11:29 AM Monday29 - December 2025
ಬ್ರೇಕಿಂಗ್ ನ್ಯೂಸ್
ಕನ್ನಡ ಭಾಷೆ, ನೆಲ, ಜಲ, ಗಡಿ, ಕನ್ನಡಿಗರಿಗೆ ಉದ್ಯೋಗ ವಿಚಾರದಲ್ಲಿ ರಾಜಿ ಇಲ್ಲ:… ಮೈಸೂರು ಅರಮನೆ ಬಳಿ ಸ್ಫೋಟ: ಸಾವಿನ ಸಂಖ್ಯೆ 3ಕ್ಕೆ ಏರಿಕೆ; ಹೆಚ್ಚಿದ ಆತಂಕ ಮಂಗಳೂರು ಡೇಟಾ ಸೆಂಟರ್ ಭಾರತದ ಅತ್ಯಂತ ವೆಚ್ಚ-ದಕ್ಷ ಕೇಂದ್ರ: ಫೀಸಿಬಿಲಿಟಿ ವರದಿ ಹೊಸ ವರ್ಷಾಚರಣೆ: ರೆಸಾರ್ಟ್, ಹೋಟೆಲ್, ಹೋಂ ಸ್ಟೇ ಮಾಲೀಕರಿಗೆ ಕಟ್ಟುನಿಟ್ಟಿನ ಸೂಚನೆ ಕೊಡಗಿನಲ್ಲಿ ಅರಣ್ಯ ರಕ್ಷಕರಿಂದಲೇ ಮರಗಳ ಲೂಟಿ: ಲೋಡರ್ ಬಂಧನ; ನಾಲ್ವರು ಪರಾರಿ ಖಾಸಗಿ ವಾಹನಕ್ಕೆ ನಾಮಫಲಕ | ಪೊಲೀಸಪ್ಪನಿಂದೇ ಕಾನೂನು ಉಲ್ಲಂಘನೆ: ದಂಡ ಯಾವತ್ತೇ ವಿಧಾನಸಭೆ ಚುನಾವಣೆ ನಡೆದರೂ ಬಿಜೆಪಿಗೆ ಬಹುಮತ: ಪಕ್ಷದ ರಾಜ್ಯಾಧ್ಯಕ್ಷ ವಿಜಯೇಂದ್ರ ವಿಶ್ವಾಸ ಭಾರತ ರತ್ನ ವಾಜಪೇಯಿ ಗ್ರಂಥಾಲಯ: ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಉದ್ಘಾಟನೆ ಜಿಲ್ಲಾ ಮತ್ತು ಕ್ಲಸ್ಟರ್ ಮಟ್ಟದಲ್ಲಿ ಡಿಜಿಟಲ್ ಆರ್ಥಿಕತೆಗೆ ಒತ್ತು: ಕೆಡಿಇಎಂ ಮತ್ತು ಎಫ್‌ಕೆಸಿಸಿಐ… ಪ್ರೀತಿಯ ಸಂಸ್ಕೃತಿ ಬೆಳೆಸಿ: ರೊಸಾರಿಯೋ ಕೆಥೆಡ್ರಲ್‌ನಲ್ಲಿ ಬಿಷಪ್ ಡಾ. ಸಲ್ಡಾನರಿಂದ ಕ್ರಿಸ್ಮಸ್ ಸಂದೇಶ

ಇತ್ತೀಚಿನ ಸುದ್ದಿ

ಮನೆ ಕುಸಿತ ಪ್ರದೇಶಕ್ಕೆ ಜಿಪಂ ಸಿಇಒ ಭೇಟಿ: ಸಂತ್ರಸ್ತರ ಜತೆ ಸಭೆ; ವಸತಿರಹಿತರಿಗೆ 15 ದಿನಗಳಲ್ಲಿ ನಿವೇಶನ ಭರವಸೆ

20/07/2022, 21:03

ಸಂತೋಷ್ ಅತ್ತಿಗೆರೆ ಚಿಕ್ಕಮಗಳೂರು

info.reporterkarnataka@gmail.com

ಕೊಟ್ಟಿಗೆಹಾರ ಸಮೀಪದ ಬಾಳೂರು, ನಿಡುವಾಳೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಮನೆ ಕುಸಿತ ಉಂಟಾದ ಪ್ರದೇಶಗಳಿಗೆ ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ.ಪ್ರಭು ಭೇಟಿ ನೀಡಿ   ಅಧಿಕಾರಿಗಳು ಹಾಗೂ ಸಂತ್ರಸ್ತರ ಜತೆ  ಸಭೆ ನಡೆಸಿದರು.

ಬಳಿಕ ಮಾತನಾಡಿದ ಅವರು, ನಿಡುವಾಳೆ, ಮರ್ಕಲ್, ಬಾಳೂರು ಮೂರು ಭಾಗಗಳಲ್ಲಿ ಮನೆ ಕುಸಿತವಾದ ಸಂತ್ರಸ್ತರಿಗೆ ಪರ್ಯಾಯ ಜಾಗ ಗುರುತಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದ್ದು ಶೀಘ್ರವಾಗಿ ಜಾಗ ಅನುಮೋದಿಸಿ ನೀಡಲಾಗುವುದು. ಬಾಳೂರು ಗ್ರಾಪಂ ಕಲ್ಲಕ್ಕಿ ಭಾಗದಲ್ಲಿ ವಸತಿ ರಹಿತರಿಗೆ ನೂತನವಾಗಿ ಸೂಚಿಸಿರುವ ಜಾಗವನ್ನು 15 ದಿನಗಳ ಅವಧಿಯಲ್ಲಿ ಅನುಮೋದಿಸಿ ಸಂತ್ರಸ್ತರಿಗೆ ವಿತರಿಸುವುದಾಗಿ ಭರವಸೆ ನೀಡಿದರು. 

ಮನೆ ಬಿದ್ದು ಹೋದ ಸಂತ್ರಸ್ತರಿಗೆ ಪರಿಹಾರ ಒದಗಿಸಲು ಆದೇಶ ನೀಡಲಾಗಿದ್ದು, ಬಹುತೇಕ ಮನೆಗಳಿಗೆ ಪರಿಹಾರ ವಿತರಿಸಲಾಗಿದೆ. ಪರಿಹಾರ ಸಿಗದ ಸಂತ್ರಸ್ತರಿದ್ದರೆ ಹಾಗೂ ವಿವಿಧ ಕಡೆಗಳಲ್ಲಿ ಅಂಗನವಾಡಿ, ರಸ್ತೆ,ತಡೆಗೋಡೆ ಮಳೆಗೆ  ಕುಸಿದು ಹೋಗಿದ್ದಲ್ಲಿ ಕೂಡಲೇ ಅಧಿಕಾರಿಗಳ ಗಮನಕ್ಕೆ ತರಬೇಕು.

ಗ್ರಾಮೀಣ ಭಾಗದಲ್ಲಿ ಆಸ್ಪತ್ರೆಯ ವೈದ್ಯರ, ಸಿಬ್ಬಂದಿಗಳ ಕೊರತೆ ಎದ್ದು ಕಾಣುತ್ತಿದ್ದು ಕೂಡಲೇ ಸಿಬ್ಬಂದಿಗಳನ್ನು ಗ್ರಾಮೀಣ ಭಾಗದ ಆಸ್ಪತ್ರೆಗಳಿಗೆ ನಿಯೋಜಿಸಲು  ಸಭೆ ನಡೆಸಿ ಸಮಸ್ಯೆ ಬಗೆಹರಿಸಲು ಚಿಂತನೆ ನಡೆಸಲಾಗುವುದು’ ಎಂದರು. 

ಜಿಲ್ಲೆಯ ವಿವಿಧ ಭಾಗಗಳಲ್ಲಿ ಶಾಲೆ, ಅಂಗನವಾಡಿಗಳನ್ನು ಅಚ್ಚುಕಟ್ಟಾಗಿ ಗ್ರಾಮ ಪಂಚಾಯಿತಿ ಹಾಗೂ ಸಂಘ ಸಂಸ್ಥೆಗಳ ವತಿಯಿಂದ ಇಡಲಾಗಿದೆ. ಮರ್ಕಲ್ ಅಂಗನವಾಡಿ ಕೇಂದ್ರದ ನಿರ್ವಹಣೆಯ ಬಗ್ಗೆ ಶ್ಲಾಘನೆ ವ್ಯಕ್ತಪಡಿಸಿದರು.

ಇತ್ತೀಚಿನ ಸುದ್ದಿ

ಜಾಹೀರಾತು