12:52 AM Monday1 - September 2025
ಬ್ರೇಕಿಂಗ್ ನ್ಯೂಸ್
ಮಗು ಹೊಟ್ಟೆಯಲ್ಲಿರುವಾಗಲೇ ವಾಕ್ ಮತ್ತು ಶ್ರವಣ ಸಮಸ್ಯೆ ಪತ್ತೆ ಹಚ್ಚಲು ಸಾಧ್ಯವಾಗಿರುವುದು ನಿಜಕ್ಕೂ… Kaali river | ಸೂಪಾ ಅಣೆಕಟ್ಟು ಪ್ರದೇಶದಲ್ಲಿ ಭಾರೀ ಮಳೆ: ಪ್ರವಾಹದ ಕುರಿತು… ಸಿದ್ದರಾಮನಹುಂಡಿಯಲ್ಲಿ ಪಿಎಂಶ್ರೀ ಕರ್ನಾಟಕ ಪಬ್ಲಿಕ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ: ಸಿಎಂ ಚಾಲನೆ ಧರ್ಮಸ್ಥಳ ಯಾತ್ರೆಯಿಂದ ಬಿಜೆಪಿಗೆ ರಾಜಕೀಯ ಲಾಭ ಸಿಗಲಾರದು: ಸಿಎಂ ಸಿದ್ದರಾಮಯ್ಯ ಗಣೇಶ ವಿಸರ್ಜನೆ: ಕುಶಾಲನಗರದಲ್ಲಿ ನಿಯಮ ಉಲ್ಲಂಘಿಸಿದ 5 ಡಿಜೆ ವಾಹನ ಪೊಲೀಸ್ ವಶಕ್ಕೆ ದಂತ ವೈದ್ಯಕೀಯ ಸೇವೆ ಹಳ್ಳಿ ಹಳ್ಳಿಗಳಿಗೂ ತಲುಪಲಿ: ಡೆಂಟಿಸ್ಟ್‌ ಶೃಂಗಸಭೆ-2025 ಸಮಾವೇಶದಲ್ಲಿ ಸಚಿವ… ಗೂಡ್ಸ್ ವಾಹನದಲ್ಲಿ ಗಾಂಜಾ ಮಾರಾಟಕ್ಕೆ ಯತ್ನ: ಮಾಲು ಸಹಿತ ಆರೋಪಿ ಬಂಧನ Kodagu | ‘ಹುಡುಗಿ, ಆಂಟಿ ಸರ್ವಿಸ್…’ ಎಂದು ಜಾಲತಾಣದಲ್ಲಿ ಹರಿಯ ಬಿಟ್ಟ: ಮಡಿಕೇರಿ… Kerala | ವಯನಾಡು ತಮರಶೆರಿ ಘಾಟ್ ಬಳಿ ಭೂಕುಸಿತ: ಬದಲಿ ಮಾರ್ಗಕ್ಕೆ ಸಲಹೆ ಕೆಪಿಟಿಸಿಎಲ್ ಕಿರಿಯ ಸ್ಟೇಷನ್ ಪರಿಚಾರಕ ಮತ್ತು ಕಿರಿಯ ಪವರ್‌ಮ್ಯಾನ್ ಹುದ್ದೆಗಳ ಅಯ್ಕೆ ಪಟ್ಟಿ…

ಇತ್ತೀಚಿನ ಸುದ್ದಿ

ಮಂಗಳೂರು ವಿವಿ ಕಾಲೇಜಿನಲ್ಲಿ ಫುಡ್ ಫೆಸ್ಟ್: ತುಳುನಾಡಿನ ವಿವಿಧ ಆಹಾರೋತ್ಪನ್ನಗಳ ಪ್ರದರ್ಶನ

19/07/2022, 21:14

ಚಿತ್ರ/ವರದಿ: ಅನುಷ್ ಪಂಡಿತ್ ಮಂಗಳೂರು
ಮಂಗಳೂರು(reporterkarnataka.com): ನಗರದ ವಿಶ್ವವಿದ್ಯಾನಿಲಯ ಕಾಲೇಜಿನ  ಪ್ರವಾಸೋದ್ಯಮ ವಿಭಾಗ ಹಾಗೂ ಕಾಮರ್ಸ್ ವಿಭಾಗದ ವತಿಯಿಂದ ಫುಡ್ ಫೆಸ್ಟ್ ಬಂಜಾರ ಕಾರ್ಯಕ್ರಮ ಕಾಲೇಜಿನ ಸಭಾಂಗಣದಲ್ಲಿ ಜರುಗಿತು.

ಕಾರ್ಯಕ್ರಮವನ್ನು ಬಂಟ್ವಾಳ ಬಂಟ ಸಂಘದ ಅಧ್ಯಕ್ಷ ಚಂದ್ರಹಾಸ ಡಿ. ಶೆಟ್ಟಿ ಉದ್ಘಾಟಿಸಿದರು.


ನಂತರ ಮಾತನಾಡಿದ ಅವರು, ನಮ್ಮ ಹಿರಿಯರು ಮಾರ್ಗದರ್ಶನ ಮಾಡಿದಂತಹ ಆಹಾರ ಪದ್ಧತಿಗಳು ಔಷಧ ಮೂಲವಾಗಿದೆ. ಯಾವುದೆ ಅಡ್ಡ ಪರಿಣಾಮ ಗಳಿಲ್ಲ. ಪಾಶಿಮಾತ್ಯಾ ಶೈಲಿಯ ಜಂಕ್ ಫುಡ್ ಆರೋಗ್ಯಕ್ಕೆ ಹಾನಿಕಾರಕ. ನಮ್ಮಲ್ಲಿನ ವಿವಿಧ ಬಗೆಯ ಆಹಾರೋತ್ಪನ್ನಗಳು ಬೇರೆಲ್ಲೂ ಸಿಗಲು ಸಾಧ್ಯವಿಲ್ಲ ಎಂದರು.

ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಂಗಳೂರು ವಿಶ್ವವಿದ್ಯಾನಿಲಯ ಸಿಂಡಿಕೇಟ್ ಸದಸ್ಯ ರಮೇಶ್ ಕೆ. ಮಾತನಾಡಿ, ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳು ಜೀವನದಲ್ಲಿ ವೈಯಕ್ತಿಕ ಉದ್ದಿಮೆ ಮಾಡುವ ನಿಟ್ಟಿನಲ್ಲಿ ಸಹಾಯಕ ಎಂದು ಹೇಳಿದರು.

ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲೆ ಡಾ. ಅನಸೂಯಾ ವಹಿಸಿದ್ದರು. ನಂತರ ಮಾತಾಡಿ ಅವರು, ಅಚ್ಚುಕಟ್ಟಾಗಿ ಆಹಾರೋತ್ಪನ್ನ ಗಳಿಗೆ ಶೀರ್ಷಿಕೆ ನೀಡಿ ಈ ವ್ಯವಸ್ಥೆ ಮಾಡಲಾಗಿದೆ. ಐದು ವಿದ್ಯಾರ್ಥಿಕಲಿಕಾ ನಿಟ್ಟಿನಲ್ಲಿ ಪ್ರಯೋಜನ ಕಾರಿ ಎಂದು ಅವರು ನುಡಿದರು.



ಬಿ. ಬಿ.ಎ (ಟಿ. ಟಿ )ವಿಭಾಗ ಮುಖ್ಯಸ್ಥ ಡಾ. ಎ. ಸಿದ್ದಿಕ್, ಬಿ. ಎ (ಟಿ. ಟಿ.ಎಂ)ವಿಭಾಗ ಮುಖ್ಯಸ್ತೆ ಡಾ. ಮೀನಾಕ್ಷಿ ಎಂ. ಎಂ. ಮತ್ತಿರರು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ವಿಭಾಗದ ಉಪನ್ಯಾಸಕರಾದ ಶ್ರೀರಾಜ್,ಪರಿಣಿತ,ಎಚ್.ಆರ್. ಡಿ ವಿಭಾಗ ಉಪನ್ಯಾಸಕಿ ರೋವಿನ ಮತ್ತಿತರರು ಉಪಸ್ಥಿತರಿದ್ದರು.

ಫುಡ್ ಫೆಸ್ಟ್ ನಲ್ಲಿ ತುಳುನಾಡಿನ ಅನೇಕ ಆಹಾರೋತ್ಪನ್ನ ಗಳು ಪ್ರದರ್ಶನ ಗೊಂಡಿದ್ದವು.

ಇತ್ತೀಚಿನ ಸುದ್ದಿ

ಜಾಹೀರಾತು