12:32 AM Wednesday5 - August 2026
ಬ್ರೇಕಿಂಗ್ ನ್ಯೂಸ್
2029ರಲ್ಲಿ ರಾಹುಲ್ ಗಾಂಧಿ ಪ್ರಧಾನಿ ಮಾಡುವುದೇ ನಮ್ಮ ಗುರಿ: ಕೊಡಗು ಜಿಲ್ಲಾ ಉಸ್ತುವಾರಿ… ಮಹಾಮಳೆಗೆ ಕೇರಳ ತತ್ತರ; ಬಹುತೇಕ ಪ್ರದೇಶ ಮುಳುಗಡೆ; ಅಪಾಯ ಮಟ್ಟ ಮೀರಿ ಹರಿಯುತ್ತಿರುವ… *ಬಿರುಗಾಳಿಗೆ ಸಿಲುಕಿ ಆಗಸದಲ್ಲೇ 300 ಅಡಿ ಕೆಳಗೆ ಕುಸಿದ ಏರ್ ಇಂಡಿಯಾ ವಿಮಾನ:… *10 ಲಕ್ಷ ರೂ. ಲಂಚಕ್ಕೆ ಬೇಡಿಕೆ; ಲೋಕಾಯುಕ್ತ ಬಲೆಗೆ ಬಿದ್ದ ಹುಣಸೂರು ಉಪವಿಭಾಗಾಧಿಕಾರಿ… ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಬಸವರಾಜ ಹೊರಟ್ಟಿ ರಾಜೀನಾಮೆ ಸಂಪುಟ ವಿಸ್ತರಣೆ | ಕೊನೆ ಕ್ಷಣದಲ್ಲಿ 3 ಬಾರಿ ಪಟ್ಟಿ ಬದಲು: ಗಾಯತ್ರಿ… ಸಂಪುಟ ವಿಸ್ತರಣೆ | ಈ ಬಾರಿಯೂ ಕೊಡಗಿಗೆ ಒಲಿಯದ ಮಂತ್ರಿಗಿರಿ: ವಿರಾಜಪೇಟೆ ಶಾಸಕ… ಮೈಸೂರಿಗೆ ಪ್ರಧಾನಿ ಮೋದಿ: ಸ್ವಾಮಿ ವಿವೇಕಾನಂದ ಸಾಂಸ್ಕೃತಿಕ ಯುವ ಕೇಂದ್ರ ವಿವೇಕ ಸ್ಮಾರಕ… ಭಾರತದ ಭವ್ಯ ಪರಂಪರೆ ಮೈಸೂರಿನ ಕಣಕಣದಲ್ಲಿದೆ: ವಿವೇಕ ಸ್ಮಾರಕ ಉದ್ಘಾಟಿಸಿ ಪ್ರಧಾನಿ ಮೋದಿ… ಸಿದ್ದಾಪುರ: ದೇವಾಲಯ ಆವರಣದಲ್ಲಿ ಗೋರಿ ನಿರ್ಮಾಣ ಪ್ರಕರಣ; 8 ಮಂದಿ ಬಂಧನ

ಇತ್ತೀಚಿನ ಸುದ್ದಿ

ಆತ್ಮವಿಶ್ವಾಸ ಮತ್ತು ಕಠಿಣ ಪರಿಶ್ರಮದಿಂದ ಸಿಎ ಪದವಿ ಪಡೆದ ಮಂಗಳೂರಿನ ಕೆನರಾ ಸಂಧ್ಯಾ ಕಾಲೇಜು ವಿದ್ಯಾರ್ಥಿಗಳು

20/07/2022, 21:36

ಮಂಗಳೂರು(reporterkarnataka.com):ಮೇ 2022ನೇ ವರ್ಷದಲ್ಲಿ ನಡೆದ ಸಿಎ ಅಂತಿಮ ಪರೀಕ್ಷೆಯಲ್ಲಿ ಉತ್ತೀರ್ಣರಾದ ಕೆನರಾ ಸಂಧ್ಯಾ ಕಾಲೇಜಿನ ಹಳೆಯ ವಿದ್ಯಾರ್ಥಿಗಳಾದ ಧನಂಜಯ್ ಶೇಟ್ ಹಾಗೂ ಗೌರವ ಭಟ್ ಅವರಿಗೆ   ಜುಲೈ  19, 2022 ರಂದು ಗೌರವಿಸಲಾಯಿತು.

“ನಾವು ಕೈಗೆತ್ತಿಕೊಂಡ ಕೆಲಸದಲ್ಲಿ ತೃಪ್ತಿ ಇರಬೇಕು, ಆತ್ಮವಿಶ್ವಾಸ , ನೈತಿಕತೆಯೊಂದಿಗೆ ಸಾಧನೆಯ ಹಾದಿಯಲ್ಲಿ ಬೆಂಬಲ ನೀಡಿದವರ ಸ್ಮರಣೆ ಸದಾ ಇದ್ದರೆ ಯಶಸ್ಸು ಖಚಿತ”  ಎಂದು ಕಾಲೇಜಿನ ಸಂಚಾಲಕ  ಸಿಎ ವಾಮನ್ ಕಾಮತ್ ಅವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ನುಡಿದರು.

ಸನ್ಮಾನ ಸ್ವೀಕರಿಸಿದ ವಿದ್ಯಾರ್ಥಿಗಳು ತಮ್ಮ ಯಶಸ್ಸಿನ ಗುಟ್ಟನ್ನು ಎಲ್ಲಾ ವಿದ್ಯಾರ್ಥಿಗಳ ಜೊತೆ ಹಂಚಿಕೊಂಡರು.

ಕಾಲೇಜಿನ ವಿದ್ಯಾರ್ಥಿನಿ ಸಹನಾ ಪ್ರಾರ್ಥನೆಗೈದರು, ಕಾಲೇಜಿನ ಪ್ರಾಂಶುಪಾಲರಾದ  ಪ್ರೊ. ಅನಿಲ್ ಕಾಮತ್ ಸ್ವಾಗತಿಸಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಉಷಾ ನಾಯಕ್ ವಂದಿಸಿದರು. ಆಂಗ್ಲ ಭಾಷಾ ವಿಭಾಗದ ಉಪನ್ಯಾಸಕಿ ರಿತಿಕಾ ದಾಸ್ ಕಾರ್ಯಕ್ರಮವನ್ನು ನಿರೂಪಿಸಿದರು.

ಈ ಸನ್ಮಾನ ಸಮಾರಂಭದಲ್ಲಿ ಕೆನರಾ ಆಡಳಿತ ಮಂಡಳಿಯ ಸದಸ್ಯರಾದ ಬಸ್ತಿ  ಪುರುಷೋತ್ತಮ ಶೆಣ್ಯೆ, ಟಿ. ಗೋಪಾಲಕೃಷ್ಣ ಶೆಣ್ಯೆ, ಸುರೇಶ್ ಕಾಮತ್, ಡಾ. ಪ್ರೇಮಲತಾ ವಿ, ಪ್ರಾಂಶುಪಾಲರು ಕೆನರಾ ಕಾಲೇಜು ಹಾಗೂ ಸಾಧನೆಗೈದ ವಿದ್ಯಾರ್ಥಿಗಳ ಹೆತ್ತವರೂ ಉಪಸ್ಥಿತರಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು