6:46 AM Monday14 - July 2025
ಬ್ರೇಕಿಂಗ್ ನ್ಯೂಸ್
Kodagu | ದಕ್ಷಿಣ ಕೊಡಗಿನಲ್ಲಿ ಹಸುಗಳ ಮೇಲೆ ವ್ಯಾಘ್ರ ದಾಳಿ: ಒಂದು ಬಲಿ;… ಶರಾವತಿ ನದಿಗೆ ಹೊಲೆ ಬಾಗಿಲಿನಲ್ಲಿ ನಿರ್ಮಿಸಿದ ನೂತನ ಸೇತುವೆ: ಕೇಂದ್ರ ಭೂ ಸಾರಿಗೆ… Kodagu | ಕಾಡಾನೆಗಳ ಕಾಡಿಗೆ ಅಟ್ಟುವ ಕಾರ್ಯಾಚರಣೆ ಯಶಸ್ವಿ: 18 ಸಲಗಗಳು ಮರಳಿ… ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.…

ಇತ್ತೀಚಿನ ಸುದ್ದಿ

ಕುರ್ಲಾ: ಜು.17ರಂದು ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022; ಪಮ್ಮಿ ಕೊಡಿಯಾಲ್ ಬೈಲ್ ಸಹಿತ 9 ಮಂದಿಗೆ ಸನ್ಮಾನ

14/07/2022, 19:18

ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ಜುಲೈ 17ರಂದು ನಡೆಯಲಿದೆ.

ಸಮಾರಂಭದಲ್ಲಿ ರಾಷ್ಟಭಕ್ತಿ, ನಾಡಪ್ರೀತಿ, ಕನ್ನಡದ ಕಂಪು ಬೀರಲಿದೆ. ಈ ಸಂದರ್ಭದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 9 ಮಂದಿಯನ್ನು ಸನ್ಮಾನಿಸಲಾಗುವುದು. ಮುಂಬಯಿ ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಹೆಸರು, ಕವಯತ್ರಿ, ಲೇಖಕಿ ಡಾ. ಸುನೀತಾ ಶೆಟ್ಟಿ, ಕರ್ನಾಟಕ ಜನಪದ ಅಕಾಡೆಮಿ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್, ವೈದ್ಯಕೀಯ ಕ್ಷೇತ್ರದ ಡಾ. ಸುರೇಶ್ ರಾವ್, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ಪ್ರಗತಿಪರ ಕೃಷಿಕ ಪ್ರಭಾಕರ ಕಲ್ಲೂರಾಯ ಹಾಗೂ ವಾಸ್ತು ತಜ್ಞ ಮಾರ್ತಾಂಡ ಪಂಡಿತ್ ನವೀನ್ ಚಂದ್ರ ಸನಿಲ್ ಅವರನ್ನು ಸನ್ಮಾನಿಸಲಾಗುವುದು.

ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರು ಪ್ರಸ್ತುತ ಕರ್ನಾಟಕದ ಜನಪದ ಅಕಾಡೆಮಿಯ ದ.ಕ.ಜಿಲ್ಲಾಧ್ಯಕ್ಷರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇತ್ತೀಚೆಗೆ ಓಬಿಸಿ ಮಹಾಸಭಾದ ಜಿಲ್ಲಾಧ್ಯಕ್ಷರಾಗಿ ನೇಮಕಗೊಂಡಿದ್ದಾರೆ. ಮಂಗಳೂರು ವಿವಿ ತುಳು ಅಧ್ಯಯನ ಪೀಠದ ಸದಸ್ಯರೂ ಹೌದು. ಪಮ್ಮಿ ಕೊಡಿಯಾಲ್ ಬೈಲ್ ಅವರು ರಂಗಾಸಕ್ತರು, ರಂಗಭೂಮಿ, ಸಿನಿಮಾ ಕ್ಷೇತ್ರದಲ್ಲಿಯೂ ಅವರಿಗೆ ಅಪಾರ ಒಲವಿದೆ.

ಇತ್ತೀಚಿನ ಸುದ್ದಿ

ಜಾಹೀರಾತು