10:20 PM Tuesday28 - July 2026
ಬ್ರೇಕಿಂಗ್ ನ್ಯೂಸ್
ಕೇರಳದಲ್ಲಿ ಬೆಚ್ಚಿಬೀಳಿಸುವ ಘಟನೆ: ವಿದ್ಯಾರ್ಥಿಗಳಿಗೆ ದಾರಿ ದೀಪವಾಗಿದ್ದ ಶಿಕ್ಷಕಿಯರೇ ಡ್ರಗ್ಸ್ ಜಾಲದ ಡಾನ್‌ಗಳು!! ಅಸ್ಸಾಂ ಪ್ರವಾಹ ಕೊಂಚ ಇಳಿಮುಖ: 70ಕ್ಕೂ ಅಧಿಕ ಸಾವು; 4.45 ಲಕ್ಷಕ್ಕೂ ಹೆಚ್ಚು… Mysore | ಮಲೆಮಹದೇಶ್ವರ ಅಭಯಾರಣ್ಯದಲ್ಲಿ ಅರಣ್ಯ ಸಿಬ್ಬಂದಿ ಫೈರಿಂಗ್: ಕಾಡುಹಂದಿ ಬೇಟೆಗಾರನಿಗೆ ಬಿತ್ತು… Bangalore | ಕ್ಯಾಬ್‌ಗೆ ಕಾಯುತ್ತಿದ್ದ ಯುವತಿಯ ‘ರೇಟ್‌’ ಕೇಳಿದ ಕಾಮುಕ ಅರೆಸ್ಟ್ ಗಂಗಾಧರ ಪಾಂಗಾಳ ಕೊಲೆ ಪ್ರಕರಣ: ಸತೀಶ್ ಬೈಕಂಪಾಡಿ ಸೇರಿ 4 ಮಂದಿ ಆರೋಪಿಗಳಿಗೆ… Bangalore | ಅಗ್ನಿ ದುರಂತ: ಚಂದಾಪುರದಲ್ಲಿ ಹೊತ್ತಿ ಉರಿದ 4 ಖಾಸಗಿ ಬಸ್‌ಗಳು ಭಾರತದ ಇತಿಹಾಸದಲ್ಲೇ ಮಕ್ಕಳ ಮೇಲೆ ಈ ರೀತಿ ಹಲ್ಲೆ ನಡೆದಿಲ್ಲ: ರಾಜ್ಯಸಭೆಯಲ್ಲಿ ಪ್ರತಿಪಕ್ಷದ… ನೀಟ್ ಪ್ರತಿಭಟನೆ | ಹೋರಾಟಗಾರರಿಗೆ ಉಚಿತ ಆಹಾರ ಹಂಚಿದವನ ಬಂಧನ; ನನ್ನನ್ನು ಅಪಹರಿಸಿದ್ದರು:… *ಲಗೇಜ್​ ರೂಮ್​ನಲ್ಲಿ ಹೊಗೆ: ರಾಜ್‌ಕೋಟ್‌ನಲ್ಲಿ ತುರ್ತು ಭೂಸ್ಪರ್ಶ ಮಾಡಿದ 194 ಮಂದಿ ಹೊತ್ತೊಯ್ಯುತ್ತಿದ್ದ… ಕುಶಾಲನಗರ: ಕಾಡಾನೆಗಳನ್ನು ಕಾಡಿಗೆ ಹಿಮ್ಮೆಟ್ಟಿಸಲು ಯಶಸ್ವಿ ಕಾರ್ಯಾಚರಣೆ

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು