9:11 PM Thursday27 - August 2026
ಬ್ರೇಕಿಂಗ್ ನ್ಯೂಸ್
ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ ಕುಡಿದು ಗಾಡಿ ಚಲಾಯಿಸಿದ ಯುವಕನ ತಡೆಯಲೆತ್ನಿಸಿದ ಪೊಲೀಸ್ ಸಿಬ್ಬಂದಿ: ಖಾಕಿಗೆ ಕುಡುಕನಿಂದ ಅವಾಜ್;… ಕುಕ್ಕೆ ಸುಬ್ರಹ್ಮಣ್ಯ: ಭಕ್ತರ ಗಮನಕ್ಕೆ; ಈ ದಿನಗಳಲ್ಲಿ ಕ್ಷೇತ್ರದಲ್ಲಿ ಸರ್ಪಸಂಸ್ಕಾರ ಪೂಜೆ ಇರೋದಿಲ್ಲ ತುಳುನಾಡಿನ ದೈವಗಳಿಗೆ ನಟ ದರ್ಶನ್ ಪತ್ನಿ ಮೊರೆ: ಪತಿಯ ಸಂಕಷ್ಟದಿಂದ ಪಾರು ಮಾಡಲು… ಭಾರತ್ ಸಿನಿಮಾಸ್ ಗೆ ‘ವರ್ಷದ ಪ್ರಾದೇಶಿಕವಾಗಿ ಉದಯೋನ್ಮುಖ ಸಿನಿಮಾ ಸರಣಿ’ ಪ್ರಶಸ್ತಿ ಡಿ.ಕೆ. ಸುರೇಶ್, ಸಚಿವ ಬಾಲಕೃಷ್ಣ ಅವರದ್ದು ಸೂಟ್‌ಕೇಸ್ ಬೃಂದಾವನ: ಕೇಂದ್ರ ಸಚಿವ ಎಚ್.ಡಿ.… *ದುಬಾರಿ ಹಣ ಕೊಟ್ಟು ಜನ ನೀರಿನ ಬಾಟಲಿ ಖರೀದಿಸುತ್ತಾರೆ, 50 ರೂ. ಕೊಟ್ಟು… ವಾಕಿಂಗ್ ಮಾಡುತ್ತಿದ್ದ ಇಬ್ಬರಿಗೆ ಕಾರು ಡಿಕ್ಕಿ: ಓರ್ವ ದುರ್ಮರಣ; ಇನ್ನೋರ್ವ ಗಂಭೀರ ವಿರಾಜಪೇಟೆ: ಪುತ್ರನ ಬಿಟ್ಟು ನಾಪತ್ತೆಯಾಗಿದ್ದ ವ್ಯಕ್ತಿ ಬಾವಿಯಲ್ಲಿ ಶವವಾಗಿ ಪತ್ತೆ ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ…

ಇತ್ತೀಚಿನ ಸುದ್ದಿ

ಕೆರ್ವಾಶೆ: ಮನೆಗೆ ನುಗ್ಗಿ ವೃದ್ಧನ ಕಣ್ಣಿಗೆ ಮೆಣಸಿನ ಪುಡಿ ಎರಚಿ ಕಳ್ಳತನಕ್ಕೆ ಯತ್ನ; ಟಾರ್ಚ್ ಕಸಿದು ಪರಾರಿಯಾದ ಚೋರರು

18/07/2022, 22:00

ಕಾರ್ಕಳ(reporterkarnataka.com): ಮೆಣಸಿನ ಹುಡಿ ಎರಚಿ ಮನೆಗೆ ನುಗ್ಗಿ ಕಳ್ಳತನ ನಡೆಸಲು ಯತ್ನಿಸಿದ ಘಟನೆ ಕಾರ್ಕಳ ತಾಲೂಕಿನ ಕೆರ್ವಾಶೆಯಲ್ಲಿ  ಜು18 ರ ಮಧ್ಯರಾತ್ರಿ ನಡೆದಿದೆ. 

ಕೆರ್ವಾಶೆ ಕೃಷ್ಣಭಟ್ (71) ಎಂಬುವವರ ದೇವಿಕೃಪಾ  ಮನೆಯಲ್ಲಿ ಈ ಘಟನೆ ನಡೆದಿದೆ .

ಕೃಷ್ಣಭಟ್  ಅವರು ಜು.18 ರಂದು ತಡರಾತ್ರಿ 1:30 ಗಂಟೆಯ ಸಮಯಕ್ಕೆ ಮನೆಯ ಹೊರಗೆ ನಾಯಿ ಬೊಗಳಿದ ಶಬ್ದ ಕೇಳಿ ಮನೆ ಬಾಗಿಲನ್ನು ತೆರೆದು ಹೊರಗೆ ಬಂದಾಗ ಯಾರೋ 2 ಜನ ಅಪರಿಚಿತರಿದ್ದು, ಓರ್ವ ಇವರ ಮುಖಕ್ಕೆ ಮೆಣಸಿನ ಪುಡಿಯನ್ನು ಎಸೆದು, ಇನ್ನೊಬ್ಬನು ಗಟ್ಟಿಯಾಗಿ ಹಿಡಿದು ಪಂಚೆಯನ್ನು ಹಿಡಿದೆಳೆದು ಅದನ್ನು ಅವರ ಮುಖಕ್ಕೆ ಸುತ್ತಿ ಕೂಗಾಡದಂತೆ ಬಾಯಿ ಹಾಗೂ ಕುತ್ತಿಗೆಯನ್ನು ಒತ್ತಿ ಹಿಡಿದಿದ್ದ ಕೂಡಲೇ ಕೃಷ್ಣ ಭಟ್ ರವರು ತಪ್ಪಿಸಿಕೊಂಡು ಜೋರಾಗಿ ಬೊಬ್ಬೆ ಹೊಡೆದಾಗ ಇವರ ಕೈಯಲ್ಲಿದ್ದ ಟಾರ್ಚನ್ನು ತೆಗೆದುಕೊಂಡು ಇಬ್ಬರು ಅಪರಿಚಿತರು ಅಲ್ಲಿಂದ ಓಡಿ ಹೋಗಿದ್ದಾರೆ. ಮನೆಯಲ್ಲಿ ಕಳ್ಳತನ ಮಾಡುವ ಉದ್ದೇಶದಿಂದ ಮನೆಗೆ ಪ್ರವೇಶಿಸಲು ಪ್ರಯತ್ನಿಸಿದ್ದಾರೆಂದು ಅಜೆಕಾರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇತ್ತೀಚಿನ ಸುದ್ದಿ

ಜಾಹೀರಾತು