11:54 PM Monday14 - September 2026
ಬ್ರೇಕಿಂಗ್ ನ್ಯೂಸ್
‘ಮಂಗಳೂರು ಟೆಕ್ನೋವಾಂಜಾ 2026’: ಕರಾವಳಿಯಲ್ಲಿ ತಂತ್ರಜ್ಞಾನ ಕ್ರಾಂತಿ ಸೆ. 23ರಂದು ಅನಾವರಣ ಬಹುರಾಜ್ಯ ಸಹಕಾರಿ ಸಂಸ್ಥೆ ಕ್ಯಾಂಪ್ಕೊ ದಾಖಲೆ ಸಾಧನೆ: 2025-26ನೇ ಸಾಲಿನಲ್ಲಿ 3,735 ಕೋಟಿ… ಮಹಿಳಾ ಉದ್ಯೋಗಿಗಳಿಗೆ ಕಾರ್ಪೊರೇಟ್ ಎನ್‌ಪಿಎಸ್: ಪೆನ್ಷನ್‌ ಬಜಾರ್ -ಉಬುಂಟು ಒಪ್ಪಂದ ಪುತ್ತೂರು ಶಾಸಕರ ಆರೋಪ | ಕೆಆರ್ ಐಡಿಎಲ್ ಸಂಸ್ಥೆಗೆ ಗುತ್ತಿಗೆ: ಉಸ್ತುವಾರಿ ಸಚಿವ… ಕ್ರೈಂ ಡೈರಿ | ಸೆರೆ ಸಿಕ್ಕ ‘ರಿಪ್ಪರ್ ಚಂದ್ರನ್’ ಎಂಬ ಸರಣಿ ಹಂತಕ:… ತುಮಕೂರು-ರಾಯದುರ್ಗ- ಚಿತ್ರದುರ್ಗ | 2027 ಡಿಸೆಂಬರ್ ಅಂತ್ಯಕ್ಕೆ ರೈಲು ಮಾರ್ಗ ಆರಂಭ ಕಸ್ತೂರಿ ರಂಗನ್ ವರದಿ ವಿರೋಧಿಸಿ ನವೆಂಬರ್ 16ರಿಂದ ತೀರ್ಥಹಳ್ಳಿ ಟು ಶಿವಮೊಗ್ಗ ಪಾದಯಾತ್ರೆ:… *ಡಿಸೆಂಬರ್ ಒಳಗೆ ಜಗತ್ತಿಗೆ ಗಂಡಾತರ: ‘ಅಷ್ಟಮಂಗಲ ಪ್ರಶ್ನೆ’ಯಲ್ಲಿ ಕಾಳಸರ್ಪ ದೋಷದ ಭವಿಷ್ಯ* ಚಾಮರಾಜನಗರ | ಒಂಟಿ ಸಲಗದ ಜತೆ ಪ್ರಾಣ ಪಣಕ್ಕಿಟ್ಟು ಸೆಲ್ಫಿ; ಬೈಕ್ ಸವಾರರ… ಸೆಪ್ಟೆಂಬರ್ 8 ಮಾತೆ ಮರಿಯಮ್ಮನವರ ಜನ್ಮದಿನ ಹಬ್ಬಕ್ಕೆ ಸಾರ್ವತ್ರಿಕ ರಜೆ ಘೋಷಿಸಲು ಆಗ್ರಹ

ಇತ್ತೀಚಿನ ಸುದ್ದಿ

ಲಾಕ್ ಡೌನ್ ನಿಯಮ ಉಲ್ಲಂಘಿಸಿ 4 ಮದುವೆ: ಸುತ್ತಲಿದೆಯೇ ಪಾಲಿಕೆ ಆರೋಗ್ಯಾಧಿಕಾರಿ ಕೊರಳು ?

21/06/2021, 20:30

ಮಂಗಳೂರು(reporterkarnataka news): ಲಾಕ್ ಡೌನ್ ಗೈಡ್ ಲೈನ್ಸ್ ಗಾಳಿಗೆ ತೂರಿ ನಗರದ ಮಂಗಳಾದೇವಿಯಲ್ಲಿ ಭಾನುವಾರ ನಡೆದ ಅದ್ದೂರಿ ಮದುವೆ ಸಮಾರಂಭ ಮಂಗಳೂರು ಮಹಾನಗರಪಾಲಿಕೆಯ ಆರೋಗ್ಯಾಧಿಕಾರಿ

ಅವರ ಕೊರಳಿಗೆ ಸುತ್ತುವ ಎಲ್ಲ ಲಕ್ಷಣಗಳಿವೆ.

ಕೋವಿಡ್ ಗೈಡ್ ಲೈನ್ಸ್ ಪ್ರಕಾರ ಮನೆ ಬಿಟ್ಟು ಹೊರಗಡೆ ದೇವಸ್ಥಾನ, ಹಾಲ್ , ಛತ್ರಗಳಲ್ಲಿ ವಿವಾಹ ನಡೆಸಲು ಅವಕಾಶವಿಲ್ಲ. ಮನೆಯಲ್ಲಿ ಕೂಡ 25 ಮಂದಿ ಭಾಗವಹಿಸಲು ಮಾತ್ರ ಅವಕಾಶವಿದೆ. ವಾಸ್ತವಾಂಶ ಹೀಗಿರುವಾಗ ಮಂಗಳೂರು ಮಹಾನಗರಪಾಲಿಕೆ ಯಾವ ನೆಲೆಯಲ್ಲಿ ಮಂಗಳಾದೇವಿ ದೇಗುಲದ ಸಭಾಂಗಣದಲ್ಲಿ ಮದುವೆ ನಡೆಸಲು ಅವಕಾಶ ನೀಡಿತು ಎಂಬ ಪ್ರಶ್ನೆ ಉದ್ಬವಿಸಿದೆ. ಅದಲ್ಲದೆ 4 ಮದುವೆಯಲ್ಲಿ 200ಕ್ಕೂ ಹೆಚ್ಚು ಜನರು ಪಾಲ್ಗೊಂಡಿದ್ದರು. ಪಾಲಿಕೆಯ ಆರೋಗ್ಯ ನಿರೀಕ್ಷಕರು ಹೇಗೆ ಕ್ಲಿಯರೆನ್ಸ್ ಸರ್ಟಿಫಿಕೇಟ್ ನೀಡಿದರು. ಯಾರು ಪ್ರಭಾವ ಬೀರಿ ಸರಕಾರದ ಮಾರ್ಗಸೂಚಿಯನ್ನು ಉಲ್ಲಂಘಿಸಿದರು ಎನ್ನುವ ಕುರಿತು ತನಿಖೆ ನಡೆಯಲಿದೆ.

ಮಂಗಳೂರು ಮಹಾನಗರಪಾಲಿಕೆಯ ನಾಮನಿರ್ದೇಶನ ಸದಸ್ಯ ಬಿಜೆಪಿಯ ಭಾಸ್ಕರಚಂದ್ರ ಶೆಟ್ಟಿ ಅವರ ಪುತ್ರಿಯ ಮದುವೆ ಸೇರಿದಂತೆ ಒಟ್ಟು ನಾಲ್ಕು ಜೋಡಿ ವಿವಾಹ

ನಡೆದಿತ್ತು. ಮಂಗಳಾದೇವಿ ದೇವಸ್ಥಾನದ ಅಂಗಣದಲ್ಲಿರುವ ಸಭಾಂಗಣದಲ್ಲಿ ವಿವಾಹ ಸಮಾರಂಭ ಏರ್ಪಟ್ಟಿತ್ತು. ಬೆಳಗ್ಗೆ 10 ಗಂಟೆಯಿಂದ 200ಕ್ಕೂ ಹೆಚ್ಚು ಮಂದಿ ವಿವಿಧ ವಾಹನಗಳಲ್ಲಿ ಆಗಮಿಸಿದ್ದರು. ಒಂದು ಸಂದರ್ಭದಲ್ಲಿ ಟ್ರಾಫಿಕ್ ಜಾಮ್ ಕೂಡ ಅಲ್ಲಿ ಉಂಟಾಗಿತ್ತು. ಕೊಂಬು ಕಹಳೆ ಮಂಗಳವಾದ್ಯ ಮೊಳಗಿತ್ತು. ಈ ಕುರಿತು ಸ್ಥಳೀಯ ನಿವಾಸಿಗಳೇ ದೂರು ನೀಡಿದ್ದರು. ಮಂಗಳೂರು ಅಸಿಸ್ಟೆಂಟ್ ಕಮಿಷನರ್ ಮದನ್ ಮೋಹನ್, ಪಾಲಿಕೆ ಉಪ ಆಯುಕ್ತ ಬಿನಾಯ್ ನಂಬಿಯಾರ್ ನೇತೃತ್ವದಲ್ಲಿ ಮುಜರಾಯಿ ಇಲಾಖೆಯ ಅಧಿಕಾರಿಗಳ ತಂಡ ದಾಳಿ ನಡೆಸಿತ್ತು.

ಇತ್ತೀಚಿನ ಸುದ್ದಿ

ಜಾಹೀರಾತು