8:01 AM Wednesday26 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕಾರಿನ ಜತೆ ಸಜೀವ ಸುಟ್ಟು ಕೊಲೆಗೈದ ಪ್ರಕರಣ: ಇಬ್ಬರು ಆರೋಪಿಗಳಿಗೆ 5 ದಿನ ಪೊಲೀಸ್ ಕಸ್ಟಡಿ

16/07/2022, 21:46

ಕಾರ್ಕಳ(reporterkarnataka.com):
ಕಾರ್ಕಳದ ಆನಂದ ದೇವಾಡಿಗ ಎಂಬವರನ್ನು ಕಾರು ಸಮೇತ ಸಜೀವವಾಗಿ ಸುಟ್ಟು ಕೊಲೆಗೈದ ಅಮಾನುಷ ಪ್ರಕರಣದಲ್ಲಿ 3ನೇ ಆರೋಪಿ ಸತೀಶ್ ದೇವಾಡಿಗ ಹಾಗೂ 4ನೇ ಆರೋಪಿ ನಿತಿನ್ ದೇವಾಡಿಗನಿಗೆ ಕುಂದಾಪುರ ನ್ಯಾಯಾಲಯ 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ಒಪ್ಪಿಸಿದೆ.


ಬೈಂದೂರು ಪೊಲೀಸರು ಜುಲೈ15ರಂದು ಇಬ್ಬರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಹೆಚ್ಚಿನ ವಿಚಾರಣೆಗಾಗಿ ಪೊಲೀಸ್ ಕಸ್ಟಡಿ ನೀಡುವಂತೆ ಕೋರಿದ್ದರು. ಅದರಂತೆ ನ್ಯಾಯಾಲಯವು ಇಬ್ಬರು ಆರೋಪಿಗಳನ್ನು 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿ ಆದೇಶಿಸಿದೆ.

ಪ್ರಕರಣದ ಪ್ರಮುಖ ಆರೋಪಿ ಸದಾನಂದ ಶೇರಿಗಾರ್ ಹಾಗೂ 2ನೇ ಆರೋಪಿ ಶಿಲ್ಪಾ ಈಗಾಗಲೇ ಪೊಲೀಸರ ಕಸ್ಟಡಿಯಲ್ಲಿದ್ದು, ವಿವಿಧ ಆಯಾಮಗಳಲ್ಲಿ ಇಡೀ ಪ್ರಕರಣದ ತನಿಖೆ ನಡೆಯುತ್ತಿದೆ. ಶನಿವಾರ ಸ್ಥಳ ಬೈಂದೂರಿನಿಂದ ಕಾರ್ಕಳಕ್ಕೆ ಆಗಮಿಸಿದ ಪೋಲೀಸ್ ತನಿಖಾ ತಂಡ ಕಾರ್ಕಳ ನಗರ ಸಭೆ ವ್ಯಾಪ್ತಿ ಯ ಕುಂಟಲ್ಪಾಡಿ ಗ್ಯಾರೇಜ್  ಹಾಗೂ ಹಿರ್ಗಾನ ಶಿವನಗರ ದ ಶಿಲ್ಪಾ ಪೂಜಾರಿ ಮನೆ, ಎಣ್ಣೆಹೊಳೆ ನದಿಯ ಪಕ್ಕದಲ್ಲಿ ಸ್ಥಳ ಬಟ್ಟೆ ಬಿಸಾಡಿದ ಸ್ಥಳವನ್ನು ಮಹಜರು ಮಾಡಲಾಯಿತು ಎಂದು ತಿಳಿದು ಬಂದಿದೆ.

ಇತ್ತೀಚಿನ ಸುದ್ದಿ

ಜಾಹೀರಾತು