12:28 AM Friday13 - February 2026
ಬ್ರೇಕಿಂಗ್ ನ್ಯೂಸ್
ಒಟಿಪಿ ಸೋರಿಕೆ: ವಂಚನೆ ತಡೆಗಟ್ಟಲು ಏರ್‌ ಟೆಲ್‌ ನಿಂದ ಹೊಸ ಎಐ ಚಾಲಿತ… ಮಾಜಿ ಪ್ರಧಾನಿ ಎಚ್ಡಿಡಿ ಮಧ್ಯಪ್ರವೇಶ: ಕಾಫಿ ತೋಟಗಳ ಆನ್-ಲೈನ್ ಹರಾಜು ತಕ್ಷಣವೇ ಸ್ಥತಿತಗೊಳಿಸುವಂತೆ… ಕಾಲವೇ ಉತ್ತರ ಕೊಡುತ್ತೆ: ಸೋನಿಯಾ, ರಾಹುಲ್, ಪ್ರಿಯಾಂಕ ಭೇಟಿ ಬಳಿಕ ಡಿಸಿಎಂ ಡಿಕೆಶಿ… ಶಿವಣ್ಣನ ಶಿವಭಕ್ತಿ: ಶಿವರಾತ್ರಿಯ ಅಂಗವಾಗಿ 37 ವರ್ಷಗಳಿಂದ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ! ದಕ್ಷಿಣ ಕೊಡಗಿನಲ್ಲಿ ಆತಂಕದ ಸೃಷ್ಟಿಸಿದ್ದ ವ್ಯಾಘ್ರ ಕೊನೆಗೂ ಸೆರೆ: ಬಲೆಗೆ ಬಿದ್ದ ಗಂಡು… ತೇಜಸ್ವಿ ಸೂರ್ಯ ಬಂಧನ ಮಾಡಿಸಿದ ಸಿದ್ದರಾಮಯ್ಯ ಪುಕ್ಕಲ ಸಿಎಂ: ಪ್ರತಾಪ್‌ ಸಿಂಹ ಕಿಡಿ ಚಿಕ್ಕಮಗಳೂರು: ಕಾಫಿ ತೋಟದ ಇಬ್ಬರು ಮಹಿಳಾ ಕಾರ್ಮಿಕರ ಮೇಲೆ ಚಿರತೆ ದಾಳಿ; ಆಸ್ಪತ್ರೆಗೆ… ಎಚ್ ಡಿ ಕೋಟೆ | ಕಂಚಮಳ್ಳಿ ಗ್ರಾಮ ಪಂಚಾಯಿತಿ ಕಾರ್ಯದರ್ಶಿ ಮೇಲೆ ಭಾರೀ… Kodagu | ಕುಶಾಲನಗರ: ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಕ್ರೇಟಾ ಕಾರು; ಅದೃಷ್ಟವಶಾತ್… ಇ-ಸ್ವತ್ತು ತಂತ್ರಾಂಶದಲ್ಲಿ ಬದಲಾವಣೆ ಮೂಲಕ ಸಾರ್ವಜನಿಕರಿಗೆ ತ್ವರಿತ ಸೇವೆಗೆ ಕ್ರಮ: ಗ್ರಾಮೀಣಾಭಿವೃದ್ಧಿ ಸಚಿವ…

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು