5:50 PM Sunday16 - August 2026
ಬ್ರೇಕಿಂಗ್ ನ್ಯೂಸ್
ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್… ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಸ್ಟ್ 16ರಂದು ಕೊಡಗಿಗೆ ಭೇಟಿ: ತಲಕಾವೇರಿಯಲ್ಲಿ ಪೂಜೆ ಸಲ್ಲಿಕೆ ಯು.ಟಿ. ಖಾದರ್‌ಗೆ ಅಲ್ಪಸಂಖ್ಯಾತರ ಕಲ್ಯಾಣ, ಹಜ್ ಮತ್ತು ವಕ್ಫ್ ಇಲಾಖೆ ಹೆಚ್ಚುವರಿ ಖಾತೆ… Surathkal | ಸುರತ್ಕಲ್ : ಶೀಟ್ ಅಳವಡಿಸುವ ಸಂದರ್ಭ ವಿದ್ಯುತ್ ತಂತಿ ಸ್ಪರ್ಶಿಸಿ… ಆಗುಂಬೆ | ಚಲಿಸುತ್ತಿದ್ದ ಕೆಎಸ್ಆರ್ಟಿಸಿ ಬಸ್ ನಿಂದ ಕಳಚಿ ಬಿದ್ದ ಟಯರ್ :… Maravoor | ಮರವೂರಿನ ಹೋಟೆಲ್‌ನಲ್ಲಿ ಕೇರಳದ ಕಾಸರಗೋಡು ಮೂಲದ 24 ವರ್ಷದ ಯುವಕ… ತೊಕ್ಕೊಟ್ಟು | ಬಾರ್ ಮುಂಭಾಗ ತಲವಾರು ಝಳಪಿಸಿ ದಾಂಧಲೆ ; ರೌಡಿ ಶೀಟರ್…

ಇತ್ತೀಚಿನ ಸುದ್ದಿ

ಪುರುಷನ ಜತೆಗಿದ್ದ ಮಹಿಳೆ ಸಂಬಂಧ ಕೆಟ್ಟಾಗ ಅತ್ಯಾಚಾರವಾಯಿತು ಅನ್ನೋ ಹಾಗಿಲ್ಲ: ಸುಪ್ರೀಂಕೋರ್ಟ್

15/07/2022, 23:15

ಹೊಸದಿಲ್ಲಿ(reporterkarnataka.com): ಮಹಿಳೆ ತಾನು ಇಷ್ಟಪಟ್ಟು ಪುರುಷನ ಜೊತೆಗಿದ್ದು,ಆ ಬಳಿಕ ಸಂಬಂಧ ನಡುವೆ ವೈಮನಸು ಉಂಟಾಗಿ ದೂರವಾದಾಗ ಅತ್ಯಾಚಾರವಾಯಿತು ಎಂದು ದೂರು ನೀಡುವಂತಿಲ್ಲ ಎಂದು ಸುಪ್ರೀಂಕೋರ್ಟ್ ಹೇಳಿದೆ.

ಆರೋಪಿ ಅನ್ಸಾರ್ ಮೊಹಮ್ಮದ್ ಎಂಬಾತ ತಮ್ಮ ವಿರುದ್ಧ ಸಲ್ಲಿಕೆ ಆಗಿರುವ ಅತ್ಯಾಚಾರ ಆರೋಪದ ಕುರಿತಂತೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನಿಗೆ ಸಂಬಂಧಿತ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೇಮಂತ್ ಗುಪ್ತ ಮತ್ತು ವಿಕ್ರಮ್​ನಾಥ್ ಅವರಿದ್ದ ಪೀಠ, ಮೇಲಿನ ತೀರ್ಪು ನೀಡಿ, ಜಾಮೀನು ಮಂಜೂರು ಮಾಡಿದೆ.

ದೂರುದಾರ ಮಹಿಳೆಯು ಅನ್ಸಾರ್​ ಮೊಹಮ್ಮದ್​ನೊಂದಿಗೆ ಇಷ್ಟಪಟ್ಟೇ ಜತೆಗಿದ್ದರು. ಆದರೆ ಈಗ ಇಬ್ಬರ ನಡುವಿನ ಸಂಬಂಧ ಹದೆಗೆಟ್ಟಿದೆ ಎಂಬ ಕಾರಣಕ್ಕೆ ಸೆಕ್ಷನ್​ 376(2)ರ ಪ್ರಕಾರ ಎಫ್​ಐಆರ್ ದಾಖಲು ಮಾಡಲಾಗದು ಎಂದು ಪೀಠ ಅಭಿಪ್ರಾಯಪಟ್ಟಿದೆ. ಮಾತ್ರವಲ್ಲ, ಆರೋಪಿಗೆ ನಿರೀಕ್ಷಣಾ ಜಾಮೀನು ನಿರಾಕರಿಸಿ ರಾಜಸ್ಥಾನ್ ಹೈಕೋರ್ಟ್ ನೀಡಿದ್ದ ತೀರ್ಪನ್ನು ತಳ್ಳಿಹಾಕಿದೆ.

25 ವರ್ಷದ ಮಹಿಳೆ ಈ ಪ್ರಕರಣದಲ್ಲಿ ದೂರುದಾರರಾಗಿದ್ದು, ಅನ್ಸಾರ್ ಜತೆ ನಾಲ್ಕು ವರ್ಷದಿಂದ ಸಂಬಂಧ ಹೊಂದಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು