6:39 AM Saturday14 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಕುದ್ರೋಳಿ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಂಪನ್ನ; ಮಂಗಳೂರು ರೈಲ್ವೆ ನಿಲ್ದಾಣಕ್ಕೆ ನಾರಾಯಣ ಗುರು ನಾಮಕರಣಕ್ಕೆ ಹಕ್ಕೊತ್ತಾಯ 

17/07/2022, 21:13

ಮಂಗಳೂರು(reporterkarnataka.com):  ಬ್ರಹ್ಮಶ್ರೀ ನಾರಾಯಣ ಗುರು ಕುರಿತು ಪಠ್ಯದಲ್ಲಿ ಮರು ಸೇರ್ಪಡೆ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ಭಾನುವಾರ ವಿಶೇಷ ಗುರುಪೂಜೆ ಸಲ್ಲಿಸಲಾಯಿತು.

ನಾರಾಯಣಗುರುಗಳ ಅನುಯಾಯಿಗಳು ಮಾಡಿದ ಶಾಂತಿಯುತ ಹೋರಾಟಕ್ಕೆ ಮಣಿದ ಸರ್ಕಾರ ಪಠ್ಯ ಪುನರ್ ಸೇರ್ಪಡೆ ಮಾಡಲು ಆದೇಶಿಸಿದ ಹಿನ್ನೆಲೆ ಹಾಗೂ ಸಮಾಜದ ಪ್ರಮುಖ ಬೇಡಿಕೆಗಳಾದ ಬ್ರಹ್ಮಶ್ರೀ ನಾರಾಯಣಗುರು ನಿಗಮ (ಬಿಲ್ಲವ ನಿಗಮ) ಸ್ಥಾಪನೆ ಹಾಗೂ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯರ ಹೆಸರು ಇಡಬೇಕೆಂದು ಒತ್ತಾಯಿಸಿ ಹಾಗೂ ಸಮಾಜದ ಏಳಿಗೆಗಾಗಿ ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಲ್ಲಿ ವಿಶೇಷ ಗುರುಪೂಜೆ ಸಲ್ಲಿಸಲಾಯಿತು.

ವಿಶೇಷವಾಗಿ ನಾರಾಯಣ ಗುರುಗಳ ಹೆಸರನ್ನು ಮಂಗಳೂರು ರೈಲ್ವೆ ನಿಲ್ದಾಣಕ್ಕೆ ಇಡುವಂತಗಲಿ
ಎಂದು ಅನುಯಾಯಿಗಳು ಒಕ್ಕೊರಲಿನಿಂದ ಪ್ರಾರ್ಥನೆ ಸಲ್ಲಿಸಿದರು.

ಜಾನಪದ ವಿದ್ವಾಂಸ ಬನ್ನಂಜೆ ಬಾಬು ಅಮೀನ್, ಬ್ರಹ್ಮಶ್ರೀ ನಾರಾಯಣಗುರು ವಿಚಾರ ವೇದಿಕೆ ರಾಜ್ಯಾಧ್ಯಕ್ಷ ಸತ್ಯಜಿತ್ ಸುರತ್ಕಲ್, ಕುದ್ರೋಳಿ ಕ್ಷೇತ್ರದ ಅಭಿವೃದ್ಧಿ ಸಮಿತಿ ಅಧ್ಯಕ್ಷ ದೇವೇಂದ್ರ ಪೂಜಾರಿ, ಕ್ಷೇತ್ರಾಡಳಿತ ಸಮಿತಿ ಕೋಶಾಧಿಕಾರಿ ಪದ್ಮರಾಜ್ ಆರ್., ಬೆಳ್ತಂಗಡಿ ಬಿಲ್ಲವ ಸಂಘದ ಅಧ್ಯಕ್ಷ ಚಿದಾನಂದ ಎಲ್ದಕ್ಕ, ಕೊಲ್ಯ ಬಿಲ್ಲವ ಸಮಾಜ ಸೇವಾ ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲ ಕೊಲ್ಯ, ಅಖಿಲ ಭಾರತ ಬಿಲ್ಲವ ಮಹಾಮಂಡಲ ಉಪಾಧ್ಯಕ್ಷ ಸೂರ್ಯಕಾಂತ್ ಜೆ. ಸುವರ್ಣ, ಪ್ರಮುಖರಾದ ಪದ್ಮನಾಭ ಮಾಣಿಂಜ, ಶೈಲೇಂದ್ರ ಸುವರ್ಣ, ಈಶ್ವರ್ ತಣ್ಣೀರ್‌ತೋಟ, ರಘುನಾಥ ಮಾಬಿಯಾನ್, ಜಗದೀಶ್ ಕೊಯ್ಲ, ಪುರುಷೋತ್ತಮ ಕುಪ್ಪೆಪದವು, ಗೆಜ್ಜೆಗಿರಿ ನಂದನ ಬಿತ್ತ್‌ಲ್ ಕ್ಷೇತ್ರದ ಅಧ್ಯಕ್ಷ ಪೀತಾಂಬರ ಹೆರಾಜೆ, ಗೌರವಾಧ್ಯಕ್ಷ ಜಯಂತ ನಡುಬೈಲ್, ಉಪಾಧ್ಯಕ್ಷ ರವಿಪೂಜಾರಿ ಚಿಲಿಂಬಿ, ವಕ್ತಾರ ರಾಜೇಂದ್ರ ಚಿಲಿಂಬಿ, ಗೆಜ್ಜೆಗಿರಿ ಮೇಳದ ಸಂಚಾಲಕ ನವೀನ್ ಸುವರ್ಣ,  ಯುವವಾಹಿನಿ ಮಹಿಳಾ ಘಟಕ ಅಧ್ಯಕ್ಷೆ ಸುನೀತಾ, ರೇಖಾ, ಯುವವಾಹಿನಿ ಕೇಂದ್ರ ಸಮಿತಿ ಉಪಾಧ್ಯಕ್ಷ ಹರೀಶ್ ಕೆ.ಪೂಜಾರಿ, ವಿಷ್ಣುದಾಸ್‌, ಸುನೀಲ್‌, ರೋಹಿದಾಸ್‌, ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ನಾರಾಯಣ ಗುರುಗಳ ಅನುಯಾಯಿಗಳು ಮೊದಲಾದವರು ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು