1:47 PM Saturday23 - May 2026
ಬ್ರೇಕಿಂಗ್ ನ್ಯೂಸ್
ಚಿಕ್ಕಮಗಳೂರು: ಕೈ ಕೈ ಮಿಲಾಯಿಸುವ ಮಟ್ಟಿಗೆ ತಲುಪಿದ ಕಾಂಗ್ರೆಸ್ – ಬಿಜೆಪಿ ಕಾರ್ಯಕರ್ತರ… ಮಂಗಳೂರು ವಿಮಾನ ದುರಂತ | ಕಾಕ್‌ಪಿಟ್‌ನಲ್ಲಿ ಹಾರಾಟದ ವೇಳೆ 1 ಗಂಟೆ 40… ಭಾರತೀಯರ ರಕ್ತಕ್ಕೆ ಪಾಕ್​ನಲ್ಲಿ ಪ್ರತೀಕಾರ: ಪುಲ್ವಾಮಾ ದಾಳಿ ಮಾಸ್ಟರ್‌ ಮೈಂಡ್ ಹಮ್ಜಾ ಬುರ್ಹಾನ್… ದ್ವಿತೀಯ ಪಿಯುಸಿ ಪರೀಕ್ಷೆ-2 ಫಲಿತಾಂಶ ಪ್ರಕಟ: 80,535 ವಿದ್ಯಾರ್ಥಿಗಳ ಪೈಕಿ 36,764 ಮಂದಿ… ತಜ್ಞರ ಸಮಿತಿ ವರದಿಯನ್ನು ನಿರ್ಲಕ್ಷಿಸಿದ್ದೇ ದುಬಾರೆ ದುರ್ಘಟನೆ ಕಾರಣ? ನಂಜನಗೂಡು | ಯಡಿಯಾಲ ಸುತ್ತಮುತ್ತ ಹುಲಿ ಹೆಜ್ಜೆ ಪತ್ತೆ: ಗ್ರಾಮಸ್ಥರಲ್ಲಿ ಆತಂಕ ದುಬಾರೆ ಆನೆ ಶಿಬಿರದಲ್ಲಿ ಮಾರ್ಗಸೂಚಿ ಪಾಲಿಸಲು ಸೂಚನೆ: ಕೊಡಗು ಉಸ್ತುವಾರಿ ಸಚಿವ ಬೋಸರಾಜು ಒಂದು ದೇಶ – ಒಂದು ಚುನಾವಣೆ: ವಿವಿಧ ವರ್ಗಗಳ ಅಭಿಪ್ರಾಯ ಆಲಿಸಿದ ಜಂಟಿ… ದುಬಾರೆಯಲ್ಲಿ ಆನೆಗಳ ಸ್ನಾನ ನಾಳೆಯಿಂದ 100 ಅಡಿ ದೂರದಲ್ಲಿ ನಿಂತು ನೋಡಲಷ್ಟೇ ಅವಕಾಶ:… ಕೊಡಗಿನ ತಮ್ಮ ಕಾಫಿ ಎಸ್ಟೇಟ್‌ಗೆ ನುಗ್ಗಿದ ಆನೆಗಳ ಹಿಂಡಿನ ವಿಡಿಯೋ ಹಂಚಿಕೊಂಡ ಉದ್ಯಮಿ…

ಇತ್ತೀಚಿನ ಸುದ್ದಿ

ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು

18/07/2022, 22:00

ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ  ಜು18 ರ ಮಧ್ಯರಾತ್ರಿ ನಡೆದಿದೆ. 

ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ  ಮನೆಯಲ್ಲಿ ಈ ಘಟನೆ ನಡೆದಿದೆ .

ಕೃಷ್ಣಭಟ್  ಅವರು ಜು.18 ರಂದು ತಡರಾತ್ರಿ 1:30 ಗಂಟೆಯ ಸಮಯಕ್ಕೆ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆ ಬಾಗಿಲನ್ನು ತೆರೆದು ಹೊರಗೆ ಬಂದಾಗ ಯಾರೋ 2 ಜನ ಅಪರಿಚಿತರಿದ್ದು, ಓರ್ವ ಇವರ ಮುಖಕ್ಕೆ ಮೆಣಸಿನ ಪುಡಿಯನ್ನು ಎಸೆದು, ಇನ್ನೊಬ್ಬನು ಗಟ್ಟಿಯಾಗಿ ಹಿಡಿದು ಪಂಚೆಯನ್ನು ಹಿಡಿದೆಳೆದು ಅದನ್ನು ಅವರ ಮುಖಕ್ಕೆ ಸುತ್ತಿ ಕೂಗಾಡದಂತೆ ಬಾಯಿ ಹಾಗೂ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಕೂಡಲೇ ಕೃಷ್ಣ ಭಟ್ ರವರು ತಪ್ಪಿಸಿಕೊಂಡು ಜೋರಾಗಿ ಬೊಬ್ಬೆ ಹೊಡೆದಾಗ ಇವರ ಕೈಯಲ್ಲಿದ್ದ ಟಾರ್ಚನ್ನು ತೆಗೆದುಕೊಂಡು ಇಬ್ಬರು ಅಪರಿಚಿತರು ಅಲ್ಲಿಂದ ಓಡಿ ಹೋಗಿದ್ದಾರೆ. ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು