12:14 AM Wednesday1 - April 2026
ಬ್ರೇಕಿಂಗ್ ನ್ಯೂಸ್
ದಾವಣಗೆರೆ ಉಪ ಚುನಾವಣೆ: ಕೆಂಡ ತುಳಿದು ಭಕ್ತಿ ಸಮರ್ಪಿಸಿದ ಕಾಂಗ್ರೆಸ್ ಅಭ್ಯರ್ಥಿ ಸಮರ್ಥ್‌ ಸಿದ್ದಗಂಗಾ ಮಠಕ್ಕೆ ಬಂದಿದ್ದು ನನ್ನ ಜೀವನದ ಸೌಭಾಗ್ಯ: ರಾಷ್ಟ್ರಪತಿ ದ್ರೌಪದಿ ಮುರ್ಮು ದಾವಣಗೆರೆ, ಬಾಗಲಕೋಟೆಯಲ್ಲಿ ಸಚಿವ ಜಮೀರ್ ಪ್ರಚಾರ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ತಮಿಳುನಾಡಿನಿಂದ ರೈಲಿನಲ್ಲಿ ಬಂದು ಕೆಂಜಾರು ದೇಗುಲದ ಹುಂಡಿ ಕಳ್ಳತನ: ಅಂತಾರಾಜ್ಯ ಕಳ್ಳನ ಬಂಧನ ಯಡಿಯೂರಪ್ಪ, ಬೊಮ್ಮಾಯಿ ಸರ್ಕಾರ ಬರೀ ಲೂಟಿ ಮಾಡಿದ್ದು ಬಿಟ್ಟರೆ ಅಭಿವೃದ್ಧಿ ಮಾಡಲಿಲ್ಲ: ಸಿಎಂ… ಸಿದ್ದರಾಮಯ್ಯ ಕಳ್ಳಮತಗಳಿಂದ ನನ್ನ ವಿರುದ್ಧ ಬಾದಾಮಿಯಲ್ಲಿ ಗೆದ್ದರು: ಶ್ರೀರಾಮುಲು ಆರೋಪ ಯತ್ನಾಳ್‌ ಬಂದರೆ ಸ್ವಾಗತ: ರಾಜ್ಯ ಬಿಜೆಪಿಯಲ್ಲಿ ಕುತೂಹಲ ಮೂಡಿಸಿದ ಮಾಜಿ ಸಿಎಂ ಯಡಿಯೂರಪ್ಪ… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ… ಬಾಗಲಕೋಟೆ ಉಪ ಚುನಾವಣೆ: ಆಲಮಟ್ಟಿ ಬಳಿ ರಾತೋರಾತ್ರಿ ಸಿಎಂ ಭೇಟಿಯಾದ ಮುಸ್ಲಿಂ​ ಮುಖಂಡರು;… ಉಪ ಚುನಾವಣೆ | ಸಿಎಂ ಸಭೆಯಲ್ಲಿ ಭಾಗಿಯಾಗಿದ್ದ ಸರಕಾರಿ ಶಿಕ್ಷಕ ಕಬ್ಬಿನ ಗದ್ದೆಯೊಳಗೆ…

ಇತ್ತೀಚಿನ ಸುದ್ದಿ

ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಾರು ಪಲ್ಟಿ: ಕಾರಿನಡಿ ಸಿಲುಕಿದ್ದ ಚಾಲಕ ಪ್ರಾಣ ರಕ್ಷಿಸಿದ ದಾರಿಹೋಕರು

18/07/2022, 09:26

ಬೈಂದೂರು(reporterkarnataka.com): ಇಲ್ಲಿಗೆ ಸಮೀಪದ ಒತ್ತಿನೆಣೆ ಬಳಿ ಕಾರೊಂದು ಸೋಮವಾರ ಪಲ್ಟಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ತಕ್ಷಣ ರಸ್ತೆ ಸಂಚರಿಸುತ್ತಿದ್ದ ಇತರೆ ವಾಹನದ ಪ್ರಯಾಣಿಕರ ಸಹಕಾರದಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.

ಶಿರೂರಿನಿಂದ ಕುಂದಾಪುರ ಕಡೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಭಟ್ಕಳ ಕಡೆ ಸಾಗುವ ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ಚಾಲಕ ಕಾರಿನಡಿ ಸಿಲುಕಿದ್ದು, ತಕ್ಷಣವೇ ಇತರ ವಾಹನ ಹಾಗೂ ಬಸ್ ನಲ್ಲಿದ್ದವರು ವಾಹನ ನಿಲ್ಲಿಸಿ ಕಾರನ್ನು ಸರಿಸಿ ಚಾಲಕನ ಪ್ರಾಣ ಉಳಿಸಿದ್ದಾರೆ. ಆತನನ್ನು ಬೈಂದೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಭಾಗದಲ್ಲಿ ನಿರಂತರ ವಾಹನ ಅಪಘಾತ ನಡೆಯುತ್ತಿದ್ದು, ಇದುವರಗೂ ಅಪಘಾತ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳದಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು