12:08 PM Tuesday16 - December 2025
ಬ್ರೇಕಿಂಗ್ ನ್ಯೂಸ್
ಸಂಸತ್ ಅಧಿವೇಶನ | ರಾಜ್ಯಸಭೆಯಲ್ಲಿ ವೋಟ್‌ ಚೋರಿ ಚರ್ಚೆ; ಕಾಂಗ್ರೆಸ್‌ ವಿರುದ್ಧ ಗುಡುಗಿದ… Belagavi | ಶ್ಯಾಮನೂರು ಶಿವಶಂಕರಪ್ಪ ಅವರ ನಿಧನಕ್ಕೆ ಸದನದಲ್ಲಿ ಮುಖ್ಯಮಂತ್ರಿ ಸಂತಾಪ ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್

ಇತ್ತೀಚಿನ ಸುದ್ದಿ

ಚಿಕ್ಕಮಗಳೂರು: ಮಳೆಯ ರುದ್ರ ನರ್ತನಕ್ಕೆ ಸಾಲು ಸಾಲು ಮನೆ ಕುಸಿತ; ಹಲವು ಮನೆಗಳಿಗೆ ಹಾನಿ, ಅಪಾರ ಆಸ್ತಿ ನಷ್ಟ

15/07/2022, 23:31

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಪ್ರದೇಶಗಳಲ್ಲಿ ಮಳೆಯ ರೌದ್ರ ನರ್ತನ ಮುಂದುವರಿದಿದ್ದು, ಜಿಲ್ಲೆಯಲ್ಲಿ ಹಲವು ಮನೆಗಳು ಸಂಪೂರ್ಣ ನಾಶಗೊಂಡಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಹೆಬ್ಬರಿಗೆಯಲ್ಲಿ ಎರಡೇ ದಿನಗಳಲ್ಲಿ ಮತ್ತೊಂದು ಮನೆ ಕುಸಿದು ಬಿದ್ದಿದೆ. ಲಲಿತಾ ಮಂಜುನಾಥ ಎಂಬವರಿಗೆ ಸೇರಿದ ಮನೆ ಇದಾಗಿದೆ. ತರುವೆ ಗ್ರಾಮದಲ್ಲಿ ನಾರಾಯಣಮ್ಮ ಎಂಬುವರಿಗೆ ಸೇರಿದ ಮನೆ ಬಿರುಗಾಳಿ ಮಳೆಗೆ ಸಂಪೂರ್ಣ ಹಾನಿಗೀಡಾಗಿದೆ.


ಕೊಟ್ಟಿಗೆಹಾರದ ನಿಸರ್ಗ ಹೊಟೇಲ್ ನ ಬಾರಿ ಗಾಜಿನ ಮುಂಬಾಗಿಲು ಬಿದ್ದು ಪುಡಿಯಾಗಿದೆ. ರಾಮನಗರದಲ್ಲಿ ಮನೆ ಸಂಪೂರ್ಣ ನೆಲಸಮವಾಗಿದೆ. ತರುವೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಯಮುನಾ ಎಂಬುವರ ಮನೆ ಮೇಲ್ಛಾವಣಿಯ ಹಂಚುಗಳು ಹಾನಿಗೊಳಗಾಗಿದೆ.

ಬಕ್ಕಿ ಗ್ರಾಮದಲ್ಲಿಯೂ ಮನೆಯೊಂದು ಹಾನಿಗೀಡಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು