6:13 AM Tuesday26 - May 2026
ಬ್ರೇಕಿಂಗ್ ನ್ಯೂಸ್
ಕಾಫಿ ತೋಟದಲ್ಲಿ ಕಾಡಾನೆಗಳ ‘ರೌದ್ರ ನರ್ತನ: ಅರಣ್ಯ ಸಿಬ್ಬಂದಿಯನ್ನೇ ಬೆನ್ನಟ್ಟಿದ ಗಜಪಡೆ ಮೇಕೆದಾಟು ವಿವಾದ: ತಮಿಳುನಾಡು ಸಿಎಂ ವಿಜಯ್ ತುರ್ತು ಸಭೆ, ಕಾನೂನು ಹೋರಾಟ ಚುರುಕುಗೊಳಿಸಲು… ಕೊಲ್ಲೂರು ಆಕ್ಸಿಡೆಂಟ್ | ಮೃತ ಮಹಿಳೆಯ ಮೈ ಮೇಲಿನ ಚಿನ್ನಾಭರಣ ಕದ್ದ ಕೇಸಿಗೆ… ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್

16/07/2022, 09:49

ಬೆಂಗಳೂರು(reporterkarnataka.com):  ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ.

ರಾಜ್ಯ ಸರಕಾರದ ಅಧೀನಕ್ಕೊಳಪಟ್ಟ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ಸರಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಸರಕಾರಿ ನೌಕರರ ಮನವಿಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಿತ್ತು. ಆದರೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆದಿದೆ.

ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ. ಕಚೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ  ಮಾಹಿತಿ ಲಭ್ಯವಾಗುತ್ತದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು