2:57 AM Monday21 - April 2025
ಬ್ರೇಕಿಂಗ್ ನ್ಯೂಸ್
Karnataka BJP | ಹಾವೇರಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ಸರಕಾರದ ವಿರುದ್ಧ… DCM In Dharmastala | ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಧರ್ಮಸ್ಥಳಕ್ಕೆ ಭೇಟಿ:… Chikkamagaluru | ಜನಿವಾರ ತೆಗೆಸಿದ ಪ್ರಕರಣ: ಶೃಂಗೇರಿಯಲ್ಲಿ ಪೇಜಾವರ ಸ್ವಾಮೀಜಿ ಅಸಮಾಧಾನ Gokarna | ಜನಿವಾರ ಪ್ರಕರಣ: ಸಂಘಟಿತ ಪ್ರತಿಭಟನೆಗೆ ಹೊಸನಗರ ಮಠದ ರಾಘವೇಶ್ವರ ಶ್ರೀ… ಮುಳಿಯ ಗೋಲ್ಡ್ ಆ್ಯಂಡ್ ಡೈಮಂಡ್ ಶೋರೂಮ್ ಗೆ ನಾಳೆ ಪ್ರಸಿದ್ದ ಚಲನಚಿತ್ರ ನಟ… Mangaluru | ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಬೃಹತ್ ಪ್ರತಿಭಟನೆ; ಅಡ್ಯಾರ್ ಮೈದಾನದಲ್ಲಿ… Karnataka BJP | ಕಲಬುರ್ಗಿಯಲ್ಲಿ ಬಿಜೆಪಿ ಜನಾಕ್ರೋಶ ಯಾತ್ರೆ: ಕಾಂಗ್ರೆಸ್ ತುಘಲಕ್ ದರ್ಬಾರ್… Bagalkote | ಅನುಭವ ಮಂಟಪ-ಬಸವಾದಿ ಶರಣರ ವೈಭವದ ರಥಯಾತ್ರೆ: ಸಿಎಂ ಸಿದ್ದರಾಮಯ್ಯ ಚಾಲನೆ Kolara | ಮಾವು ಸುಗ್ಗಿ ಅಂತ್ಯಕ್ಕೆ ದಿನಗಣನೆ ಆರಂಭ: ಈ ವರ್ಷ ಇಳುವರಿಯೂ… Mangaluru | ಸರಕಾರದ ಆಶಯ ಅರಿತು ಕೆಲಸ ಮಾಡಿ: ಮುಂಗಾರು ಹಂಗಾಮು ಉದ್ಘಾಟಿಸಿ…

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು