6:07 AM Friday16 - May 2025
ಬ್ರೇಕಿಂಗ್ ನ್ಯೂಸ್
ಗ್ರೇಟರ್ ಬೆಂಗಳೂರು ಆಡಳಿತ ಕಾಯ್ದೆಗೆ ರಾಜ್ಯಪಾಲರ ಅಂಕಿತ: ಇಂದಿನಿಂದ ಜಾರಿ; ಪ್ರಾಧಿಕಾರ ರಚನೆ ಮರದ ಕೊಂಬೆಗಳ ಮಧ್ಯೆ ಸಿಲುಕಿ ಗಂಭೀರ ಗಾಯಗೊಂಡಿದ್ದ ವ್ಯಕ್ತಿಯ ರಕ್ಷಣೆ: ಅಗ್ನಿಶಾಮಕ ದಳ… ಲೋಕಾಯುಕ್ತ ಅಧಿಕಾರಿಗಳಿಂದ ಮತ್ತೆ ಭ್ರಷ್ಟರ ಭೇಟೆ: ಬೆಂಗಳೂರು, ಮಂಗಳೂರು ಸಹಿತ 7 ನಗರಗಳ… ಮಂಗಳೂರು: ಸರ್ವೆ ಇಲಾಖೆಯ ಅಧಿಕಾರಿ ಮನೆ ಹಾಗೂ ಕಚೇರಿ ಮೇಲೆ ಲೋಕಾಯುಕ್ತ ದಾಳಿ;… Bangalore | ಗ್ರಾಹಕರ ದೂರು ನಿರ್ವಹಣೆಗೆ ಡಿಜಿಟಲ್ ಪೋರ್ಟಲ್: ಬೆಸ್ಕಾಂ ಎಂಡಿ ಡಾ.ಎನ್.… Bangalore | ಮೇ 15ರಂದು ಬಿಜೆಪಿಯಿಂದ ತಿರಂಗಾ ಯಾತ್ರೆ, ಪಕ್ಷದ ಚಿಹ್ನೆ ಪ್ರದರ್ಶನವಿಲ್ಲ Bangalore | ರಾಜ್ಯದ ಯೋಜನೆಗಳಿಗೆ ಕೇಂದ್ರ ಸರ್ಕಾರದ ಅನುದಾನ ಬಿಡುಗಡೆ: ಮಹತ್ವದ ಸಭೆ Bangalore | ಅಕ್ಟೋಬರ್ ನಲ್ಲಿ ಅಂಗನವಾಡಿ ಸುವರ್ಣ ಮಹೋತ್ಸವ ಆಚರಣೆ: ಸಚಿವೆ ಲಕ್ಷ್ಮೀ… ಮೋಸ್ಟ್‌ ವಾಂಟೆಡ್‌ ಉಗ್ರರನ್ನು ನಿರ್ನಾಮ ಮಾಡಿದ್ದೇವೆ: ಹುಬ್ಬಳ್ಳಿ ಎಬಿವಿಪಿ ಕಾರ್ಯಕ್ರಮದಲ್ಲಿ ಪ್ರಹ್ಲಾದ್ ಜೋಶಿ Chitradurga | ಕಂದಾಯ ಗ್ರಾಮ ರಚನೆ ಪ್ರಕ್ರಿಯೆ ಪೂರ್ಣಗೊಳಿಸಲು ಜೂನ್ 30ರ ಗಡುವು

ಇತ್ತೀಚಿನ ಸುದ್ದಿ

ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ!

21/07/2022, 10:43

ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ.

ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.

ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿತ ಕಂಡಿದ್ದು, ಮಾರುಕಟ್ಟೆಯು ದಕ್ಷಿಣ‌‌ ಭಾರತವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು