5:41 AM Thursday25 - June 2026
ಬ್ರೇಕಿಂಗ್ ನ್ಯೂಸ್
ಎಐ ತಂತ್ರಜ್ಞಾನದಲ್ಲಿ ಗೃಹಿಣಿಯ ಫೋಟೋ ಎಡಿಟ್; 30 ಲಕ್ಷಕ್ಕೆ ಬೇಡಿಕೆ; ಮಹಿಳೆ ಆತ್ಮಹತ್ಯೆಗೆ… ಟ್ರಾಫಿಕ್ ಸಮಸ್ಯೆಯಾಗಿದ್ದು ನಿಜ, ನೀಟ್ ವಿದ್ಯಾರ್ಥಿಗಳಿಗೆ ತೊಂದರೆಯಾಗಿದ್ದರೆ ಸಹಾಯ ಮಾಡ್ತೀವಿ: ಕೆಪಿಸಿಸಿ ಅಧ್ಯಕ್ಷ… ಚನ್ನಪಟ್ಟಣ | ಎಕ್ಸ್​ಪ್ರೆಸ್​ ರಸ್ತೆಯಲ್ಲಿ ಭೀಕರ ಅಪಘಾತ: ಕಾರಿನ ಚಕ್ರ ಸ್ಫೋಟಗೊಂಡು ಚಾಲಕ… ಹಸೆಮಣೆ ಏರಬೇಕಿದ್ದಾಕೆಗೆ ಪಾಪಿ ಯುವಕನಿಂದ ಬೆದರಿಕೆ: ಮಾನಕ್ಕೆ ಅಂಜಿ ಒಂದೇ ಕುಟುಂಬದ ಮೂವರು… ಚುನಾವಣೆಗಷ್ಟೇ ಅಲ್ಲ, ಸಿದ್ಧಾಂತದ ಬಲವರ್ಧನೆಗೆ ಕೆಪಿಸಿಸಿ ಅಧ್ಯಕ್ಷರಾಗಿ ಹರಿಪ್ರಸಾದ್ ಆಯ್ಕೆ: ಮಾಜಿ ಸಿಎಂ… ತೀರ್ಥಹಳ್ಳಿ | ಶಿವರಾಜಪುರ ಬಳಿ ಎರಡು ಕಾರುಗಳ ನಡುವೆ ಭೀಕರ ಅಪಘಾತ: ಸಂಪೂರ್ಣ… Bangalore | ಬಿಡದಿ ಟೌನ್‌ಶಿಪ್ ವಿರುದ್ಧ ನಿಖಿಲ್ ಕುಮಾರಸ್ವಾಮಿ ಪಾದಯಾತ್ರೆಗೆ ಗ್ರಾಮಸ್ಥರ ತಡೆ:… ಬೆಂಗಳೂರು ಅರಮನೆ ಮೈದಾನದಲ್ಲಿ ಬೃಹತ್ ಸಮಾರಂಭ: ಕೆಪಿಸಿಸಿ ಅಧ್ಯಕ್ಷ ಗದ್ದುಗೆ ಏರಿದ ಖಡಕ್… Bangalore | ನಾಗಸಂದ್ರ ಮೆಟ್ರೋ ನಿಲ್ದಾಣದ ತುರ್ತು ನಿರ್ಗಮನ ದ್ವಾರದಲ್ಲಿ ಶಾರ್ಟ್ ಸಕ್ಯೂಟ್;… ಮಸ್ಕಿ: ರಾಯಚೂರಿಗೆ AIIMS ಮಂಜೂರಾತಿಗಾಗಿ 1500 ದಿನಗಳ ಧರಣಿ ಸತ್ಯಾಗ್ರಹ: ಕಲ್ಯಾಣ ಕರ್ನಾಟಕದಾದ್ಯಂತ…

ಇತ್ತೀಚಿನ ಸುದ್ದಿ

ಅಸ್ಸಾಂ, ಮೇಘಾಲಯ ಭಾರಿ ಮಳೆ: ಮಂಗಳೂರು ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಕೆ: ಏರಿಕೆಯತ್ತ ಮುಖ ಮಾಡಿದ ಒಕ್ಕಣ್ಣ!

21/07/2022, 10:43

ಮಂಗಳೂರು(reporterkarnataka.com):.ಅಡಿಕೆ ಮಾರುಕಟ್ಟೆ ಮತ್ತೆ ಚೇತರಿಸಿಕೊಂಡಿದೆ. ಕಳೆದ 2 ತಿಂಗಳಿನಿಂದ ಸ್ಥಿರವಾಗಿದ್ದ ಮಂಗಳೂರು ಚಾಲಿ ಅಡಿಕೆ ಮಾರುಕಟ್ಟೆ ಧಾರಣೆ ಏರಿಕೆಯತ್ತ ಮುಖ ಮಾಡಿದೆ. ಖಾಸಗಿ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ಕೆ.ಜಿ.ಗೆ 450 ರೂ.ಗಳ ಅಂಚಿಗೆ ತಲುಪಿದೆ.

ಕ್ಯಾಂಪ್ಕೋಗೆ ಹೋಲಿಸಿದರೆ ಹೊರ ಮಾರುಕಟ್ಟೆಯಲ್ಲಿ ಹೊಸ ಅಡಿಕೆಗೆ ಕೆ.ಜಿ.ಗೆ 7 ರೂ., ಹಳೆ ಅಡಿಕೆಗೆ 10 ರೂ.ಗಳಷ್ಟು ಅಧಿಕ ಇದ್ದು ಬೆಳೆಗಾರರು ಹೊರ ಮಾರುಕಟ್ಟೆಯತ್ತ ದೃಷ್ಟಿ ನೆಟ್ಟಿದ್ದಾರೆ.

ಕಳೆದ ಬಾರಿ ಹೊರ ಮಾರುಕಟ್ಟೆ ಧಾರಣೆಗೆ ಸರಿಸಾಟಿಯಾಗಿ ಅಡಿಕೆ ಖರೀದಿ ಸಹಕಾರಿ ಸಂಸ್ಥೆಗಳು ಕೂಡ ಧಾರಣೆ ನೀಡಿದ್ದವು. ಇದರಿಂದ ದರ ಏರಿಕೆಯ ವಿಚಾರದಲ್ಲಿ ಪೈಪೋಟಿ ನಡೆದಿತ್ತು.

ಕೆಲವು ದಿನಗಳ ಹಿಂದೆ ಕ್ಯಾಂಪ್ಕೋದಲ್ಲಿ ಹೊಸ ಅಡಿಕೆಯನ್ನು 430 ರೂ., ಹಳೆ ಅಡಿಕೆಯನ್ನು 520 ರೂ.ಗೆ ಖರೀದಿಸಲಾಗುತ್ತಿತ್ತು. ಇದೀಗ ಧಾರಣೆ ಕೊಂಚ ಏರಿದೆ. ಜು. 11ರಂದು ಪುತ್ತೂರು ಕ್ಯಾಂಪ್ಕೋದಲ್ಲಿ ಹೊಸದಕ್ಕೆ 435-450 ರೂ. ಇದ್ದರೆ ಹಳೆಯದಕ್ಕೆ 510-550 ರೂ., ಜು. 19ರಂದು ಹೊಸದಕ್ಕೆ 440 ರೂ., ಹಳೆಯದಕ್ಕೆ 565 ರೂ. ಇತ್ತು. ಬೆಳ್ಳಾರೆ ಹೊರ ಮಾರುಕಟ್ಟೆಯಲ್ಲಿ ಜು. 11ರಂದು ಹೊಸದಕ್ಕೆ 442 ರೂ. ಇದ್ದರೆ ಹಳೆಯದಕ್ಕೆ 560 ರೂ. ಇತ್ತು. ಜು. 19ರಂದು ಕ್ರಮವಾಗಿ 447 ರೂ. ಮತ್ತು 565 ರೂ.ಗಳಲ್ಲಿತ್ತು.ಧಾರಣೆ ಏರಿದರೂ ಬೇಡಿಕೆಗೆ ತಕ್ಕಷ್ಟು ಅಡಿಕೆ ಮಾರುಕಟ್ಟೆಗೆ ಬರುತ್ತಿಲ್ಲ.

ಅಸ್ಸಾಂ, ಮೇಘಾಲಯ ಸೇರಿದಂತೆ ಉತ್ತರದ ಭಾಗದಲ್ಲಿ ಭಾರೀ ಮಳೆಯ ಕಾರಣ ಅಡಿಕೆ ವಹಿವಾಟು ಕುಸಿತ ಕಂಡಿದ್ದು, ಮಾರುಕಟ್ಟೆಯು ದಕ್ಷಿಣ‌‌ ಭಾರತವನ್ನು ಅವಲಂಬಿ ಸಿರುವುದು ಕೂಡ ಬೇಡಿಕೆ ಹೆಚ್ಚಳಕ್ಕೆ ಕಾರಣ ಎಂದು ಹೇಳಲಾಗುತ್ತಿದೆ.

ಇತ್ತೀಚಿನ ಸುದ್ದಿ

ಜಾಹೀರಾತು