8:26 AM Saturday20 - September 2025
ಬ್ರೇಕಿಂಗ್ ನ್ಯೂಸ್
Kodagu | ಕುಶಾಲನಗರ: ಕಾವೇರಿ ನದಿಯಲ್ಲಿ ಮುಳುಗಿ ಕಾಡಾನೆ ದಾರುಣ ಸಾವು ಮಡಿಕೇರಿ ನಗರಸಭೆಯ ಮೇಲೆ ಲೋಕಾಯುಕ್ತ ದಿಢೀರ್ ದಾಳಿ: ಸಾರ್ವಜನಿಕರ ದೂರಿಗೆ ಸ್ಪಂದನೆ ಮೈಸೂರು ದಸರಾ ಉದ್ಘಾಟನೆಗೆ ಬಾನು ಮುಸ್ತಾಕ್: ತಡೆ ಕೋರಿ ಸಲ್ಲಿಸಿದ ಅರ್ಜಿ ಸುಪ್ರೀಂಕೋರ್ಟ್… ಪಂಚ ಗ್ಯಾರಂಟಿ ಯೋಜನೆಗಳಿಗೆ 98 ಸಾವಿರ ಕೋಟಿ; ಅಭಿವೃದ್ಧಿಗೆ 8 ಸಾವಿರ ಕೋಟಿ:… New Delhi | ಕಾಂಗ್ರೆಸ್ ಸರಕಾರದ ಪಂಚೇಂದ್ರಿಯಗಳು ನಿಷ್ಕ್ರಿಯವಾಗಿವೆ: ಕೇಂದ್ರ ಸಚಿವ ಕುಮಾರಸ್ವಾಮಿ… Bangaluru | ರೈತ ಮುಖಂಡರ ನಿಯೋಗ ಸಿಎಂ ಸಿದ್ದರಾಮಯ್ಯ ಭೇಟಿ: ರೈತರ ಸಮಸ್ಯೆ… ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.…

ಇತ್ತೀಚಿನ ಸುದ್ದಿ

ಒಂದೇ ಕುಟುಂಬದ ಎಲ್ಲ 5 ಮಂದಿಗೂ ಬೆರಳುಗಳೇ ಶಾಪ!!: ಸಹಜ ಕೆಲಸಕ್ಕೆ ಅಡ್ಡಿ; ಆರ್ಥಿಕ ಸಂಕಷ್ಟ!

19/07/2022, 11:00

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com

ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಪೂಜಾರಹಳ್ಳಿ ತಾಂಡದಲ್ಲಿರುವ ಕುಟುಂಬವೊಂದರ ಎಲ್ಲ ಸದಸ್ಯರು ತಮ್ಮ ಕೈ ಕಾಲುಗಳಲ್ಲಿ ಒಟ್ಟು ತಲಾ 24, 28, 32 ಬೆರಳುಗಳನ್ನು ಹೊಂದಿದ್ದಾರೆ. ಇದು ವಿಚಿತ್ರವಾದರೂ ಸತ್ಯ ಸಂಗತಿಯಾಗಿದೆ. 


ಜಗದೀಶ ನಾಯ್ಕ ಎಂಬ ಕುಟುಂಬದ ಸದಸ್ಯರು ಅವರ ತಾಯಿ ಸೇರಿದಂತೆ ಮನೆಯ ಒಟ್ಟು 5 ಮಂದಿ ಸದಸ್ಯರು ಕೈಯಲ್ಲಿ ಆರು, ಏಳು, ಎಂಟು ಬೆರಳುಗಳನ್ನು ಹೊಂದಿದ್ದಾರೆ. ಅವು ಪರಸ್ಪರ ಹೊಂದಿಕೊಂಡಿದ್ದು ಸಹಜವಾಗಿ ಎಲ್ಲರಂತೆ ಕೆಲ ಕಾರ್ಯಮಾಡಲಾಗುತ್ತಿಲ್ಲ. ಅವರ ದೇಹಕ್ಕೆ ವ್ಯತಿರಿಕ್ತ ಪರಿಣಾಮ ಬೀರಿದ ಕಾರಣ ಅವರನ್ನು ವಿಶಿಷ್ಟ ಚೇತನರೆಂದು ಪರಿಗಣಿಸಲಾಗಿದೆ. ಎಲ್ಲರಂತೆ ಸಹಜವಾಗಿ ದುಡಿಮೆ ಮಾಡಲಾಗದೇ ತೀರಾ ಆರ್ಥಿಕ ಸಂಕಷ್ಟವನ್ನು ಕುಟುಂಬ ಸದಸ್ಯರು ಎದುರಿಸುತ್ತಿದ್ದಾರೆ. ಅವರ ನೆರವಿಗೆ ಜಿಲ್ಲಾಡಳಿತ ಹಾಗೂ ತಾಲೂಕಾಡಳಿತ ಮುಂದಾಗಬೇಕಿದೆ. ಕುಟುಂಬಕ್ಕೆ ಆರ್ಥಿಕ ಸಾಲ ಸೌಲಭ್ಯ ನೀಡಿ, ಅವರು ಸ್ವಾವಲಂಬಿ ಜೀವನ ನಡೆಸಲು ಅಗತ್ಯ ನೆರವನ್ನು ಸರ್ಕಾರ ಮಾಡಬೇಕಿದೆ. 

ಇತ್ತೀಚಿನ ಸುದ್ದಿ

ಜಾಹೀರಾತು