10:21 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಸರಕಾರಿ ಕಚೇರಿಯಲ್ಲಿ ಅನಧಿಕೃತ ಪೋಟೊ, ವೀಡಿಯೋ ನಿಷೇಧ: 24 ತಾಸಿನೊಳಗೆ ಸರಕಾರ ಯುಟರ್ನ್ !; ಆದೇಶ ವಾಪಸ್

16/07/2022, 09:49

ಬೆಂಗಳೂರು(reporterkarnataka.com):  ರಾಜ್ಯ ಸರಕಾರ ತಾನು ಮಾಡಿದ ಆದೇಶವನ್ನು 24 ತಾಸಿನೊಳಗೆ ವಾಪಸ್ ಪಡೆದಿದೆ. ರಾಜ್ಯದ ಎಲ್ಲ ಸರಕಾರಿ ಇಲಾಖೆಗಳ ಕಚೇರಿಗಳಲ್ಲಿ ಪೂರ್ವಾನುಮತಿ ಇಲ್ಲದೆ ಸಾರ್ವಜನಿಕರು ಅನಧಿಕೃತವಾಗಿ ಫೋಟೋ, ವಿಡಿಯೋ ಮಾಡಬಾರದು ಎಂದು ಹೊರಡಿಸಿದ ಆದೇಶವನ್ನು ತಡರಾತ್ರಿ ವಾಪಸ್ ಪಡೆದಿದೆ.

ರಾಜ್ಯ ಸರಕಾರದ ಅಧೀನಕ್ಕೊಳಪಟ್ಟ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ ಅಥವಾ ವಿಡಿಯೋ ಮಾಡದಂತೆ ನಿಷೇಧಿಸಿ ಸರಕಾರ ಜುಲೈ 15ರಂದು ಆದೇಶ ಹೊರಡಿಸಿತ್ತು. ಸರಕಾರಿ ನೌಕರರ ಮನವಿಯ ಮೇರೆಗೆ ಸರಕಾರ ಈ ಆದೇಶ ಹೊರಡಿಸಿತ್ತು. ಆದರೆ ಆದೇಶಕ್ಕೆ ತೀವ್ರ ವಿರೋಧ ವ್ಯಕ್ತವಾದ ಹಿನ್ನೆಲೆಯಲ್ಲಿ ವಾಪಸ್ ಪಡೆದಿದೆ.

ಈ ಆದೇಶದ ಹಿಂದೆ ಭ್ರಷ್ಟಾಚಾರ ಅಡಗಿದೆ. ಕಚೇರಿಯೊಳಗೆ ವಿಡಿಯೋ ಪೋಟೊ ತೆಗೆದರೆ ಸಂಪೂರ್ಣ  ಮಾಹಿತಿ ಲಭ್ಯವಾಗುತ್ತದೆ. ಇದರ ಹಿಂದೆ ಷಡ್ಯಂತರ ಅಡಗಿದೆ ಎಂದು ಪ್ರತಿಪಕ್ಷಗಳು ತೀವ್ರ ವಿರೋಧ ವ್ಯಕ್ತಪಡಿಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು