12:14 PM Thursday18 - September 2025
ಬ್ರೇಕಿಂಗ್ ನ್ಯೂಸ್
ಕೃಷ್ಣಾ ಮೇಲ್ದಂಡೆ ಯೋಜನೆ: ಮುಳುಗಡೆ ರೈತರ ನೀರಾವರಿ ಜಮೀನಿಗೆ 40 ಲಕ್ಷ, ಒಣಭೂಮಿಗೆ… Belagavi | ಶೀಘ್ರವೇ ಅಂಗನವಾಡಿ ಕಾರ್ಯಕರ್ತೆಯರು, ಸಿಬ್ಬಂದಿಗೆ ಬಡ್ತಿ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಭೂ ಸ್ವಾಧೀನ ಪ್ರಕ್ರಿಯೆ ಅಕ್ರಮ ಕೂಡಲೇ ಕೈಬಿಡಿ: ಪ್ರತಿಪಕ್ಷ ನಾಯಕ ಆರ್‌.ಅಶೋಕ್ ಆಗ್ರಹ ಪಾಲಿಕೆಯೇ ಪಾಪರ್‌ ಆಗಿರುವಾಗ ಹೊಸದಾಗಿ ಇಂಜಿನಿಯರ್‌ಗಳನ್ನು ಹೇಗೆ ನೇಮಿಸುತ್ತಾರೆ: ಪ್ರತಿಪಕ್ಷದ ನಾಯಕ ಆರ್.… ಮತಗಳ್ಳತನಕ್ಕೆ ಅವಕಾಶ ನೀಡಬೇಡಿ: ರಾಜ್ಯದ ಜನರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ಪರಿಹಾರದಾಸೆಗೆ ಪತಿಯ ಕೊಲೆಗೈದು ಹುಲಿ ಕೊಂದಿದೆ ಎಂದು ಕಥೆ ಕಟ್ಟಿ ಸಿಕ್ಕಿಬಿದ್ದ ಪತ್ನಿ;… Kodagu | ಮಡಿಕೇರಿ ದಸರಾ: ರಾಜ್ಯ ಸರಕಾರದಿಂದ1.50 ಕೋಟಿ ಅನುದಾನ ಬಿಡುಗಡೆ 2026ರ ಮಾರ್ಚ್‌ಗೆ PM KUSUM 2ನೇ ಹಂತ ಅನುಷ್ಠಾನ: ಕೇಂದ್ರ ಸಚಿವ ಪ್ರಹ್ಲಾದ್… ವಿಧಾನ ಪರಿಷತ್ ಸದಸ್ಯರಾಗಿ ಡಾ. ಆರತಿಕೃಷ್ಣ, ರಮೇಶ್ ಬಾಬು ಸಹಿತ ನಾಲ್ವರು ಪ್ರಮಾಣ… ಅಸ್ಸಾಂ ಕಾರ್ಮಿಕರು ಕೊಡಗಿನಿಂದ ಹಾಸನ ಕಡೆಗೆ ವಲಸೆ: ಕುಶಾಲನಗರ ಬಸ್ ನಿಲ್ದಾಣದಲ್ಲಿ ಹಿಂಡು…

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು