11:23 PM Saturday12 - July 2025
ಬ್ರೇಕಿಂಗ್ ನ್ಯೂಸ್
ಬೀದಿನಾಯಿಗಳಿಗೆ ಬಿರಿಯಾನಿ ನೀಡುವ ಬಿಬಿಎಂಪಿಯ ಯೋಜನೆಯಲ್ಲಿ ಲೂಟಿ ಮಾಡುವ ಉದ್ದೇಶ: ಪ್ರತಿಪಕ್ಷ ನಾಯಕ… ಬೆಂಗಳೂರು ಕಾಲ್ತುಳಿತ ಪ್ರಕರಣ: ಮುಖ್ಯಮಂತ್ರಿ ಸಿದ್ದರಾಮಯ್ಯರಿಗೆ ಜಸ್ಟೀಸ್ ಜಾನ್ ಮೈಕೆಲ್ ಡಿ.ಕುನ್ನಾ ವರದಿ… ಚಿಕ್ಕಮಗಳೂರು- ತಿರುಪತಿ ರೈಲಿಗೆ ಚಾಲನೆ: ಕಾಫಿನಾಡಿಗರ ದಶಕಗಳ ಕನಸು ಕೊನೆಗೂ ನನಸು Kodagu | ವಿರಾಜಪೇಟೆ ಕ್ಷೇತ್ರದ 1600 ಆದಿವಾಸಿಗಳಿಗೆ ಜಮೀನು ಹಕ್ಕುಪತ್ರ ವಿತರಣೆಗೆ ಅಸ್ತು:… ಹೆಚ್ಚುತ್ತಿರುವ ಕಾಡಾನೆಗಳ ದಾಂಧಲೆ: ವಿರಾಜಪೇಟೆ ತಿತಿಮತಿ ವ್ಯಾಪ್ತಿಯಲ್ಲಿ ಬಿರುಸುಗೊಂಡ ಕಾಡಿಗಟ್ಟುವ ಕಾರ್ಯಾಚರಣೆ Bangaluru | ನಾಗರಬಾವಿಯ ವಿಟಿಯು ಹಬ್ ಆ್ಯಂಡ್ ಸ್ಪೋಕ್ ಕೇಂದ್ರ ಉದ್ಘಾಟನೆ: ಕೇಂದ್ರ… SCSP-TSP ಯೋಜನೆ | ಅಧಿಕಾರಿಗಳು ಮೈಮರೆತರೆ ಪ್ರಕರಣ ದಾಖಲು ಗ್ಯಾರಂಟಿ: ಸಚಿವ ಡಾ.… New Delhi | ಮಿಸ್ ಯೂನಿವರ್ಸ್ ಕರ್ನಾಟಕ ವಿಜೇತೆ ಚಿಕ್ಕಮಗಳೂರಿನ ವಂಶಿ ಮುಖ್ಯಮಂತ್ರಿ… Kodagu | ಕುಶಾಲನಗರ-ಮಡಿಕೇರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಲಾರಿ ಡಿಕ್ಕಿ ಹೊಡೆದು ವ್ಯಕ್ತಿ ಸಾವು ಮಂಗಳೂರಿನ ಪೆಟ್ರೋಲಿಯಂ ಕಂಪನಿಗಳ ಸಂಬಂಧಿತ ದುರಂತ ನಿರ್ವಹಣೆಗೆ ಅಗ್ನಿಶಾಮಕ ಇಲಾಖೆಯ ಸಶಕ್ತಗೊಳಿಸಲಾಗಿದೆ: ಗೃಹ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ಫುಡ್ ಫೆಸ್ಟ್: ತುಳುನಾಡಿನ ವಿವಿಧ ಆಹಾರೋತ್ಪನ್ನಗಳ ಪ್ರದರ್ಶನ

19/07/2022, 21:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಪ್ರವಾಸೋದ್ಯಮ ವಿಭಾಗ ಹಾಗೂ ಕಾಮರ್ಸ್ ವಿಭಾಗದ ವತಿಯಿಂದ ಫುಡ್ ಫೆಸ್ಟ್ ಬಂಜಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬಂಟ್ವಾಳ ಬಂಟ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ನಮ್ಮ ಹಿರಿಯರು ಮಾರ್ಗದರ್ಶನ ಮಾಡಿದಂತಹ ಆಹಾರ ಪದ್ಧತಿಗಳು ಔಷಧ ಮೂಲವಾಗಿದೆ. ಯಾವುದೆ ಅಡ್ಡ ಪರಿಣಾಮ ಗಳಿಲ್ಲ. ಪಾಶಿಮಾತ್ಯಾ ಶೈಲಿಯ ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕಾರಕ. ನಮ್ಮಲ್ಲಿನ ವಿವಿಧ ಬಗೆಯ ಆಹಾರೋತ್ಪನ್ನಗಳು ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಜೀವನದಲ್ಲಿ ವೈಯಕ್ತಿಕ ಉದ್ದಿಮೆ ಮಾಡುವ ನಿಟ್ಟಿನಲ್ಲಿ ಸಹಾಯಕ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ವಹಿಸಿದ್ದರು. ನಂತರ ಮಾತಾಡಿ ಅವರು, ಅಚ್ಚುಕಟ್ಟಾಗಿ ಆಹಾರೋತ್ಪನ್ನ ಗಳಿಗೆ ಶೀರ್ಷಿಕೆ ನೀಡಿ ಈ ವ್ಯವಸ್ಥೆ ಮಾಡಲಾಗಿದೆ. ಐದು ವಿದ್ಯಾರ್ಥಿಕಲಿಕಾ ನಿಟ್ಟಿನಲ್ಲಿ ಪ್ರಯೋಜನ ಕಾರಿ ಎಂದು ಅವರು ನುಡಿದರು.



ಬಿ. ಬಿ.ಎ (ಟಿ. ಟಿ )ವಿಭಾಗ ಮುಖ್ಯಸ್ಥ ಡಾ. ಎ. ಸಿದ್ದಿಕ್, ಬಿ. ಎ (ಟಿ. ಟಿ.ಎಂ)ವಿಭಾಗ ಮುಖ್ಯಸ್ತೆ ಡಾ. ಮೀನಾಕ್ಷಿ ಎಂ. ಎಂ. ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕರಾದ ಶ್ರೀರಾಜ್,ಪರಿಣಿತ,ಎಚ್.ಆರ್. ಡಿ ವಿಭಾಗ ಉಪನ್ಯಾಸಕಿ ರೋವಿನ ಮತ್ತಿತರರು ಉಪಸ್ಥಿತರಿದ್ದರು.

ಫುಡ್ ಫೆಸ್ಟ್ ನಲ್ಲಿ ತುಳುನಾಡಿನ ಅನೇಕ ಆಹಾರೋತ್ಪನ್ನ ಗಳು ಪ್ರದರ್ಶನ ಗೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು