12:24 PM Saturday20 - June 2026
ಬ್ರೇಕಿಂಗ್ ನ್ಯೂಸ್
ವಿಧಾನ ಪರಿಷತ್‌ ಚುನಾವಣೆಯಲ್ಲಿ ಅಡ್ಡ ಮತದಾನ: ಬಿ.ವೈ. ವಿಜಯೇಂದ್ರಗೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ… Bangalore | ಕಳ್ಳನ ಹಿಡಿಯಬೇಕಿದ್ದ ಖಾಕಿಯಿಂದಲೇ ಲೂಟಿ!: 20 ಲಕ್ಷ ದೋಚಿದ ಸಿಐಡಿ… ಕುಶಾಲನಗರ | ಹೆತ್ತ ತಾಯಿಯಿಂದಲೇ ಮಗನ ಬಲವಂತದ ಮತಾಂತರ: ಇಬ್ಬರ ಬಂಧನ ಗ್ಯಾರಂಟಿ ಸೌಲಭ್ಯಕ್ಕೆ ಹೊಸದಾಗಿ ಅರ್ಜಿ ಬೇಡ, ಮರು ಪರಿಶೀಲನೆ ಮಾತ್ರ: ಸಿಎಂ ಸಭೆಯಲ್ಲಿ… ವಿಧಾನ ಪರಿಷತ್ ಚುನಾವಣೆ ಫಲಿತಾಂಶ: ಫಲಿಸಿದ ಸಿಎಂ ಡಿಕೆಶಿ ರಣತಂತ್ರ; 5ರಲ್ಲಿ ಕೈ… ಬಾರ್ಬರ್ ಶಾಪ್‌ನಿಂದ ಬಿ-ಸ್ಕೂಲ್‌ವರೆಗೆ: ತಂದೆಯ ಕತ್ತರಿ ಹಿಡಿದ ಬಿಬಿಎ ವಿದ್ಯಾರ್ಥಿನಿ ಬಿಂದುಪ್ರಿಯಾ ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ: ಕರಾವಳಿ ಸಹಿತ ರಾಜ್ಯಾದ್ಯಂತ ಬಿರುಸಿನ ಮಳೆ ನಿರೀಕ್ಷೆ ದುಬಾರೆ ದುರಂತದ ಬಳಿಕ ರಾಜ್ಯದ ಆನೆ ಶಿಬಿರಗಳಲ್ಲಿ ಹೊಸ ನಿಯಮ ಜಾರಿ: ಪ್ರವಾಸಿಗರ… ವಿದ್ಯಾರ್ಥಿನಿ ಜೊತೆ ಅನೈತಿಕ ಸಂಬಂಧ ಆರೋಪ: ಕರ್ನಾಟಕ ವಿವಿ ಪ್ರೊ. ದೇವರಾಜನ್ ತಂಗದುರೈ… ವಿಧಾನ ಪರಿಷತ್ ಚುನಾವಣೆ: ದೇವನಹಳ್ಳಿ ರೆಸಾರ್ಟ್‌ಗೆ ಜೆಡಿಎಸ್ ಶಾಸಕರು ಶಿಫ್ಟ್; ಜನಾರ್ದನ ರೆಡ್ಡಿ…

ಇತ್ತೀಚಿನ ಸುದ್ದಿ

ಮುಂಬೈ: ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮದಲ್ಲಿ ಪ್ರವೀಣ್ ಕುಮಾರ್  ಕೊಡಿಯಾಲ್ ಬೈಲ್ ಗೆ ಸನ್ಮಾನ

19/07/2022, 18:29

ಮುಂಬಯಿ(reporterkarnataka.com): ಕನ್ನಡ ನಾಡು- ನುಡಿ- ಸಂಸ್ಕೃತಿಯನ್ನು ಬಿಂಬಿಸುವ ಹೊರನಾಡ ಕನ್ನಡ ಸಂಸ್ಕೃತಿ ಸಂಭ್ರಮ- 2022 ಕುರ್ಲಾದ ಬಂಟರ ಭವನದಲ್ಲಿ ನಡೆದಿದ್ದು,ಸಮಾರಂಭದಲ್ಲಿ ಕರ್ನಾಟಕ ಜನಪದ ಅಕಾಡೆಮಿಯ ದ.ಕ. ಜಿಲ್ಲಾಧ್ಯಕ್ಷ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಸೇರಿದಂತೆ 9 ಮಂದಿ ಸಾಧಕರನ್ನು ಸನ್ಮಾನಿಸಲಾಯಿತು.

ಮಂಗಳೂರು ವಿವಿ ತುಳು ಅಧ್ಯಯನ ಪೀಠದ ಸದಸ್ಯರೂ, ಮುಂಚೋಣಿಯ ದಾನಿಗಳು ಆದ ಪ್ರವೀಣ್ ಕುಮಾರ್ ಕೊಡಿಯಾಲ್ ಬೈಲ್ ಅವರನ್ನು ಕರ್ನಾಟಕ ವಿಧಾನ ಪರಿಷತ್ ಸಭಾಪತಿ ರಘುನಾಥ ರಾವ್ ಮಲ್ಕಾಪುರೆ ಸನ್ಮಾನಿಸಿದರು. ಪಮ್ಮಿ ಕೊಡಿಯಾಲ್ ಬೈಲ್ ಎಂದೇ ಖ್ಯಾತರಾಗಿರುವ ಪ್ರವೀಣ್ ಕುಮಾರ್ ಅವರು ಅಖಿಲ ಭಾರತ ಓಬಿಸಿ ಮಹಾಸಭಾದ ದ.ಕ. ಜಿಲ್ಲಾಧ್ಯಕ್ಷರೂ ಕೂಡ ಹೌದು. ರಂಗಾಸಕ್ತರು ಆಗಿರುವ ಅವರು ಸಿನಿಮಾ ಕ್ಷೇತ್ರದಲ್ಲಿಯೂ ಅಪಾರ ಒಲವು ಹೊಂದಿದ್ದಾರೆ.


ಈ ಸಂದರ್ಭದಲ್ಲಿ ಮುಂಬಯಿ ಸಾಹಿತ್ಯ ಕ್ಷೇತ್ರದ ಬಹುದೊಡ್ಡ ಹೆಸರು, ಕವಯತ್ರಿ, ಲೇಖಕಿ ಡಾ. ಸುನೀತಾ ಶೆಟ್ಟಿ, ವೈದ್ಯಕೀಯ ಕ್ಷೇತ್ರದ ಡಾ. ಸುರೇಶ್ ರಾವ್, ಪತ್ರಕರ್ತ ಚಂದ್ರಶೇಖರ ಪಾಲೆತ್ತಾಡಿ, ಸಮಾಜ ಸೇವಕ ವಿಶು ಕುಮಾರ್ ಶೆಟ್ಟಿ ಅಂಬಲಪಾಡಿ, ಪ್ರಗತಿಪರ ಕೃಷಿಕ ಪ್ರಭಾಕರ ಕಲ್ಲೂರಾಯ ಹಾಗೂ ವಾಸ್ತು ತಜ್ಞ ಮಾರ್ತಾಂಡ ಪಂಡಿತ್ ನವೀನ್ ಚಂದ್ರ ಸನಿಲ್ ಅವರನ್ನು ಸನ್ಮಾನಿಸಲಾಯಿತು.

ಸಮಾರಂಭದಲ್ಲಿ ರಾಷ್ಟಭಕ್ತಿ, ನಾಡಪ್ರೀತಿ ಮೊಳಗಿತು. ಕನ್ನಡದ ಕಂಪು ಎಲ್ಲೆಡೆ ಹರಡಿತು.

ಇತ್ತೀಚಿನ ಸುದ್ದಿ

ಜಾಹೀರಾತು