1:37 PM Wednesday6 - May 2026
ಬ್ರೇಕಿಂಗ್ ನ್ಯೂಸ್
ಸಚಿವ ಜಮೀರ್ ಅಹ್ಮದ್ ಖಾನ್ ಮನೆಯಲ್ಲಿ ಕಳ್ಳತನ ಪ್ರಕರಣ : ಇಬ್ಬರು ಆರೋಪಿಗಳು… ಪಶ್ಚಿಮ ಬಂಗಾಳ: ರಾಜೀನಾಮೆ ನೀಡಲು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ನಿರಾಕರಣೆ ಧಾರವಾಡದಲ್ಲಿ ಬೌದ್ಧ ಸನ್ಯಾಸಿ ಕೊಲೆ ಪ್ರಕರಣ: ಮಹಾರಾಷ್ಟ್ರದಲ್ಲಿ 3 ಮಂದಿ ಆರೋಪಿಗಳ ಅರೆಸ್ಟ್ ಸಿದ್ದಾಪುರ: ಕಾವೇರಿ ನದಿಯಲ್ಲಿ ಮುಳುಗಿ ವ್ಯಕ್ತಿ ದಾರುಣ ಸಾವು ಕೇವಲ 1 ಮತದಿಂದ ಡಿಎಂಕೆ ಅಭ್ಯರ್ಥಿ ವಿರುದ್ಧ ರೋಚಕ ಗೆಲುವು ಕಂಡ ಟಿವಿಕೆ… ಕೇರಳದಲ್ಲಿ ಯುಡಿಎಫ್‌ ಶತಕ: ಸಿಎಂ ರೇಸ್​ನಲ್ಲಿ ಮೂವರ ಹೆಸರು ಪಶ್ಚಿಮ ಬಂಗಾಳ: ಚುನಾವಣೆ ಫಲಿತಾಂಶ ಬಳಿಕ ಗಲಾಟೆ, ಪೊಲೀಸರಿಂದ ಲಾಠಿಚಾರ್ಜ್ ಪಶ್ಚಿಮ ಬಂಗಾಳ: ಸಿಎಂ ಮಮತಾ ಬ್ಯಾನರ್ಜಿ ನಿವಾಸದ ಎದುರು ‘ಜೈ ಶ್ರೀರಾಮ್’ ಘೋಷಣೆ… ಮಗ ಸಿಎಂ ಆಗೋ ಖುಷಿಯಲ್ಲಿ ದೇವಸ್ಥಾನಕ್ಕೆ ಹೋಗಿ ಪ್ರಾರ್ಥನೆ ಸಲ್ಲಿಸಿದ ವಿಜಯ್‌ ತಂದೆ-ತಾಯಿ ಕೊಡವರಿಗೆ ಪ್ರತ್ಯೇಕ ಲೋಕಸಭೆ, ವಿಧಾನಸಭಾ ಕ್ಷೇತ್ರಕ್ಕೆ ಆಗ್ರಹ: ಸಿಎನ್‍ಸಿಯಿಂದ ಅಭಿಯಾನ ಆರಂಭ

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು