2:23 PM Wednesday11 - February 2026
ಬ್ರೇಕಿಂಗ್ ನ್ಯೂಸ್
ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ… ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕೃಷ್ಣಾ ನದಿ ನೀರು; ಶೀಘ್ರವೇ ಆಂಧ್ರ ಸಿಎಂ ಜತೆ… ರಾಜ್ಯ ಸರ್ಕಾರ ಎಲ್ಲ ರೈತರ ಸಾಲದ ಮೇಲಿನ ಬಡ್ಡಿ ಮನ್ನಾ ಮಾಡಲಿ: ಮಾಜಿ… NDPS ಕಾಯ್ದೆ: ಅಬಕಾರಿ ಅಧಿಕಾರಿಗಳು ವಶಪಡಿಸಿಕೊಂಡಿದ್ದ 5.71 ಕೋಟಿ ಮೌಲ್ಯದ ಮಾದಕ ವಸ್ತುಗಳು… Mangaluru | ಮೆಟ್ರೋ ದರ ಏರಿಕೆ ಬಗ್ಗೆ ಕೇಂದ್ರ ನಮ್ಮ ಅಭಿಪ್ರಾಯ ಕೇಳಿಲ್ಲ:… ಕಾಂಗ್ರೆಸ್‌ನ ಲೂಟಿ ನೋಡಿ ಗಾಂಧೀಜಿಯ ಕೈಗೆ ಕೋಲು ಬಂದಿದೆ: ಪ್ರತಿಪಕ್ಷ ನಾಯಕ ಆರ್‌.ಅಶೋಕ್

ಇತ್ತೀಚಿನ ಸುದ್ದಿ

ಕುರ್ಲಾ: ಜು.17ರಂದು ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022; ಪಮ್ಮಿ ಕೊಡಿಯಾಲ್ ಬೈಲ್ ಸಹಿತ 9 ಮಂದಿಗೆ ಸನ್ಮಾನ

14/07/2022, 19:18

ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ಜುಲೈ 17ರಂದು ನಡೆಯಲಿದೆ.

ಸಮಾರಂಭದಲ್ಲಿ ರಾಷ್ಟಭಕ್ತಿ, ನಾಡಪ್ರೀತಿ, ಕನ್ನಡದ ಕಂಪು ಬೀರಲಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಮಂದಿಯನ್ನು ಸನ್ಮಾನಿಸಲಾಗುವುದು. ಮುಂಬಯಿ ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಹೆಸರು, ಕವಯತ್ರಿ, ಲೇಖಕಿ ಡಾ. ಸುನೀತಾ ಶೆಟ್ಟಿ, ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ವೈದ್ಯಕೀಯ ಕ್ಷೇತ್ರದ ಡಾ. ಸುರೇಶ್ ರಾವ್, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ಪ್ರಗತಿಪರ ಕೃಷಿಕ ಪ್ರಭಾಕರ ಕಲ್ಲೂರಾಯ ಹಾಗೂ ವಾಸ್ತು ತಜ್ಞ ಮಾರ್ತಾಂಡ ಪಂಡಿತ್ ನವೀನ್ ಚಂದ್ರ ಸನಿಲ್ ಅವರನ್ನು ಸನ್ಮಾನಿಸಲಾಗುವುದು.

ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರು ಪ್ರಸ್ತುತ ಕರ್ನಾಟಕದ ಜನಪದ ಅಕಾಡೆಮಿಯ ದ.ಕ.ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಓಬಿಸಿ ಮಹಾಸಭಾದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಂಗಳೂರು ವಿವಿ ತುಳು ಅಧ್ಯಯನ ಪೀಠದ ಸದಸ್ಯರೂ ಹೌದು. ಪಮ್ಮಿ ಕೊಡಿಯಾಲ್ ಬೈಲ್ ಅವರು ರಂಗಾಸಕ್ತರು, ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿಯೂ ಅವರಿಗೆ ಅಪಾರ ಒಲವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು