10:27 AM Sunday20 - April 2025
ಬ್ರೇಕಿಂಗ್ ನ್ಯೂಸ್
Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ… ಮಹಿಳೆ ಮೇಲೆ ಲೈಂಗಿಕ ಕಿರುಕುಳ ಹಾಗೂ ಹಲ್ಲೆ: ಬಣಕಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ… ಭಾರತದಲ್ಲಿ ಪ್ರಪ್ರಥಮವಾಗಿ ಮುಳಿಯದ ಮತ್ತೊಂದು ಸಾಧನೆ: ಲ್ಯಾಬ್ ಗ್ರೋನ್ ಡೈಮಂಡ್ ಟೆಸ್ಟಿಂಗ್ ಮಿಷನ್…

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು