9:57 AM Monday26 - January 2026
ಬ್ರೇಕಿಂಗ್ ನ್ಯೂಸ್
ರಾಜ್ಯದಲ್ಲಿದ್ದಾರೆ ಒಟ್ಟು 10,365 ಟ್ರಾನ್ಸ್ ಜೆಂಡರ್: ಸಮೀಕ್ಷೆಯಲ್ಲಿ ಲಿಂಗತ್ವ ಅಲ್ಪಸಂಖ್ಯಾತರ ಸ್ಥಿತಿಗತಿ ಬಗ್ಗೆ… ಹುಬ್ಬಳ್ಳಿ | ಕೊಳೆಗೇರಿ ನಿವಾಸಿಗಳ ಮುಖ್ಯವಾಹಿನಿಗೆ ತರಲು ಬೃಹತ್ ಪ್ರಮಾಣದಲ್ಲಿ ಮನೆ ವಿತರಣೆ:… ಪ್ರೀತಿಯಲ್ಲಿ ಒಂದಾದ ಭಾರತ- ಚೀನಾ!: ಚೈನಾದ ಬೆಡಗಿಯ ಕೈ ಹಿಡಿದ ಕಾಫಿನಾಡ ಯುವಕ ಗೋಣಿಕೊಪ್ಪ- ತಿತಿಮತಿ ಮುಖ್ಯ ರಸ್ತೆಯಲ್ಲಿ‌ ರಾತ್ರಿ ವ್ಯಾಘ್ರನ ದರ್ಶನ; ಭಯಭೀತರಾದ ಗ್ರಾಮಸ್ಥರು ಸದನದ ಪಾವಿತ್ರ್ಯತೆ ಹಾಳು ಮಾಡುವ ಕೆಲಸ: ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಟೀಕೆ ನರೇಗಾ ಉಳಿಸಲು ಕಾಂಗ್ರೆಸ್ ಉಪವಾಸ ಸತ್ಯಾಗ್ರಹ ಕೋಲಾರದಲ್ಲಿ ಸರಕಾರದಿಂದಲೇ ವೈದ್ಯಕೀಯ ಕಾಲೇಜು: ಜಿಲ್ಲಾ ಉಸ್ತುವಾರಿ ಸಚಿವ ಬೈರತಿ ಸುರೇಶ್ ಘೋಷಣೆ ಶಿಕ್ಷಣ ಮತ್ತು ಕೈಗಾರಿಕೆ ಒಗ್ಗೂಡಿದರೆ ಮಾತ್ರ ನಾವೀನ್ಯತೆ ಹೆಚ್ಚಿನ ಅವಕಾಶ ಸಿಗಲಿದೆ: ಇಸ್ರೋ… ಹುಣಸೂರಿನ ಜುವೆಲ್ಲರಿ ದರೋಡೆ ಪ್ರಕರಣ: ಇಬ್ಬರು ಆರೋಪಿಗಳ ಬಿಹಾರದಲ್ಲಿ ಬಂಧನ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆ ಅನುಷ್ಠಾನದಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ: ಕೃಷಿ…

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು