8:02 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ದಲಿತರ ಶೌಚಾಲಯ, ಸ್ನಾನಗೃಹ ಕಟ್ಟಡ ಸ್ಥಳ ಬದಲಾವಣೆಗೆ ಸಚಿವ ಅಂಗಾರ ಕಾರಣ: ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪ

16/07/2022, 17:52

ಸುಳ್ಯ(reporterkarnataka.com): ಇಲ್ಲಿನ ಉಬರಡ್ಕ ಮಿತ್ತೂರು ಗ್ರಾಮದ ಕೊಡಿಯಾಲಬೈಲು ದಲಿತ ಕಾಲೋನಿಗೆ ಸ್ವಚ್ಛ ಭಾರತ್ ಮಿಷನ್ ಯೋಜನೆ ಅಡಿಯಲ್ಲಿ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡ ನಿರ್ಮಿಸಲು 30 ಲಕ್ಷ ಅನುದಾನ ಬಂದಿದ್ದು, ಬಂದಿರುವಂತ ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕಾಲೋನಿ ಬಿಟ್ಟು ಸುಮಾರು ದೂರವಿರುವಂತ ಹಿಂದೂ ರುದ್ರಭೂಮಿಯೊಳಗಡೆ ಕಟ್ಟಡ ನಿರ್ಮಾಣ ಮಾಡಿ ಗೇಟಿಗೆ ಬೀಗ ಹಾಕಿರುತ್ತಾರೆ.

ಈ ಘಟನೆಗೆ ಸುಳ್ಯ ಶಾಸಕ ಹಾಗೂ ಸಚಿವ ಅಂಗಾರ ರವರು ಕಾರಣರಾಗಿದ್ದಾರೆ ಎಂದು ಅಂಬೇಡ್ಕರ್ ರಕ್ಷಣಾ ವೇದಿಕೆ ಆರೋಪಿಸಿದೆ.

ಶೀಘ್ರದಲ್ಲಿ ಅದೇ 30 ಲಕ್ಷ ರೂಪಾಯಿ ಅನುದಾನದ ನೂತನ ಶೌಚಾಲಯ ಮತ್ತು ಸ್ನಾನ ಗೃಹ ಕಟ್ಟಡವನ್ನು ಕುಡಿಯಾಲ ಬೈಲು ದಲಿತ ಕಾಲೋನಿಯಲ್ಲಿ ನಿರ್ಮಿಸಿಕೊಡಬೇಕು, ಇಲ್ಲದಿದ್ದಲ್ಲಿ ಬಿಜೆಪಿ ಕಚೇರಿಯ ಮುಂಬಾಗ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು  ವೇದಿಕೆಯ ಜಿಲ್ಲಾಧ್ಯಕ್ಷ ಸುಂದರ ಪಾಟಾಜೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶೌಚಾಲಯ ಮತ್ತು ಸ್ನಾನ ಘಟಕದ ಸಂಕೀರ್ಣ ಕಟ್ಟಡವನ್ನು ಕೊಡಿಯಾಳಬೈಲು ದಲಿತ ಕಾಲೋನಿಯಲ್ಲಿ ನಿರ್ಮಿಸಬೇಕೆಂದು ಅಂಬೇಡ್ಕರ್ ರಕ್ಷಣಾ ವೇದಿಕೆಯ ವತಿಯಿಂದ ಕಳೆದ ಒಂದು ತಿಂಗಳ ಮೊದಲು ಸುಳ್ಯ ತಾಲೂಕು ಪಂಚಾಯತ್ ಮುಂಬಾಗದಲ್ಲಿ ಪ್ರತಿಭಟನೆ ಮಾಡಲಾಗಿತ್ತು. ಈ ವೇಳೆ ಸುಳ್ಯ ತಾಲೂಕು ಪಂಚಾಯಿತ್ ಕಾರ್ಯ ನಿರ್ವಹಣಾಧಿಕಾರಿ ಅವರು ಬಂದು ಜಿಲ್ಲಾ ಪಂಚಾಯಿತಿಗೆ ರಿಪೋರ್ಟ್ ಮಾಡಿದ್ದೇನೆ. ಅದು ಬಂದ ನಂತರ ನಿಮಗೆ ತಿಳಿಸುತ್ತೇನೆ. ಅದರ ನಂತರ ವಿಚಾರಣೆ ಮಾಡೋಣ ಈಗ ಈ ಪ್ರತಿಭಟನೆ ಕೈಬಿಡಿ ಎಂದು ಹೇಳಿದಾಗ ಪ್ರತಿಭಟನೆಯನ್ನು ತಕ್ಕಮಟ್ಟಿಗೆ ಕೈ ಬಿಡಲಾಗಿತ್ತು ಎಂದು ಅವರು ತಿಳಿಸಿದ್ದಾರೆ.

ಇತ್ತೀಚಿನ ಸುದ್ದಿ

ಜಾಹೀರಾತು