6:44 PM Thursday20 - August 2026
ಬ್ರೇಕಿಂಗ್ ನ್ಯೂಸ್
ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ…

ಇತ್ತೀಚಿನ ಸುದ್ದಿ

ಕಾಣಿಯೂರು : ಕಾರು ಹೊಳಗೆ ಬಿದ್ದ ಪ್ರಕರಣ ; ಇಬ್ಬರ ಮೃತದೇಹ ಪತ್ತೆ

12/07/2022, 16:23

ಪುತ್ತೂರು :Reporterkarnataka.com : ಕಾಣಿಯೂರು ಸಮೀಪ ಬೈತ್ತಡ್ಕ ಹೊಳೆಗೆ ಕಾರು ಬಿದ್ದ ಪ್ರಕರಣಕ್ಕೆ ಸಂಬಂಧಿಸಿ ಬೈತ್ತಡ್ಕದಿಂದ 200 ಮೀಟರ್ ದೂರ ಮರಕ್ಕಡ ಹೊಳೆಯಲ್ಲಿ ಇಬ್ಬರ ಮೃತ ದೇಹ ಮಂಗಳವಾರ ಮುಂಜಾನೆ ಪತ್ತೆಯಾಗಿದೆ.

ಓರ್ವನ ಮೃತ ದೇಹವು ಹೊಳೆಯ ಬದಿಯಲ್ಲಿದ್ದ ಮರದ ದಿಮ್ಮಿಯಲ್ಲಿ ಪತ್ತೆಯಾಗಿದ್ದು, ಹೊಳೆಯಲ್ಲಿ ನೀರು ಕಡಿಮೆಯಾದ ಹಿನ್ನಲೆಯಲ್ಲಿ ಬೆಳಕಿಗೆ ಬಂದಿದೆ. ಮತ್ತೊಬ್ಬನ ಮೃತದೇಹವು ೫೦ ಮೀಟರ್ ದೂರದ ಅಂತರದಲ್ಲಿ ಪತ್ತೆಯಾಗಿದೆ.ಕಡಬ ತಾಲೂಕಿನ ಕಾಣಿಯೂರು ಸಮೀಪದ ಬೈತಡ್ಕ ಗೌರಿ ಹೊಳೆಗೆ ಕಾರೊಂದು ಬಿದ್ದು ಯುವಕರಿಬ್ಬರು ನಾಪತ್ತೆಯಾದ ಘಟನೆ ಜು. 9ರಂದು ತಡರಾತ್ರಿ ನಡೆದಿತ್ತು. ಬಂಟ್ವಾಳ ತಾಲೂಕಿನ ವಿಟ್ಲ ಮುಟ್ನೂರು ಗ್ರಾಮದ ಕುಂಡಡ್ಕ-ಸಾಂತ್ಯಡ್ಕ ನಿವಾಸಿ ಚೋಮ ನಾಯ್ಕ ಅವರ ಪುತ್ರ ಧನುಷ್‌ (25) ಹಾಗೂ ವಿಟ್ಲ ಕನ್ಯಾನ ನಿವಾಸಿ ಧನುಷ್‌ (21) ಕಾರಿನಲ್ಲಿದ್ದರು ಎನ್ನಲಾಗಿದ್ದು, ಅವರು ನಾಪತ್ತೆಯಾಗಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು