10:12 AM Thursday17 - July 2025
ಬ್ರೇಕಿಂಗ್ ನ್ಯೂಸ್
ಎಐಸಿಸಿ ಅಖಿಲ ಭಾರತ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಮೊದಲ ಸಭೆ ಅತ್ಯಂತ… ಭಾರೀ ಮಳೆ: ಕೊಡಗು ಜಿಲ್ಲೆಯ ಎಲ್ಲ ಅಂಗನವಾಡಿ, ಶಾಲೆ ಹಾಗೂ ಪಿಯು ಕಾಲೇಜಿಗೆ… ಕರ್ಣಾಟಕ ಬ್ಯಾಂಕ್ ವಿಲೀನಗೊಳಿಸುವ ಯಾವುದೇ ಪ್ರಸ್ತಾಪ ಇಲ್ಲ: ಬ್ಯಾಂಕಿನ ನೂತನ ವ್ಯವಸ್ಥಾಪಕ ನಿರ್ದೇಶಕ,… ಕರ್ನಾಟಕ ರಾಜ್ಯ ನರ್ಸಿಂಗ್ ಕೌನ್ಸಿಲ್ ಅಭಿವೃದ್ಧಿಪಡಿಸಿದ ವಿಶೇಷ ಡಿಜಿಲಾಕರ್ ಲೋಕಾರ್ಪಣೆ: ಮುಖ್ಯಮಂತ್ರಿ ಸಿದ್ದರಾಮಯ್ಯ… Kodagu | ಬೇಲೂರಿನಲ್ಲಿ ಉಪಟಳ ನೀಡುತ್ತಿದ್ದ ‘ಕರಡಿ’ ಆನೆಗೆ ದುಬಾರೆಯಲ್ಲಿ ‘ಬಬ್ರುವಾಹನ’ ಎಂದು… ಸಿಗಂಧೂರು ಸೇತುವೆ ಉದ್ಘಾಟನೆ ಕಾರ್ಯಕ್ರಮದಲ್ಲಿ ಶಿಷ್ಟಾಚಾರ ಉಲ್ಲಂಘನೆ ಆಗಿಲ್ಲ: ಪ್ರತಿಪಕ್ಷ ನಾಯಕ ಆರ್.ಅಶೋಕ್ Chikkamagaluru | ಮೂಡಿಗೆರೆ: ವಿದ್ಯುತ್ ತಂತಿ ಸ್ವರ್ಶಿಸಿ ಅನ್ನದಾತ ದಾರುಣ ಸಾವು ಕಾರ್ಕಳ ಥೀಮ್ ಪಾರ್ಕ್‌ ಪರಶುರಾಮ ಮೂರ್ತಿ ಹಿತ್ತಾಳೆಯದ್ದೇ ಹೊರತು ಕಂಚಿನಿಂದ ಮಾಡಿದ್ದು ಅಲ್ಲ:… ಕನ್ನಡದ ಮೇರು ನಟಿ ಸರೋಜಾದೇವಿ ನಿಧನ: ಮುಖ್ಯಮಂತ್ರಿ ಸಿದ್ದರಾಮಯ್ಯ, ಮಾಜಿ ಸಿಎಂ ಬೊಮ್ಮಾಯಿ… Kodagu | ವಿರಾಜಪೇಟೆ: ಲೋಕೋಪಯೋಗಿ ಇಲಾಖೆಯ ವಸತಿ ಗೃಹದಲ್ಲಿ ಬೆಂಕಿ ಆಕಸ್ಮಿಕ; ಅಪಾರ…

ಇತ್ತೀಚಿನ ಸುದ್ದಿ

ಕೊಲೆ ಆರೋಪಿಯಿಂದ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ

16/07/2022, 17:43

ಕಲಬುರಗಿ(reporterkarnataka.com): ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಐ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಸುವರ್ಣಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಗಿರೀಶ ಕಂಬಾನೂರ ಅವರನ್ನು ಎರಡು ತಲ್ವಾರ್‌ಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ತಂಡಗಳಲ್ಲಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದರು.

ತಡರಾತ್ರಿ ಆರೋಪಿ ವಿಜಯಕುಮಾರ್ ಹಳ್ಳಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಶಹಾಬಾದ್ ಬಳಿಯ ತೊನಸನಹಳ್ಳಿ ಗ್ರಾಮದ ಬಳಿ ತಲ್ವಾರ್ ಹಾಗೂ ಬಂದೂಕು ಎಸೆದು ಹೋಗಿದ್ದ ಜಾಗದಲ್ಲಿ ಪಂಚನಾಮೆ ನಡೆಸಲು ಆರೋಪಿಗಳನ್ನು ಕರೆದೊಯ್ಯಲಾಗಿತ್ತು.

ಬಂದೂಕು ಎಸೆದಿದ್ದ ಸ್ಥಳವನ್ನು ತೋರಿಸುವ ನಟನೆ ಮಾಡಿದ ವಿಜಯಕುಮಾರ್ ಹಳ್ಳಿ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಸಿಪಿಐ ಪ್ರಕಾಶ್ ಯಾತನೂರ ವಿಜಯಕುಮಾರ್‌ನತ್ತಲೂ ಗುಂಡು ಹಾರಿಸಿದರು. ಎಡಗಾಲಿಗೆ ಗಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು