12:16 AM Saturday20 - June 2026
ಬ್ರೇಕಿಂಗ್ ನ್ಯೂಸ್
ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ… Chitradurga | ಪರಶುರಾಂಪುರ: ಕಂದಾಯ ಇಲಾಖೆ ರಾಜಸ್ವ ನಿರೀಕ್ಷಕ ಎಸ್. ಆರ್. ರಾಜೇಶ್… ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ…

ಇತ್ತೀಚಿನ ಸುದ್ದಿ

ಉರ್ವಸ್ಟೋರ್ ಸುಂಕದಕಟ್ಟೆ; ಮಳೆಯಿಂದ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್  ಭೇಟಿ 

16/07/2022, 10:33

ಮಂಗಳೂರು(reporterkarnataka.com) :ದೇರೇಬೈಲ್ ಪಶ್ಚಿಮ ವಾರ್ಡಿನ ಉರ್ವಸ್ಟೋರ್ ಸುಂಕದಕಟ್ಟೆಯಲ್ಲಿ ಮಳೆಯಿಂದಾಗಿ ಹಾನಿಗೀಡಾದ ಮನೆಗೆ ಶಾಸಕ ವೇದವ್ಯಾಸ್ ಕಾಮತ್ ಅವರು ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 

ಈ ವೇಳೆ ಮಾತನಾಡಿದ ಶಾಸಕ ಕಾಮತ್, ಸುಂಕದಕಟ್ಟೆಯ ಪದ್ಮಾವತಿ ಎಂಬವರ ಮನೆಯು ಸಂಪೂರ್ಣವಾಗಿ ಹಾನಿಗೀಡಾಗಿದ್ದು ಅದೃಷ್ಟವಶಾತ್ ಜೀವಹಾನಿಯಾಗಿಲ್ಲ. ಈಗಾಗಲೇ ನಮ್ಮ ಕಾರ್ಯಕರ್ತರು ಕುಟುಂಬವನ್ನು ಅಲ್ಲಿಂದ ಬೇರೆಡೆ ಸ್ಥಳಾಂತರಿಸಿದ್ದು ದಿನಸಿ ಸಾಮಗ್ರಿಗಳ ವ್ಯವಸ್ಥೆ ಕಲ್ಪಿಸಲು ಸೂಚನೆ ನೀಡಿದ್ದೇನೆ ಎಂದು ಹೇಳಿದರು. 

ರಾಜ್ಯ ಸರಕಾರದಿಂದ ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ನೀಡಲಾಗುತಿದ್ದು, ಬೇಕಾಗಿರುವ‌ ದಾಖಲೆಗಳನ್ನು ಪಡೆದು ತಕ್ಷಣವೇ ಪರಿಹಾರ ಧನ ಬಿಡುಗಡೆಗೆ ಕ್ರಮ ಕೈಗೊಳ್ಳಲು ಸೂಚಿಸಿದ್ದೇನೆ. ರಾಜ್ಯ ಸರಕಾರವು ಸಂಪೂರ್ಣವಾಗಿ ಹಾನಿಗೀಡಾದ ಮನೆಗಳಿಗೆ 5 ಲಕ್ಷ ಪರಿಹಾರ ಘೋಷಿಸಿರುವ ಕಾರಣ ಆರ್ಥಿಕವಾಗಿ ಹಿಂದುಳಿದ ಇಂತಹ ಅನೇಕ ಕುಟುಂಬಗಳಿಗೆ ಸಹಕಾರಿಯಾಗಿದೆ ಎಂದು ಶಾಸಕ ಕಾಮತ್ ನುಡಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯರುಗಳಾದ ಜಯಲಕ್ಷ್ಮಿ ಶೆಟ್ಟಿ, ಮನೋಜ್ ಕುಮಾರ್, ಬಿಜೆಪಿ ಮುಖಂಡರಾದ ವಿಜಯ್ ಕುಮಾರ್ ಶೆಟ್ಟಿ, ಅಮಿತ್ ರಾಜ್, ಪುಷ್ಪ ಶೆಟ್ಟಿ, ಗೀತಾ ಭವಾನಿ ಶಂಕರ್, ದೀಕ್ಷಿತ್, ನಾರಾಯಣ ಪೂಜಾರಿ, ಸಂಬಂಧಪಟ್ಟ ಅಧಿಕಾರಿಗಳು ಹಾಗೂ ಸ್ಥಳೀಯರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು