6:16 AM Friday21 - August 2026
ಬ್ರೇಕಿಂಗ್ ನ್ಯೂಸ್
ಉಡುಪಿ | ಬಾಳೆಹಣ್ಣಿಗೆ ಹಾನಿಕಾರಕ ರಾಸಾಯನಿಕ ಬಳಕೆ: ದಾಸ್ತಾನು ಕೇಂದ್ರಗಳ ಮೇಲೆ ಎಸಿ… ಹನೂರು ಶೂಟೌಟ್ ಪ್ರಕರಣಕ್ಕೆ ಸ್ಫೋಟಕ ಟ್ವಿಸ್ಟ್​​: ಅಚ್ಚರಿಯ ಮಾಹಿತಿ ಬಹಿರಂಗ ತಾಕತ್ತಿದ್ರೆ ಸಂಘದ ಕಚೇರಿಯಲ್ಲಿ ರಾಷ್ಟ್ರಗೀತೆ ಹಾಡಲಿ: ಆರ್‌ಎಸ್‌ಎಸ್, ಬಿಜೆಪಿಗೆ ಕೆಪಿಸಿಸಿ ಅಧ್ಯಕ್ಷ ಬಿ.ಕೆ.… ವಿಜಯನಗರ: ಒಂದೇ ಕುಟುಂಬದ ಮೂವರು ಯುವಕರು ನೀರುಪಾಲು ದಾವಣಗೆರೆ: ಮಹಿಳೆಯ 9 ತಿಂಗಳ ಕೆಮ್ಮಿನ ರಹಸ್ಯ ಬಯಲಿಗೆಳೆದ ಆದಿಚುಂಚನಗಿರಿ ಆಸ್ಪತ್ರೆ ವೈದ್ಯರು ಕೊಡಗಿನಲ್ಲಿ ಮತ್ತೆ ಕಾಡಾನೆ ದಾಳಿ: ಕಾರ್ಮಿಕ ಬಲಿ; ಮತ್ತೋರ್ವ ಗಂಭೀರ ಗಾಯ ಭಾಗಮಂಡಲಕ್ಕೆ ಮಳೆ ನಡುವೆಯೇ ಬಂದ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಜಿಲ್ಲಾ ಉಸ್ತುವಾರಿ ಸಚಿವ ಜವಾಬ್ದಾರಿ ಬೇಡ: ದಿಢೀರನೇ ಸಿಎಂ ಡಿಕೆಶಿಗೆ ಸಚಿವ ಜಮೀರ್… ಕಾವಳಪಡೂರು: ನಿಷೇಧಿತ ಎಂಡಿಎಂಎ ಸೇರಿದಂತೆ 4.90 ಲಕ್ಷ ಮೌಲ್ಯದ ಮೌಲ್ಯದ ಸೊತ್ತು ವಶ;… ಎಚ್‌ಡಿಕೆ ದೊಡ್ಡ ನಾಟಕರತ್ನ: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಶಾಸಕ ಪ್ರದೀಪ್ ಈಶ್ವರ್…

ಇತ್ತೀಚಿನ ಸುದ್ದಿ

ಸರ್ವೆ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರ ಮರು ಸೇರ್ಪಡೆಗೆ ಸರಕಾರಕ್ಕೆ ಒತ್ತಾಯ

21/07/2022, 11:26

ವಿ.ಜಿ.ವೃಷಭೇಂದ್ರ ಕೂಡ್ಲಿಗಿ ವಿಜಯನಗರ

info.reporterkarnataka@gmail.com  

ವಿಜಯನಗರ ಜಿಲ್ಲೆ ಕೂಡ್ಲಿಗಿ ತಾಲೂಕಿನ ತಾಲೂಕ ಕಚೇರಿ ಮುಂದೆ ಕರ್ನಾಟಕ ರಾಜ್ಯ ದೇವದಾಸಿ ಮಹಿಳೆಯರ ವಿಮೋಚನ ಸಂಘ ಕೂಡ್ಲಿಗಿ ಇವರಿಂದ ತಹಶೀಲ್ದಾರ್ ಮುಖಾಂತರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವ ಹಾಲಪ್ಪ ಆಚಾರ್ ಅವರಿಗೆ ಮನವಿ ಸಲ್ಲಿಸಿ ಜಿಲ್ಲೆಯ ಕೂಡ್ಲಿಗಿ ಸರ್ವೆ ಪಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಲು ಒತ್ತಾಯಿಸಲಾಯಿತು.

ದೇವದಾಸಿಯರಿಗೆ ಒಂದು ವರ್ಷದಿಂದ ಬಾಕಿ ಇರುವ ಪೆನ್ಷನ್ ಹಣ ಕೂಡಲೇ ಬಿಡುಗಡೆ ಮಾಡಬೇಕು. ಸರ್ವೇ ಪಟ್ಟಿಯಿಂದ ಬಿಟ್ಟು ಹೋದ ದೇವದಾಸಿ ಮಹಿಳೆಯರನ್ನು ಸೇರ್ಪಡೆ ಮಾಡಲು ಒತ್ತಾಯಿಸಿ ಸರ್ಕಾರಕ್ಕೆ ಎಚ್ಚರಿಕೆ ಕೊಡುವುದರ ಮೂಲಕ ಮನವಿ ಪತ್ರವನ್ನು ತಹಶೀಲ್ದಾರರ ಸಮ್ಮುಖದಲ್ಲಿ ಉಪ ತಹಶಿಲ್ದಾರ್  ಸ್ವೀಕರಿಸಿದರು. ಈ ಸಂದರ್ಭದಲ್ಲಿ ದೇವದಾಸಿಯರ ಬೇಡಿಕೆಗಳಾದ ಒಂದು ವರ್ಷದಿಂದ ಬಾಕಿ ಪೆನ್ಷನ್ ಹಣ ಬಿಡುಗಡೆ ಮಾಡಬೇಕು, ಸರ್ಕಾರವೇ ಘೋಷಣೆ ಮಾಡಿದ ಪೆನ್ಷನ್ 500 ಜಾರಿ ಮಾಡಬೇಕು ಹಾಗೂ ಸರ್ವೆಪಟ್ಟಿಯಿಂದ ಬಿಟ್ಟು ಹೋದಂತೆ ಮಹಿಳೆಯರನ್ನು ಪುನಃ ಸರ್ವೇಪಟ್ಟಿಗೆ ಸೇರ್ಪಡೆ ಮಾಡಬೇಕು ಹಾಗೂ ಎಲ್ಲಾ ದೇವದಾಸಿ ಮಹಿಳೆಯರಿಗೆ ಉಪಕಸುಬು ಮಾಡಲು 5 ಲಕ್ಷ ಸಾಲ ಸೌಲಭ್ಯ ನೀಡಬೇಕು. ಇದರಲ್ಲಿ ಶೇಕಡ 25ರಷ್ಟು ಹಾಗೂ ಪ್ರತಿದಿನ ಕುಟುಂಬಕ್ಕೆ 80*80 ಚದರ ಅಡಿಯ ಜಾಗ ನೀಡಿ ನಿವೇಶನ ವಸತಿ ಕಲ್ಪಿಸಬೇಕು, ದೇವದಾಸಿ ಮಹಿಳೆಯರಿಗೆ ಕೃಷಿಗೆ ಯೋಗ್ಯವಾದ 5 ಎಕರೆ ಭೂಮಿಯನ್ನು ಕೊಡಬೇಕು, ದೇವದಾಸಿ ಪದ್ಧತಿ ನಿರ್ಮೂಲನೆ ಮಾಡಲು ಕಟ್ಟುನಿಟ್ಟಿನ ಕಾನೂನು ಕ್ರಮ ತೆಗೆದುಕೊಳ್ಳಬೇಕು, ಹೀಗೆ ಹತ್ತಾರು ಬೇಡಿಕೆಗಳನ್ನು ಈಡೇರಿಸಲು ಮನವಿ ಪತ್ರ ಸಲ್ಲಿಸಲಾಯಿತು. 

ಈ ಸಂದರ್ಭದಲ್ಲಿ ದೇವದಾಸಿ ವಿಮೋಚನ ಸಂಘದ ತಾಲೂಕು ಅಧ್ಯಕ್ಷರಾದ ಕನಕೇರಿ ವೆಂಕಮ್ಮ ಅವರು ಮಾತನಾಡಿ ಸರ್ಕಾರಕ್ಕೆ ಎಚ್ಚರಿಕೆ ನೀಡಿದರು ಹಾಗೂ ಈ ಸಂದರ್ಭದಲ್ಲಿ ಸಿಐಟಿಯು ಜಿಲ್ಲಾ ಕಾರ್ಯದರ್ಶಿಯಾದ ಗುನ್ನಳ್ಳಿ ರಾಘವೇಂದ್ರ ಹಾಗೂ ತಾಲೂಕು ದೇವದಾಸಿ ಸಂಘದ ಕಾರ್ಯದರ್ಶಿಯಾದ ದುರ್ಗಮ್ಮ, ದೇವಕ್ಕ, ಹುಲಿಗಮ್ಮ, ಬಸಮ್ಮ, ಉಚ್ಚೆಂಗಮ್ಮ, ಸೋಮಕ್ಕ, ವಿಜಯಮ್ಮ, ಅಂಜಿನಮ್ಮ ಸೇರಿದಂತೆ‌ ಇನ್ನು ಮುಂತಾದವರು  ಭಾಗವಹಿಸಿದ್ದರು.

ಇತ್ತೀಚಿನ ಸುದ್ದಿ

ಜಾಹೀರಾತು