11:26 PM Monday1 - June 2026
ಬ್ರೇಕಿಂಗ್ ನ್ಯೂಸ್
ತಮಿಳುನಾಡಿನಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ನಡೆ; ಬಿಜೆಪಿಗೆ ಶುರುವಾಯ್ತು ಢವ ಢವ ನಾವು ಪಕ್ಷನಿಷ್ಠರು, ಜಮೀರ್‌ ವಿರುದ್ದ ಬೃಹತ್‌ ಷಡ್ಯಂತ್ರ: ವೈರಲ್‌ ಆಡಿಯೋ ಬಗ್ಗೆ ಸಿರಾಜ್‌… ಪಕ್ಷ ವಿರೋಧಿ ಕೃತ್ಯಕ್ಕೆ ಸಿಕ್ತು ಸಾಕ್ಷ್ಯ: ಜಮೀರ್ ಅಹ್ಮದ್ ಸ್ಫೋಟಕ ಆಡಿಯೋ ವೈರಲ್ ಕಾಂಗ್ರೆಸ್ ಆಡಳಿತದ ರಾಜ್ಯದಲ್ಲಿ ಇದ್ದೊಬ್ಬ ಒಬಿಸಿ ಸಿಎಂ ಕೆಳಗಿಳಿಸಿ ಅಪಮಾನ: ಮಂಗಳೂರಿನಲ್ಲಿ ಕೇಂದ್ರ… Kodagu | ಕುಶಾಲನಗರ: 15 ದಿನದೊಳಗೆ ದುಷ್ಕರ್ಮಿಗಳ ಗುಂಡೇಟಿಗೆ 2 ಕಾಡು ಕೋಣಗಳು… ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: ಭಾರತಕ್ಕೆ ಸಿಹಿಸುದ್ದಿ ಕೊಟ್ಟ ಇರಾನ್; 10 ಇಂಡಿಯನ್ ನಾವಿಕರ… Kerala | ಮಾಜಿ ಸಿಎಂ ಪಿಣರಾಯಿ ಮನೆ ಎದುರು ಇ.ಡಿ ವಾಹನಗಳ ಮೇಲೆ… Bangalore | ಐಪಿಎಲ್ ಬೆಟ್ಟಿಂಗ್ ವಿರುದ್ಧ ಸಿಸಿಬಿ ಭರ್ಜರಿ ಕಾರ್ಯಾಚರಣೆ: 23 ಜನ… ಕಾಂಗ್ರೆಸ್‌ ಹೈಡ್ರಾಮಾಕ್ಕೆ ವಿಜಯೇಂದ್ರ ವ್ಯಂಗ್ಯ: ಸಿದ್ದರಾಮಯ್ಯ ಬಿಟ್ಟು ಯಾರೇ ಸಿಎಂ ಆದ್ರೂ ಅದು… ಬೆಂಗಳೂರಿಗೆ ಮಹಾಮಾರಿ ಎಬೋಲಾ ಎಂಟ್ರಿ?: ಉಗಾಂಡದ ಮಹಿಳೆ ಐಸೋಲೇಷನ್‌ನಲ್ಲಿ..!

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು