5:18 PM Friday10 - July 2026
ಬ್ರೇಕಿಂಗ್ ನ್ಯೂಸ್
ಮಂಡ್ಯ: ಕಟ್ಟಡದ ಮೇಲಿಂದ ಬಿದ್ದು ಫೈಂಟ್ ಮಾಡುತ್ತಿದ್ದ ಕಾರ್ಮಿಕ ದಾರುಣ ಸಾವು ಕೊಡಗು ಜೆಡಿಎಸ್‌ಗೆ ಶೀಘ್ರದಲ್ಲೇ ಜಿಲ್ಲಾಧ್ಯಕ್ಷ?: ಕುಮಾರಸ್ವಾಮಿ ಭೇಟಿ ಮಾಡಿದ ತಾಲೂಕು ಅಧ್ಯಕ್ಷರ ನಿಯೋಗ ಉದ್ಯಮಿ ಸಿ.ಜೆ. ರಾಯ್ ಆತ್ಮಹತ್ಯೆ ಪ್ರಕರಣ: ತನಿಖೆಯಲ್ಲಿ ಮಹತ್ವದ ಅಂಶ ಬಹಿರಂಗ; ಶೀಘ್ರದಲ್ಲೇ… ಶೃಂಗೇರಿ | ಗೋರಿಗುಡ್ಡ ಮಸೀದಿ ರಕ್ಷಣೆಗೆ ಕಟ್ಟಿದ್ದ ಕಾಂಕ್ರೀಟ್ ವಾಲ್ ನಲ್ಲಿ ಬಿರುಕು:… ಮಡಿಕೇರಿಯಲ್ಲಿ ಭಾರಿ ಮಳೆಗೆ ಭೂಕುಸಿತ: ಕೆಎಸ್‌ಆರ್‌ಟಿಸಿ ಬಸ್‌ ನಿಲ್ದಾಣದ ಏರು ರಸ್ತೆ ಹಾನಿ;… Kodagu | ಮಡಿಕೇರಿ ರಾಜಾಸೀಟ್ ನಾಳೆಯಿಂದ ಜುಲೈ 12ರವರೆಗೆ ಕ್ಲೋಸ್: ಜಿಲ್ಲಾಧಿಕಾರಿ ಆದೇಶ ನಾಗರಹೊಳೆ ಉದ್ಯಾನದ ಬೀಟ್‌ಗಾರ್ಡ್ ಮನೆಯಲ್ಲಿ ಅಕ್ರಮ ಜಿಂಕೆ ಪತ್ತೆ: ಬಂಧನ; ಬಂದೂಕು ವಶ ಮೂಗ್ರಹಳ್ಳಿ ಸೇತುವೆ ಕಾಮಗಾರಿಯಲ್ಲಿ ಸುರಕ್ಷತೆ ನಿರ್ಲಕ್ಷ್ಯ ಆರೋಪ; ಕಾಮಗಾರಿ ತಾತ್ಕಾಲಿಕ ಸ್ಥಗಿತಕ್ಕೆ ಗ್ರಾಮಸ್ಥರ… ಮರದ ದಿಮ್ಮಿ ಸಾಗಾಟ | ದಸರಾ ಅಂಬಾರಿ ಆನೆ ಕ್ಯಾಪ್ಟನ್ ಅಭಿಮನ್ಯು ದಂತ… ಬೇಲೂರು | SIR ಕರ್ತವ್ಯದ ಒತ್ತಡಕ್ಕೆ ಕುಸಿದು ಬಿದ್ದ ನಿವೃತ್ತಿಯಂಚಿನಲ್ಲಿರುವ 60ರ ಹರೆಯದ…

ಇತ್ತೀಚಿನ ಸುದ್ದಿ

ಕೊಲೆ ಆರೋಪಿಯಿಂದ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ: ಪೊಲೀಸರಿಂದ ಗುಂಡು ಹಾರಾಟ

16/07/2022, 17:43

ಕಲಬುರಗಿ(reporterkarnataka.com): ಶಹಾಬಾದ್ ನಗರಸಭೆ ಮಾಜಿ ಅಧ್ಯಕ್ಷ ಗಿರೀಶ್ ಕಂಬಾನೂರ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿದ್ದ ಆರೋಪಿಯೊಬ್ಬ ಪಿಎಸ್ಐ ಮೇಲೆ ಗಂಭೀರ ಹಲ್ಲೆ ನಡೆಸಿದ ಆಘಾತಕ್ಕಾರಿ ಘಟನೆ ನಡೆದಿದೆ.

ವಿಜಯಕುಮಾರ್ ಹಳ್ಳಿ ಎಂಬಾತನನ್ನು ಪಂಚನಾಮೆಗೆ ಕರೆದೊಯ್ದ ಸಂದರ್ಭದಲ್ಲಿ ಶಹಾಬಾದ್ ಪಿಎಸ್‌ಐ ಸುವರ್ಣಾ ಅವರ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದಾನೆ. ಸುವರ್ಣಾ ಗಂಭೀರವಾಗಿ ಗಾಯಗೊಂಡಿದ್ದಾರೆ. ಪ್ರತಿಯಾಗಿ ಪೊಲೀಸರು ವಿಜಯಕುಮಾರನತ್ತ ಗುಂಡು ಹಾರಿಸಿದ್ದು, ಆತನಿಗೂ ಗಾಯಗಳಾಗಿವೆ. ಇಬ್ಬರನ್ನೂ ಕಲಬುರಗಿಯ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇತ್ತೀಚೆಗೆ ಗಿರೀಶ ಕಂಬಾನೂರ ಅವರನ್ನು ಎರಡು ತಲ್ವಾರ್‌ಗಳಿಂದ ಹಲ್ಲೆ ಮಾಡಿ ಕೊಲೆ ಮಾಡಲಾಗಿತ್ತು. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಎರಡು ತಂಡಗಳಲ್ಲಿ ಆರೋಪಿಗಳ ಪತ್ತೆಗಾಗಿ ಜಾಲ ಬೀಸಿದ್ದರು.

ತಡರಾತ್ರಿ ಆರೋಪಿ ವಿಜಯಕುಮಾರ್ ಹಳ್ಳಿ ಹಾಗೂ ಇತರರನ್ನು ಬಂಧಿಸಲಾಗಿತ್ತು. ಶಹಾಬಾದ್ ಬಳಿಯ ತೊನಸನಹಳ್ಳಿ ಗ್ರಾಮದ ಬಳಿ ತಲ್ವಾರ್ ಹಾಗೂ ಬಂದೂಕು ಎಸೆದು ಹೋಗಿದ್ದ ಜಾಗದಲ್ಲಿ ಪಂಚನಾಮೆ ನಡೆಸಲು ಆರೋಪಿಗಳನ್ನು ಕರೆದೊಯ್ಯಲಾಗಿತ್ತು.

ಬಂದೂಕು ಎಸೆದಿದ್ದ ಸ್ಥಳವನ್ನು ತೋರಿಸುವ ನಟನೆ ಮಾಡಿದ ವಿಜಯಕುಮಾರ್ ಹಳ್ಳಿ ಪಿಎಸ್‌ಐ ಮೇಲೆ ಮಚ್ಚಿನಿಂದ ಹಲ್ಲೆ ಮಾಡಿದ್ದಾನೆ. ತಕ್ಷಣ ಎಚ್ಚೆತ್ತ ಸಿಪಿಐ ಪ್ರಕಾಶ್ ಯಾತನೂರ ವಿಜಯಕುಮಾರ್‌ನತ್ತಲೂ ಗುಂಡು ಹಾರಿಸಿದರು. ಎಡಗಾಲಿಗೆ ಗಾಯವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು