9:31 PM Monday15 - December 2025
ಬ್ರೇಕಿಂಗ್ ನ್ಯೂಸ್
ಓಟ್ ಚೋರಿ ಸುಳ್ಳನ್ನು ಸತ್ಯ ಮಾಡಲು ಕಾಂಗ್ರೆಸ್ ಯತ್ನ: ಬಸವರಾಜ ಬೊಮ್ಮಾಯಿ ಆರೋಪ ಸರಪಾಡಿ: ಅಕ್ರಮ ಗೋಸಾಗಾಟ ಪ್ರಕರಣ; ಆರೋಪಿಯ ಮನೆ, ಕೊಟ್ಟಿಗೆ ಜಫ್ತಿ ತಪ್ಪು ಕಲ್ಪನೆಯಿಂದ ಬೆಡ್ತಿ ವರದಾ ನದಿ ಜೋಡಣೆಗೆ ವಿರೋಧ ಬೇಡ: ಮಾಜಿ ಸಿಎಂ… ಸಂವಿಧಾನ ಪ್ರತಿ ಹಿಡಿದು ಈಗದನ್ನೇ ಗಾಳಿಗೆ ತೂರುತ್ತಿದ್ದಾರೆ; ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ… ಮಹಿಳೆಯರು ಅನ್ಯಾಯದ ವಿರುದ್ದ ಕಿತ್ತೂರು ಚೆನ್ನಮ್ಮ, ದುರ್ಗಾದೇವಿ ಆಗಬೇಕು: ಮಾಜಿ ಸಿಎಂ ಬಸವರಾಜ… ಮಡಿಕೇರಿ ಆಂಟಿ ಹನಿಟ್ರ್ಯಾಪ್ ಗೆ ಸಿಕ್ಕಿಬಿದ್ದ ಮಂಡ್ಯದ ಯುವಕ: ರಾತ್ರಿಯಿಡೀ ಗೂಸಾ; ಹಣ್ಣಕ್ಕೆ… ಮಡಿಕೇರಿಯಲ್ಲಿ ಆಂಧ್ರದ ನಕಲಿ ಪೊಲೀಸರ ಓಡಾಟ: ಪ್ರಕರಣ ದಾಖಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ವಿಧಾನ ಸಭೆಯಲ್ಲಿ ಸಚಿವ ಬಿ.ಎಸ್.ಸುರೇಶ್ ದ್ವೇಷ ಭಾಷಣಕ್ಕೆ 10 ವರ್ಷ ಜೈಲು ಶಾಸನ ಕಾಂಗ್ರೆಸ್ ನ ಕ್ರೂರ ಸಂಪ್ರದಾಯದ… ಚಿಕ್ಕಮಗಳೂರಿನಲ್ಲಿ ಪಿಪಿಪಿ ಮಾದರಿಯಲ್ಲಿ ಸ್ಪೈಸ್ ಪಾರ್ಕ್ ಅಭಿವೃದ್ಧಿ: ವಿಧಾನ ಪರಿಷತ್ ನಲ್ಲಿ ಸರಕಾರ…

ಇತ್ತೀಚಿನ ಸುದ್ದಿ

ಇಂಟರ್ನೆಟ್ ಪಾಸ್ವರ್ಡ್ ರಿಸೆಟ್: ಕಾರ್ಕಳದ ವ್ಯಕ್ತಿಯ ಲಕ್ಷಾಂತರ ಹಣ ದೋಚಿದ ಖದೀಮರು

18/07/2022, 21:33

ಕಾರ್ಕಳ(reporterkarnataka.com): ಇಂಟರ್ನೆಟ್ ಪಾಸ್ವರ್ಡ್ ರಿಸೆಟ್ ಮಾಡಿ ವ್ಯಕ್ತಿಯೊಬ್ಬರ ಲಕ್ಷಾಂತರ ಹಣ ದೋಚಿದ ಘಟನೆ ಕಾರ್ಕಳ ತಾಲೂಕಿನ ಕುಕ್ಕುಂದೂರು ಗ್ರಾಮದ ಬಂಗ್ಲಾಗುಡ್ಡೆ ಯಲ್ಲಿ ನಡೆದಿದೆ. 

ಕಾರ್ಕಳ ಕುಕ್ಕುಂದೂರು ಬಂಗ್ಲೆಗುಡ್ಡೆ ರುಡಾಲ್ಫ್ ಡಿ’ಸೋಜಾ(44) ಎಂಬವರು ಹಣ ಕಳೆದು ಕೊಂಡವರು.  

ಅವರು 2018-19ನೆ ಸಾಲಿನ ಟಿಬಿಓ ಟಾಕ್‌ ಕಂಪೆನಿಯ ಸ್ಕೈಲೈನ್‌ ಎಂಟರ್‌ಪ್ರೈಸಸ್‌ ಮತ್ತು ಟ್ರಾವೆಲ್ಸ್‌ನಲ್ಲಿ ವಿಮಾನ, ರೈಲು ಟಿಕೆಟ್‌ ಬುಕ್‌ ಮಾಡುವ ಫ್ರಾಂಚೈಸಿ ಪಡೆದು ಸಂಸ್ಥೆಯ ಯೂಸರ್‌ ಐಡಿ ಹೊಂದಿದ್ದರು.

2022ರ ಎಪ್ರಿಲ್ ತಿಂಗಳಿನ ಕೊನೆಯಲ್ಲಿ ಟಿಬಿಓ ಕಂಪೆನಿಯಿಂದ ರುಡಾಲ್ಫ್ ಡಿ’ಸೋಜಾ ಅವರಿಗೆ ಕರೆ ಬಂದಿದ್ದು, ನಿಮ್ಮ ಐಡಿಗೆ 14,76,284 ರೂ. ಹಣ ಪಾವತಿಸಲಾಗಿದೆ. ಅದನ್ನು ಕೂಡಲೇ ಮರುಪಾವತಿ ಮಾಡುವಂತೆ ಸೂಚಿಸಲಾಗಿತ್ತು.ಆದರೆ ರುಡಾಲ್ಫ್ ಅವರು ಕಳೆದ ಎರಡು ವರ್ಷಗಳಿಂದ ಈ ಐಡಿಯನ್ನು ಬಳಸಿರುವುದಿಲ್ಲ. ಇವರ ಸಂಸ್ಥೆಯಲ್ಲಿ ಸೇಲ್ಸ್ ಮನ್‌ ಆಗಿ ಕೆಲಸ ಮಾಡುವ ವ್ಯಕ್ತಿಯು ರುಡಾಲ್ಫ್ ಅವರ ಐಡಿಯನ್ನು ಕದ್ದು, ಇನ್ನೋರ್ವನ ಮೂಲಕ ಕಂಪೆನಿಯ ಐಡಿ ಪಾಸ್‌ವರ್ಡ್‌ ರೀಸೆಟ್‌ ಮಾಡಿಸಿದ್ದ.

ರುಡಾಲ್ಫ್ ಅವರಿಂದಲೇ ಐಡಿ ಯನ್ನು ಬಳಸುತ್ತಿರುವಂತೆ ಬಿಂಬಿಸಿ, ಕಂಪೆನಿಯಿಂದ ಬಂದಿರುವ ಹಣವನ್ನು ಟಿಕೆಟ್ ಬುಕ್ಕಿಂಗ್‌ ಖರ್ಚು ಮಾಡಿ, ಹಣ ಮರುಪಾವತಿಸದೇ ಕಂಪೆನಿಗೆ ಹಾಗೂ ರುಡಾಲ್ಫ್ ಡಿ’ಸೋಜಾ ಅವರಿಗೆ ನಷ್ಟ ಉಂಟು ಮಾಡಲಾಗಿದೆ ಎಂದು ಉಡುಪಿಯ ಸೆನ್‌ ಅಪರಾಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು