7:08 AM Tuesday17 - February 2026
ಬ್ರೇಕಿಂಗ್ ನ್ಯೂಸ್
ಪ್ರೇಮಿಗಳ ದಿನಾಚರಣೆಯ ಎಫೆಕ್ಟ್ ?: ಪ್ರೇಮ ನಿವೇದನೆ ಒಪ್ಪಿಕೊಳ್ಳದ ಯುವತಿಗೆ ಬಿಯರ್ ಬಾಟ್ಲಿಯಿಂದ… ಕೊಪ್ಪಳದಲ್ಲಿ ವಿದೇಶಿ ಮಹಿಳೆಯ ಅತ್ಯಾಚಾರ, ಕೊಲೆ ಪ್ರಕರಣ: 3 ಮಂದಿ ಆರೋಪಿಗಳಿಗೆ ಗಲ್ಲು ಸಿದ್ದರಾಮಯ್ಯನವರ ಸರ್ಕಾರ ಜೀರೋ ಅಭಿವೃದ್ಧಿಯ ಸರ್ಕಾರ: ಮಾಜಿ ಗೃಹ ಸಚಿವ ಆರಗ ಜ್ಞಾನೇಂದ್ರ ಮಹಾಶಿವರಾತ್ರಿ | ಮಲೆ ಮಹದೇಶ್ವರ ಬೆಟ್ಟದಲ್ಲಿ ಮಾದಪ್ಪನಿಗೆ ಎಣ್ಣೆ ಮಜ್ಜನ: ವಿಶೇಷ ಪೂಜೆ ಟಿ20 ವಿಶ್ವಕಪ್: ಪಾಕಿಸ್ತಾನ ವಿರುದ್ದ ಭಾರತಕ್ಕೆ 61 ರನ್ ಜಯ; ಸೂಪರ್ 8… ರಾಜ್ಯದಲ್ಲಿ 2030ರ ವರೆಗೆ ಹಂತ ಹಂತವಾಗಿ ಪೊಲೀಸ್ ವಸತಿಗೃಹ ನಿರ್ಮಾಣ: ಗೃಹ ಸಚಿವ… ಅಮೆರಿಕ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ರೈತರು ತೋಳಿಗೆ ಕಪ್ಪುಪಟ್ಟಿ ಕಟ್ಟಿ… ನಿಯಂತ್ರಣ ತಪ್ಪಿದ ಕೆಎಸ್‌ಆರ್‌ಟಿಸಿ ಬಸ್; ಮೈಸೂರಿನಲ್ಲಿ ಸರಣಿ ಅಪಘಾತ; ಟ್ರಾಫಿಕ್ ಜಾಮ್ ಕೊಡಗಿನಲ್ಲಿ ಸೂಪರ್ ಸ್ಟಾರ್ ರಜನಿಕಾಂತ್: ಮಡಿಕೇರಿ ಸಮೀಪ ರೆಸಾರ್ಟ್ ಉದ್ಘಾಟನೆ ಸೋಮವಾರಪೇಟೆ: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ; ಸವಾರ ಸ್ಥಳದಲ್ಲೇ ಸಾವು,…

ಇತ್ತೀಚಿನ ಸುದ್ದಿ

ಪತ್ನಿ ಮಾಂಗಲ್ಯ ತೆಗೆಯುವುದು ಪತಿಗೆ ನೀಡುವ ಮಾನಸಿಕ ಹಿಂಸೆ: ಮದ್ರಾಸ್ ಹೈಕೋರ್ಟ್

16/07/2022, 13:31

ಚೆನ್ನೈ(reporterkarnataka.com): ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಗಂಡನಿಂದ ದೂರವಾದ ಪತ್ನಿಯು ಮಾಂಗಲ್ಯವನ್ನು ಕತ್ತಿನಿಂದ ತೆಗೆಯುವುದನ್ನು ಗಂಡನಿಗಾಗುವ ಮಾನಸಿಕ ಕ್ರೌರ್ಯವೆಂದು ಪರಿಗಣಿಸಿ ಮದ್ರಾಸ್ ಹೈಕೋರ್ಟ್ ವ್ಯಕ್ತಿಯೊಬ್ಬನಿಗೆ ವಿಚ್ಛೇದನ ಪಡೆಯಲು ಅನುಮತಿ ನೀಡಿದೆ.

ಹೆಂಡತಿ ಮಾಂಗಲ್ಯ ಧರಿಸುತ್ತಿಲ್ಲ ಎಂದು ನೊಂದ ವ್ಯಕ್ತಿ ವಿಚ್ಛೇದನ ಕೋರಿ ಸಲ್ಲಿಸಿದ ಅರ್ಜಿಗೆ ಸುಪ್ರೀಂ ಕೋರ್ಟ್  ಒಪ್ಪಿಗೆ ನೀಡಿದೆ.

ತಮಿಳುನಾಡು ಈ ರೋಡ್ ನ ವೈದ್ಯಕೀಯ ಕಾಲೇಜಿನಲ್ಲಿ ಪ್ರಾಧ್ಯಾಪಕರಾಗಿ ಕಾರ್ಯನಿರ್ವಹಿಸುತ್ತಿರುವ ಸಿ. ಶಿವಕುಮಾರ್ ಅವರ ಅರ್ಜಿ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿ.ಎಂ. ವೇಲುಮಣಿ ಮತ್ತು ಎಸ್. ಸೌಂಥರ್ ಅವರ ವಿಭಾಗೀಯ ಪೀಠವು ಈ ಅಭಿಪ್ರಾಯವನ್ನು ವ್ಯಕ್ತಪಡಿಸಿದೆ. ತನಗೆ ವಿಚ್ಛೇದನ ನೀಡಲು ನಿರಾಕರಿಸಿದ ಸ್ಥಳೀಯ ಕೌಟುಂಬಿಕ ನ್ಯಾಯಾಲಯದ 2016 ಜೂನ್ 15ರ ಆದೇಶಗಳನ್ನು ರದ್ದುಗೊಳಿಸುವಂತೆ ಅವರು ಕೋರಿದ್ದರು.

ಈ ಬಗ್ಗೆ ಮಹಿಳೆಯ ವಿಚಾರಣೆ ನಡೆಸಿದಾಗ ಆಕೆ ಗಂಡನಿಂದ ದೂರವಿದ್ದ ಸಮಯದಲ್ಲಿ ಮಾಂಗಲ್ಯವನ್ನು ತೆಗೆದಿಟ್ಟಿದ್ದಾಗಿ ಒಪ್ಪಿಕೊಂಡಿದ್ದು, ತಾನು ತಾಳಿಯನ್ನು ಇನ್ನೂ ಇಟ್ಟುಕೊಂಡಿದ್ದೇನೆ. ಆದರೆ, ಅದರ ಜೊತೆಗಿದ್ದ ಕರಿಮಣಿ ಸರವನ್ನು ಮಾತ್ರ ತೆಗೆದಿದ್ದೇನೆ ಎಂದು ಆಕೆ ತಿಳಿಸಿದ್ದಳು. ಮಾಂಗಲ್ಯವನ್ನು ತೆಗೆದುಹಾಕುವ ಕ್ರಿಯೆಗೆ ತನ್ನದೇ ಆದ ಮಹತ್ವವಿದೆ ಎಂದು ಕೋರ್ಟ್ ಹೇಳಿದೆ.

ಮಹಿಳೆಯ ಕುತ್ತಿಗೆಯಲ್ಲಿರುವ ತಾಳಿ ಪವಿತ್ರವಾದ ವಿಷಯವಾಗಿದ್ದು, ಅದು ವೈವಾಹಿಕ ಜೀವನದ ನಿರಂತರತೆಯನ್ನು ಸಂಕೇತಿಸುತ್ತದೆ. ಅದನ್ನು ಗಂಡನ ಮರಣದ ನಂತರ ಮಾತ್ರ ತೆಗೆದುಹಾಕಲಾಗುತ್ತದೆ. ಆದ್ದರಿಂದ, ಅರ್ಜಿದಾರರ ಹೆಂಡತಿ ಮಾಂಗಲ್ಯವನ್ನು ತೆಗೆದುಹಾಕುವ ಮೂಲಕ ಗಂಡನಿಗೆ ಮಾನಸಿಕ ಹಿಂಸೆ ನೀಡಿದ್ದಾರೆ ಎಂದು ಹೇಳಬಹುದು ಎಂದು ನ್ಯಾಯಪೀಠ ಹೇಳಿದೆ.

ಮೇಲ್ಮನವಿದಾರ ಮತ್ತು ಅವರ ಪತ್ನಿ 2011ರಿಂದ ಪ್ರತ್ಯೇಕವಾಗಿ ವಾಸಿಸುತ್ತಿದ್ದು, ಈ ಅವಧಿಯಲ್ಲಿ ಪತ್ನಿ ಪುನರ್ಮಿಲನಕ್ಕೆ ಪ್ರಯತ್ನವನ್ನು ಮಾಡಿದ್ದಾರೆ ಎಂಬುದಕ್ಕೆ ಯಾವುದೇ ದಾಖಲೆಗಳಿಲ್ಲ. ಆದ್ದರಿಂದ ಪ್ರಕರಣದ ಸತ್ಯಗಳು ಮತ್ತು ಸನ್ನಿವೇಶಗಳಲ್ಲಿ ಮತ್ತು ಹೆಂಡತಿಯು ತನ್ನ ಕೃತ್ಯದಿಂದ ಪತಿಗೆ ಮಾನಸಿಕ ಕ್ರೌರ್ಯವನ್ನುಂಟುಮಾಡಿದ್ದಾಳೆಂದು ನಾವು ಗಮನಿಸಿದ್ದೇವೆ ಎಂದು ನ್ಯಾಯಾಲಯ ಹೇಳಿದೆ.

ಇತ್ತೀಚಿನ ಸುದ್ದಿ

ಜಾಹೀರಾತು