6:28 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಬೈಂದೂರು ಒತ್ತಿನೆಣೆ ತಿರುವಿನಲ್ಲಿ ಕಾರು ಪಲ್ಟಿ: ಕಾರಿನಡಿ ಸಿಲುಕಿದ್ದ ಚಾಲಕ ಪ್ರಾಣ ರಕ್ಷಿಸಿದ ದಾರಿಹೋಕರು

18/07/2022, 09:26

ಬೈಂದೂರು(reporterkarnataka.com): ಇಲ್ಲಿಗೆ ಸಮೀಪದ ಒತ್ತಿನೆಣೆ ಬಳಿ ಕಾರೊಂದು ಸೋಮವಾರ ಪಲ್ಟಿಯಾಗಿ ಪಕ್ಕದ ರಸ್ತೆಗೆ ಉರುಳಿ ಬಿದ್ದಿದ್ದು, ಕಾರು ಚಾಲಕ ಪುಟ್ಟ ಗಾಯಗಳೊಂದಿಗೆ ಪ್ರಾಣಾಪಾಯದಿಂದ ಪಾರಾಗಿದ್ದಾನೆ. 

ತಕ್ಷಣ ರಸ್ತೆ ಸಂಚರಿಸುತ್ತಿದ್ದ ಇತರೆ ವಾಹನದ ಪ್ರಯಾಣಿಕರ ಸಹಕಾರದಿಂದ ಬಾರಿ ಅನಾಹುತ ತಪ್ಪಿದಂತಾಗಿದೆ.

ಶಿರೂರಿನಿಂದ ಕುಂದಾಪುರ ಕಡೆ ಪ್ರಯಾಣಿಸುತ್ತಿದ್ದ ಕಾರು ನಿಯಂತ್ರಣ ತಪ್ಪಿ ಭಟ್ಕಳ ಕಡೆ ಸಾಗುವ ರಸ್ತೆಗೆ ಉರುಳಿ ಬಿದ್ದಿದೆ. ಇದರ ಪರಿಣಾಮ ಚಾಲಕ ಕಾರಿನಡಿ ಸಿಲುಕಿದ್ದು, ತಕ್ಷಣವೇ ಇತರ ವಾಹನ ಹಾಗೂ ಬಸ್ ನಲ್ಲಿದ್ದವರು ವಾಹನ ನಿಲ್ಲಿಸಿ ಕಾರನ್ನು ಸರಿಸಿ ಚಾಲಕನ ಪ್ರಾಣ ಉಳಿಸಿದ್ದಾರೆ. ಆತನನ್ನು ಬೈಂದೂರಿನ ಆಸ್ಪತ್ರೆಗೆ ಸಾಗಿಸಲಾಗಿದೆ.

ಈ ಭಾಗದಲ್ಲಿ ನಿರಂತರ ವಾಹನ ಅಪಘಾತ ನಡೆಯುತ್ತಿದ್ದು, ಇದುವರಗೂ ಅಪಘಾತ ನಿಯಂತ್ರಣಕ್ಕೆ ಶಾಶ್ವತ ಕ್ರಮ ಕೈಗೊಳ್ಳದಿರುವುದು ಜನರ ಅಕ್ರೋಶಕ್ಕೆ ಕಾರಣವಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು