10:20 PM Wednesday14 - May 2025
ಬ್ರೇಕಿಂಗ್ ನ್ಯೂಸ್
Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು ಎಲ್ಲರನ್ನೂ ನಗಿಸುತ್ತಿದ್ದ ಆತ ಇಂದು ಎಲ್ಲರೂ ಅಳುವಂತೆ ಮಾಡಿದ: ನಗು ನಗುತಲೇ ಹೊರಟು… Bangalore | ಕ್ಯಾನ್ಸರ್ ತಡೆಗೆ ಪರಿಣಾಮಕಾರಿ ಕಾರ್ಯಕ್ರಮ ಅವಶ್ಯ: ಮಾಜಿ ಡಿಸಿಎಂ ಡಾ.… ಶ್ರೀನಗರದಲ್ಲಿ ಸಿಲುಕಿದ್ದ ರಾಜ್ಯದ 13 ಕೃಷಿ ವಿದ್ಯಾರ್ಥಿಗಳು ಸುರಕ್ಷಿತ ವಾಪಸ್: ಪ್ರಧಾನಿ ಸೂಚನೆ… Bangalore | ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ಎನ್ಐಎ ತನಿಖೆಗೆ ಹಸ್ತಾಂತರ: ರಾಜ್ಯಪಾಲರ…

ಇತ್ತೀಚಿನ ಸುದ್ದಿ

ಮುಂಬೈ: ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮದಲ್ಲಿ ಪ್ರವೀಣ್ ಕುಮಾರ್  ಕೊಡಿಯಾಲ್ ಬೈಲ್ ಗೆ ಸನ್ಮಾನ

19/07/2022, 18:29

ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ನಡೆದಿದ್ದು,ಸಮಾರಂಭದಲ್ಲಿ ಕರ್ನಾಟಕ ಜನಪದ ಅಕಾಡೆಮಿಯ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಸೇರಿದಂತೆ 9 ಮಂದಿ ಸಾಧಕರನ್ನು ಸನ್ಮಾನಿಸಲಾಯಿತು.

ಮಂಗಳೂರು ವಿವಿ ತುಳು ಅಧ್ಯಯನ ಪೀಠದ ಸದಸ್ಯರೂ, ಮುಂಚೋಣಿಯ ದಾನಿಗಳು ಆದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಸನ್ಮಾನಿಸಿದರು. ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾಗಿರುವ ಪ್ರವೀಣ್ ಕುಮಾರ್ ಅವರು ಅಖಿಲ ಭಾರತ ಓಬಿಸಿ ಮಹಾಸಭಾದ ದ.ಕ. ಜಿಲ್ಲಾಧ್ಯಕ್ಷರೂ ಕೂಡ ಹೌದು. ರಂಗಾಸಕ್ತರು ಆಗಿರುವ ಅವರು ಸಿನಿಮಾ ಕ್ಷೇತ್ರದಲ್ಲಿಯೂ ಅಪಾರ ಒಲವು ಹೊಂದಿದ್ದಾರೆ.


ಈ ಸಂದರ್ಭದಲ್ಲಿ ಮುಂಬಯಿ ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಹೆಸರು, ಕವಯತ್ರಿ, ಲೇಖಕಿ ಡಾ. ಸುನೀತಾ ಶೆಟ್ಟಿ, ವೈದ್ಯಕೀಯ ಕ್ಷೇತ್ರದ ಡಾ. ಸುರೇಶ್ ರಾವ್, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ಪ್ರಗತಿಪರ ಕೃಷಿಕ ಪ್ರಭಾಕರ ಕಲ್ಲೂರಾಯ ಹಾಗೂ ವಾಸ್ತು ತಜ್ಞ ಮಾರ್ತಾಂಡ ಪಂಡಿತ್ ನವೀನ್ ಚಂದ್ರ ಸನಿಲ್ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ರಾಷ್ಟಭಕ್ತಿ, ನಾಡಪ್ರೀತಿ ಮೊಳಗಿತು. ಕನ್ನಡದ ಕಂಪು ಎಲ್ಲೆಡೆ ಹರಡಿತು.

ಇತ್ತೀಚಿನ ಸುದ್ದಿ

ಜಾಹೀರಾತು