ಯ ಸೇರ್ಪಡೆಗೆ ಶಿಕ್ಷಣ ಸಚಿವರತ ಮನವೊಲಿಸಿದ ಸಚಿವ ಸುನೀಲ್ ಕುಮಾರ್, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಕೃತಜ್ಞತೆಗಳು ಎಂದು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕೋಶಾಧಿಕಾರಿ ಆರ್. ಪದ್ಮರಾಜ್ ಪ್ರತಿಕ್ರಿಯಿಸಿದ್ದಾರೆ.

ಆದಷ್ಟು ಶೀಘ್ರದಲ್ಲೇ ರಾಜ್ಯ ಸರಕಾರ ಈ ಬಗ್ಗೆ ಆದೇಶ ಹೊರಡಿಸಬೇಕು. ಅಧಿಕೃತ ಆದೇಶವಾದ ಕೂಡಲೇ ಈಗಾಗಲೇ ಕರೆ ನೀಡಲಾದ ಪ್ರತಿಭಟನಾ ಸಭೆಯನ್ನು ಕೈಬಿಡುವ ಬಗ್ಗೆ ನಿರ್ಧರಿಸಲಾಗುವುದು. ಗುರುಗಳ ಪಠ್ಯ ವಿಚಾರದಲ್ಲಿ ಸತ್ಯಾಂಶವನ್ನು ಸಮಾಜದ ಮುಂದಿಟ್ಟ ಮಾಧ್ಯಮಗಳಿಗೆ, ಸಮಾಜವಿಜ್ಞಾನದಲ್ಲಿ ಮರುಸೇರ್ಪಡೆಗೊಳಿಸಲು ಒತ್ತಾಯಿಸಿದ ಗುರುಗಳ ಅನುಯಾಯಿಗಳಿಗೆ, ಹೋರಾಟ ಬೆಂಬಲಿಸಿದ ಸಮಾಜದ ಸಂಘಟನೆಗಳು, ನಾನಾ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತು ಸದಸ್ಯರಿಗೆ ಹಾಗೂ ಗಾಳಿ ಮಳೆಯನ್ನು ಲೆಕ್ಕಿಸದೆ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಮಸ್ತ ಸಮಾಜ ಬಾಂಧವರಿಗೆ ಹೃದಯಪೂರ್ವಕ ಧನ್ಯವಾದಗಳು.

ಇದೊಂದು ಸಂಘರ್ಷ ರಹಿತ ಹೋರಾಟಕ್ಕೆ ಸಂದ ಜಯ. ಮುಂದೆಯೂ ಗುರುಗಳ ತತ್ವದಂತೆ ಅನ್ಯಾಯದ ವಿರುದ್ಧ ಯಾವುದೇ ರಾಜಕೀಯ, ಸಂಘರ್ಷ ಇಲ್ಲದೆ ಹೋರಾಡೋಣ ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು